ರೈತರ ಪ್ರತಿಭಟನೆಯ ಸಾಂದರ್ಭಿಕ ಚಿತ್ರ 
ದೇಶ

ನಾಳೆ ದೇಶಾದ್ಯಂತ ಬಿಜೆಪಿ ಸಂಸದರು, ಶಾಸಕರ ನಿವಾಸಗಳ ಹೊರಗೆ ರೈತರ ಪ್ರತಿಭಟನೆ!

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಆರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು, ನಾಳೆ ದೇಶಾದ್ಯಂತ ಬಿಜೆಪಿ ಶಾಸಕರ ನಿವಾಸದ ಹೊರಗಡೆ ಪ್ರದರ್ಶನ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ಪದಾಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.

ಗಾಜಿಯಾಬಾದ್: ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಆರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು, ನಾಳೆ ದೇಶಾದ್ಯಂತ ಬಿಜೆಪಿ ಶಾಸಕರ ನಿವಾಸದ ಹೊರಗಡೆ ಪ್ರದರ್ಶನ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ಪದಾಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಸುಗ್ರೀವಾಜ್ಞೆಗಳನ್ನಾಗಿ ತಂದ ಒಂದು ವರ್ಷದ ಅಂಗವಾಗಿ ಭಾರತೀಯ ಜನತಾ ಪಕ್ಷದ ಸಂಸದರು, ಶಾಸಕರ ನಿವಾಸದ ಹೊರಗಡೆ ಪ್ರತಿಭಟನೆ ನಡೆಸಲಾಗುವುದು ಎಂದು ಅಧಿಕೃತ ಮಾಹಿತಿಗಳು ತಿಳಿಸಿವೆ.

ಕೇಂದ್ರ ಸರ್ಕಾರದ ವಿರುದ್ಧದ ಸಾಂಕೇತಿಕ ಪ್ರತಿಭಟನೆಯಾಗಿ ದೇಶಾದ್ಯಂತ ಬಿಜೆಪಿ ಸಂಸದರು ಹಾಗೂ ಶಾಸಕರ ನಿವಾಸದ ಹೊರಗಡೆ ಕಾನೂನು ಪ್ರತಿಗಳನ್ನು ಪ್ರತಿಭಟನಾಕಾರರು ಸುಡಲಿದ್ದಾರೆ ಎಂದು ಬಿಕೆಯು ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲ್ಲಿಕ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಜಿಲ್ಲೆಗಳಲ್ಲಿ ಬಿಜೆಪಿ ಶಾಸಕರು, ಸಂಸದರ ನಿವಾಸದ ಹೊರಗಡೆ ಪ್ರತಿಭಟನೆ ನಡೆಸುವುದಿಲ್ಲ, ಜಿಲ್ಲಾಧಿಕಾರಿಗಳ ಕಚೇರಿ ಹೊರಗಡೆ ಪ್ರತಿಭಟನೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನವೆಂಬರ್ 2020ರಿಂದ ದೆಹಲಿ ಗಡಿಯಲ್ಲಿ ಬಿಡು ಬಿಟ್ಟಿರುವ ರೈತರ ಅಸೋಸಿಯೇಷನ್ ಮತ್ತು ಯೂನಿಯನ್ ಮುಖಂಡರ ಇತ್ತೀಚಿನ ಸಭೆಯಲ್ಲಿ ನಾಳೆ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT