ಮುಂಬೈ ಪೊಲೀಸ್ 
ದೇಶ

ಇಂದಿನಿಂದ ಮಹಾರಾಷ್ಟ್ರದ 36 ಜಿಲ್ಲೆಗಳ ಪೈಕಿ 18 ಜಿಲ್ಲೆಗಳು ಲಾಕ್‌ಡೌನ್ ಮುಕ್ತ!

ಪಾಸಿಟಿವ್ ದರ ಮತ್ತು ವೆಂಟಿಲೇಟರ್ ಹಾಸಿಗೆಯ ಬಳಕೆ ಗಣನೀಯವಾಗಿ ಕುಸಿದಿರುವ ಹಿನ್ನೆಯಲ್ಲಿ ಮಹಾರಾಷ್ಟ್ರದ 36 ಜಿಲ್ಲೆಗಳ ಪೈಕಿ 18ರಲ್ಲಿ ಕೊರೋನಾ ಪ್ರೇರಿತ ನಿರ್ಬಂಧಗಳನ್ನು ಶುಕ್ರವಾರದಿಂದ ತೆಗೆದು ಹಾಕಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಮುಂಬೈ: ಪಾಸಿಟಿವ್ ದರ ಮತ್ತು ವೆಂಟಿಲೇಟರ್ ಹಾಸಿಗೆಯ ಬಳಕೆ ಗಣನೀಯವಾಗಿ ಕುಸಿದಿರುವ ಹಿನ್ನೆಯಲ್ಲಿ ಮಹಾರಾಷ್ಟ್ರದ 36 ಜಿಲ್ಲೆಗಳ ಪೈಕಿ 18ರಲ್ಲಿ ಕೊರೋನಾ ಪ್ರೇರಿತ ನಿರ್ಬಂಧಗಳನ್ನು ಶುಕ್ರವಾರದಿಂದ ತೆಗೆದು ಹಾಕಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಗುರುವಾರ ಇಲ್ಲಿ ನಡೆದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ನಂತರ ವಿಪತ್ತು ನಿರ್ವಹಣಾ ಸಚಿವ ವಿಜಯ್ ವಾಡೆಟ್ಟಿವಾರ್ ಈ ಘೋಷಣೆ ಮಾಡಿದ್ದಾರೆ.

ಕೊರೋನಾ ಎರಡನೇ ಅಲೆ ತೀವ್ರಗೊಂಡಾಗ ಈ ವರ್ಷದ ಏಪ್ರಿಲ್‌ನಲ್ಲಿ ವಿಧಿಸಲಾದ ಲಾಕ್‌ಡೌನ್ ತರಹದ ನಿರ್ಬಂಧಗಳನ್ನು 18 ಜಿಲ್ಲೆಗಳಲ್ಲಿ ತೆಗೆದುಹಾಕಲಾಗುವುದು. ಅಲ್ಲಿ ಸಕಾರಾತ್ಮಕ ಪ್ರಮಾಣವು ಶೇಕಡ 5ರಷ್ಟು  ಅಥವಾ ಅದಕ್ಕಿಂತ ಕಡಿಮೆ ಆಗಿದೆ. ಅಲ್ಲದೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಹಾಸಿಗೆಗಳ ವಾಸವು 25 ಪ್ರತಿಶತಕ್ಕಿಂತ ಕಡಿಮೆಯಿದೆ ಎಂದು ಹೇಳಿದರು.

ಹೀಗಾಗಿ ಔರಂಗಾಬಾದ್, ಭಂಡಾರ, ಬುಲ್ಖಾನಾ, ಚಂದ್ರಪುರ, ಧುಲೆ, ಗಡ್ಚಿರೋಲಿ, ಗೊಂಡಿಯಾ, ಜಲ್ಗಾಂವ್, ಜಲ್ನಾ, ಲಾತೂರ್, ನಾಗ್ಪುರ, ನಾಂದೇಡ್, ನಾಸಿಕ್, ಯವತ್ಮಾಲ್, ವಾಶಿಮ್, ವಾರ್ಧಾ, ಪರಭಾನಿ ಮತ್ತು ಥಾಣೆ. ಈ ಜಿಲ್ಲೆಗಳಲ್ಲಿ ಎಲ್ಲ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದರು.

ಮುಂಬಯಿಯಲ್ಲಿನ ನಿರ್ಬಂಧಗಳನ್ನು ಭಾಗಶಃ ಸಡಿಲಗೊಳಿಸಲಾಗುವುದು. ಆದರೆ ಸ್ಥಳೀಯ ರೈಲುಗಳ ಪ್ರಯಾಣ, ರಾಜ್ಯ ರಾಜಧಾನಿಯ ಜೀವಸೆಲೆ ಈಗಿನಂತೆ ಸಾರ್ವಜನಿಕರಿಗೆ ಮುಕ್ತವಾಗುವುದಿಲ್ಲ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT