ನೀತಿ ಆಯೋಗ 
ದೇಶ

ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕ 2020-21: ಕೇರಳಕ್ಕೆ ಪ್ರಥಮ, ಬಿಹಾರಕ್ಕೆ ಕೊನೆಯ ಸ್ಥಾನ

ಕೇಂದ್ರ ನೀತಿ ಆಯೋಗ ಎಸ್‌ಡಿಜಿ ಇಂಡಿಯಾ ಇಂಡೆಕ್ಸ್ 2020-21ರ ವರದಿ ಬಿಡುಗಡೆ ಮಾಡಿದ್ದು, ವರದಿಯಲ್ಲಿ ಕೇರಳ ಪ್ರಥಮ ಸ್ಥಾನದಲ್ಲಿದ್ದು ಅಂತಿಮ ಸ್ಥಾನದಲ್ಲಿ ಬಿಹಾರ ರಾಜ್ಯವಿದೆ.

ನವದೆಹಲಿ: ಕೇಂದ್ರ ನೀತಿ ಆಯೋಗ ಎಸ್‌ಡಿಜಿ ಇಂಡಿಯಾ ಇಂಡೆಕ್ಸ್ 2020-21ರ ವರದಿ ಬಿಡುಗಡೆ ಮಾಡಿದ್ದು, ವರದಿಯಲ್ಲಿ ಕೇರಳ ಪ್ರಥಮ ಸ್ಥಾನದಲ್ಲಿದ್ದು ಅಂತಿಮ ಸ್ಥಾನದಲ್ಲಿ ಬಿಹಾರ ರಾಜ್ಯವಿದೆ.

ಸಾಮಾಜಿಕ, ಆರ್ಥಿಕ ಮತ್ತು ಪರಿಸರ ಅಭಿವೃದ್ಧಿ ನಿಯತಾಂಕಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಗತಿಯನ್ನು ಸುಸ್ಥಿರ ಅಭಿವೃದ್ಧಿ ಗುರಿಗಳ ಸೂಚ್ಯಂಕ (ಎಸ್‌ಡಿಜಿ) ಮೌಲ್ಯಮಾಪನ ಮಾಡಿದ್ದು, ಕೇರಳ ರಾಜ್ಯ 75 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದು, ಹಿಮಾಚಲ ಪ್ರದೇಶ ಮತ್ತು ತಮಿಳುನಾಡು  ಎರಡೂ ರಾಜ್ಯಗಳು ತಲಾ 74 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿವೆ. ಇನ್ನು ಪಟ್ಟಿಯಲ್ಲಿ ಬಿಹಾರ, ಜಾರ್ಖಂಡ್ ಮತ್ತು ಅಸ್ಸಾಂ ಅತ್ಯಂತ ಕೆಟ್ಟ ಪ್ರದರ್ಶನದೊಂದಿಗೆ ಅಂತಿಮ ಸ್ಥಾನಗಳಲ್ಲಿವೆ. 

ಭಾರತದ ಎಸ್‌ಡಿಜಿ ಸೂಚ್ಯಂಕದ ಮೂರನೇ ಆವೃತ್ತಿ ಪ್ರಕ್ರಿಯೆಯನ್ನು ನೀತಿ ಆಯೋಗ ಉಪಾಧ್ಯಕ್ಷ ರಾಜೀವ್ ಕುಮಾರ್ ಗುರುವಾರ ಪ್ರಾರಂಭಿಸಿದರು. ಈ ವೇಳೆ ಮಾತನಾಡಿದ ಅವರು, 'ಎಸ್‌ಡಿಜಿ ಇಂಡಿಯಾ ಇಂಡೆಕ್ಸ್ ಮೇಲ್ವಿಚಾರಣೆ ಮಾಡುವ ನಮ್ಮ ಪ್ರಯತ್ನಕ್ಕೆ ಜಾಗತಿಕವಾಗಿ ವೀಕ್ಷಣೆ ಮಾಡಲಾಗುತ್ತಿದ್ದು,  ಜಗತ್ತಿನ ಹಲವು ರಾಷ್ಟ್ರಗಳು ನಮ್ಮ ಪ್ರಯತ್ನವನ್ನು ಶ್ಲಾಘಿಸುತ್ತಿವೆ. ಎಸ್‌ಡಿಜಿಗಳಲ್ಲಿ ಸಂಯೋಜಿತ ಸೂಚಿಯನ್ನು ಲೆಕ್ಕಾಚಾರ ಮಾಡುವ ಮೂಲಕ ನಮ್ಮ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಶ್ರೇಣೀಕರಿಸುವ ಅಪರೂಪದ ದತ್ತಾಂಶ-ಚಾಲಿತ ಉಪಕ್ರಮವಾಗಿ ಇದು ಉಳಿದಿದೆ ಎಂದು ಹೇಳಿದರು.

2018 ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಪ್ರಾರಂಭವಾದ ಈ ಸೂಚ್ಯಂಕವು ದೇಶದ ಎಸ್‌ಡಿಜಿಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುವ ಪ್ರಾಥಮಿಕ ಸಾಧನವಾಗಿ ಮಾರ್ಪಟ್ಟಿದೆ. ಅಲ್ಲದೆ ಏಕಕಾಲದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನಡುವೆ ಜಾಗತಿಕ ಗುರಿಗಳ ಮೇಲೆ ಸ್ಥಾನ ನೀಡುವ  ಮೂಲಕ ಸ್ಪರ್ಧೆಯನ್ನು ಬೆಳೆಸಿದೆ. ಭಾರತದಲ್ಲಿನ ವಿಶ್ವಸಂಸ್ಥೆಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದ ಸೂಚ್ಯಂಕವು ಜಾಗತಿಕ ಗುರಿಗಳು ಮತ್ತು ಗುರಿಗಳನ್ನು ಪೂರೈಸುವತ್ತ ದೇಶದ ಪ್ರಯಾಣದಲ್ಲಿ ರಾಷ್ಟ್ರೀಯ ಮತ್ತು ಉಪ-ರಾಷ್ಟ್ರೀಯ ಮಟ್ಟದಲ್ಲಿ ಪ್ರಗತಿಯನ್ನು ಈ ಸೂಚ್ಯಂಕವು ಅಳೆಯುತ್ತದೆ. 

ಇನ್ನು 2018-19ರಲ್ಲಿ ಮೊದಲ ಆವೃತ್ತಿಯು 13 ಸವಾಲುಗಳು, 39 ಗುರಿಗಳು ಮತ್ತು 62 ಸೂಚಕಗಳನ್ನು ಒಳಗೊಂಡಿದ್ದರೆ, ಎರಡನೇ ಆವೃತ್ತಿಯು 17 ಸವಾಲುಗಳು, 54 ಗುರಿಗಳು ಮತ್ತು 100 ಸೂಚಕಗಳನ್ನು ಮತ್ತು ಈ ಮೂರನೇ ಆವೃತ್ತಿಯು 17 ಗೋಲುಗಳು, 70 ಗುರಿಗಳು ಮತ್ತು 115 ಸೂಚಕಗಳನ್ನು ಒಳಗೊಂಡಿದೆ.

2030 ರ ವೇಳೆಗೆ 1730 ಗುರಿಗಳನ್ನು ಮತ್ತು 169 ಸಂಬಂಧಿತ ಗುರಿಗಳನ್ನು ಸಾಧಿಸುವ ಗುರಿ ಹೊಂದಲಾಗಿದೆ. 

ಎಸ್‌ಡಿಜಿಗಳು ವಿಶ್ವ ನಾಯಕರ ಮಹತ್ವಾಕಾಂಕ್ಷೆಯ ಬದ್ಧತೆಯಾಗಿದ್ದು ಅದು ಸಮಾಜಗಳ ಯೋಗಕ್ಷೇಮದ ಆರ್ಥಿಕ, ಪರಿಸರ ಮತ್ತು ಸಾಮಾಜಿಕ ಅಂಶಗಳನ್ನು ಅಳವಡಿಸಿಕೊಳ್ಳುವ ಸಾರ್ವತ್ರಿಕ ಮತ್ತು ಅಭೂತಪೂರ್ವ ಕಾರ್ಯಸೂಚಿಯನ್ನು ರೂಪಿಸುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ

ಮಡಿಕೇರಿ: 3 ದಿನಗಳಾದರೂ ಪತ್ತೆಯಾಗದ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಯುವತಿ, ANF ನಿಂದ ತೀವ್ರ ಹುಡುಕಾಟ

ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ರಕ್ಷಿಸಿದರೆ, ಮೋದಿ ಸರ್ಕಾರ ಜನರ ಜೇಬು ಕತ್ತರಿಸುತ್ತಿದೆ: ರಂದೀಪ್ ಸಿಂಗ್ ಸುರ್ಜೆವಾಲಾ

SCROLL FOR NEXT