ಮುಂಬೈ ಪೊಲೀಸ್ 
ದೇಶ

ಇಂದಿನಿಂದ ಮಹಾರಾಷ್ಟ್ರದ 36 ಜಿಲ್ಲೆಗಳ ಪೈಕಿ 18 ಜಿಲ್ಲೆಗಳು ಲಾಕ್‌ಡೌನ್ ಮುಕ್ತ!

ಪಾಸಿಟಿವ್ ದರ ಮತ್ತು ವೆಂಟಿಲೇಟರ್ ಹಾಸಿಗೆಯ ಬಳಕೆ ಗಣನೀಯವಾಗಿ ಕುಸಿದಿರುವ ಹಿನ್ನೆಯಲ್ಲಿ ಮಹಾರಾಷ್ಟ್ರದ 36 ಜಿಲ್ಲೆಗಳ ಪೈಕಿ 18ರಲ್ಲಿ ಕೊರೋನಾ ಪ್ರೇರಿತ ನಿರ್ಬಂಧಗಳನ್ನು ಶುಕ್ರವಾರದಿಂದ ತೆಗೆದು ಹಾಕಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಮುಂಬೈ: ಪಾಸಿಟಿವ್ ದರ ಮತ್ತು ವೆಂಟಿಲೇಟರ್ ಹಾಸಿಗೆಯ ಬಳಕೆ ಗಣನೀಯವಾಗಿ ಕುಸಿದಿರುವ ಹಿನ್ನೆಯಲ್ಲಿ ಮಹಾರಾಷ್ಟ್ರದ 36 ಜಿಲ್ಲೆಗಳ ಪೈಕಿ 18ರಲ್ಲಿ ಕೊರೋನಾ ಪ್ರೇರಿತ ನಿರ್ಬಂಧಗಳನ್ನು ಶುಕ್ರವಾರದಿಂದ ತೆಗೆದು ಹಾಕಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಗುರುವಾರ ಇಲ್ಲಿ ನಡೆದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ನಂತರ ವಿಪತ್ತು ನಿರ್ವಹಣಾ ಸಚಿವ ವಿಜಯ್ ವಾಡೆಟ್ಟಿವಾರ್ ಈ ಘೋಷಣೆ ಮಾಡಿದ್ದಾರೆ.

ಕೊರೋನಾ ಎರಡನೇ ಅಲೆ ತೀವ್ರಗೊಂಡಾಗ ಈ ವರ್ಷದ ಏಪ್ರಿಲ್‌ನಲ್ಲಿ ವಿಧಿಸಲಾದ ಲಾಕ್‌ಡೌನ್ ತರಹದ ನಿರ್ಬಂಧಗಳನ್ನು 18 ಜಿಲ್ಲೆಗಳಲ್ಲಿ ತೆಗೆದುಹಾಕಲಾಗುವುದು. ಅಲ್ಲಿ ಸಕಾರಾತ್ಮಕ ಪ್ರಮಾಣವು ಶೇಕಡ 5ರಷ್ಟು  ಅಥವಾ ಅದಕ್ಕಿಂತ ಕಡಿಮೆ ಆಗಿದೆ. ಅಲ್ಲದೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಹಾಸಿಗೆಗಳ ವಾಸವು 25 ಪ್ರತಿಶತಕ್ಕಿಂತ ಕಡಿಮೆಯಿದೆ ಎಂದು ಹೇಳಿದರು.

ಹೀಗಾಗಿ ಔರಂಗಾಬಾದ್, ಭಂಡಾರ, ಬುಲ್ಖಾನಾ, ಚಂದ್ರಪುರ, ಧುಲೆ, ಗಡ್ಚಿರೋಲಿ, ಗೊಂಡಿಯಾ, ಜಲ್ಗಾಂವ್, ಜಲ್ನಾ, ಲಾತೂರ್, ನಾಗ್ಪುರ, ನಾಂದೇಡ್, ನಾಸಿಕ್, ಯವತ್ಮಾಲ್, ವಾಶಿಮ್, ವಾರ್ಧಾ, ಪರಭಾನಿ ಮತ್ತು ಥಾಣೆ. ಈ ಜಿಲ್ಲೆಗಳಲ್ಲಿ ಎಲ್ಲ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದರು.

ಮುಂಬಯಿಯಲ್ಲಿನ ನಿರ್ಬಂಧಗಳನ್ನು ಭಾಗಶಃ ಸಡಿಲಗೊಳಿಸಲಾಗುವುದು. ಆದರೆ ಸ್ಥಳೀಯ ರೈಲುಗಳ ಪ್ರಯಾಣ, ರಾಜ್ಯ ರಾಜಧಾನಿಯ ಜೀವಸೆಲೆ ಈಗಿನಂತೆ ಸಾರ್ವಜನಿಕರಿಗೆ ಮುಕ್ತವಾಗುವುದಿಲ್ಲ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್