ಮಾಯಾವತಿ 
ದೇಶ

ಪಂಚಾಯಿತಿ ಚುನಾವಣೆಯಲ್ಲಿ  ಪಕ್ಷ ವಿರೋಧಿ ಚಟುವಟಿಕೆ: ಇಬ್ಬರು ಬಿಎಸ್ ಪಿ ಶಾಸಕರ ಉಚ್ಛಾಟನೆ

ಇತ್ತೀಚೆಗೆ ನಡೆದ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದ ಮೇಲೆ ಇಬ್ಬರು ಬಿಎಸ್ ಪಿ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಲಕ್ನೋ: ಇತ್ತೀಚೆಗೆ ನಡೆದ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದ ಮೇಲೆ ಇಬ್ಬರು ಬಿಎಸ್ ಪಿ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಲಾಲ್ ಜಿ ವರ್ಮಾ ಮತ್ತು ರಾಮ್ ಅಚಲ್ ರಾಜ್ಬರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ವರ್ಮಾ ಅವರನ್ನು ಶಾಸಕಾಂಗ ಪಕ್ಷದ ಮುಖಂಡ ಸ್ಥಾನದಿಂದ ತೆಗೆದುಹಾಕಲಾಗಿದೆ ಮತ್ತು ಶಾ ಆಲಂ ಅಲಿಯಾಸ್ ಗುಡ್ಡು ಜಮಾಲಿ ಅವರನ್ನು ರಾಜ್ಯ ವಿಧಾನಸಭೆಯಲ್ಲಿ ಪಕ್ಷದ ನಾಯಕರಾಗಿ ನೇಮಕ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಲಾಲ್ಜಿ ವರ್ಮಾ ಅವರು ಕತೇರಿ ಸ್ಥಾನದಿಂದ ಬಿಎಸ್ಪಿ ಶಾಸಕರಾಗಿದ್ದರೆ, ಶ್ರೀ ರಾಜ್ಭರ್ ಅವರು ರಾಜ್ಯದ ಅಂಬೇಡ್ಕರ್ ನಗರ ಜಿಲ್ಲೆಯ ಅಕ್ಬರ್ಪುರ ಸ್ಥಾನದ ಶಾಸಕರಾಗಿದ್ದಾರೆ. ಹೊಸದಾಗಿ ನೇಮಕಗೊಂಡ ಶಾಸಕಾಂಗ ಪಕ್ಷದ ನಾಯಕ ಶಾ ಆಲಂ ಅವರು ಅಜಮ್‌ಘರ್ ಜಿಲ್ಲೆಯ ಮುಬಾರಕ್‌ಪುರ ಕ್ಷೇತ್ರದ ಶಾಸಕರಾಗಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT