ಸಂಗ್ರಹ ಚಿತ್ರ 
ದೇಶ

ಹೈಕೋರ್ಟ್ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಗುಜರಾತ್ ಚಹಾ ವ್ಯಾಪಾರಿಗೆ 18 ತಿಂಗಳು ಜೈಲು ಶಿಕ್ಷೆ!

2012 ರಲ್ಲಿ ಹೈಕೋರ್ಟ್ ನ್ಯಾಯಾಧೀಶರೊಬ್ಬರತ್ತ ಚಪ್ಪಲಿ ಎಸೆದಿದ್ದ ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಚಹಾ ಮಾರಾಟಗಾರನಿಗೆ 18 ತಿಂಗಳ ಜೈಲು ಶಿಕ್ಷೆ ಆಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಶಿಕ್ಷೆ ವಿಧಿಸಿದೆ.

ಅಹಮದಾಬಾದ್: 2012 ರಲ್ಲಿ ಹೈಕೋರ್ಟ್ ನ್ಯಾಯಾಧೀಶರೊಬ್ಬರತ್ತ ಚಪ್ಪಲಿ ಎಸೆದಿದ್ದ ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಚಹಾ ಮಾರಾಟಗಾರನಿಗೆ 18 ತಿಂಗಳ ಜೈಲು ಶಿಕ್ಷೆ ಆಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಶಿಕ್ಷೆ ವಿಧಿಸಿದೆ.

ಮಿರ್ಜಾಪುರ ಗ್ರಾಮೀಣ ನ್ಯಾಯಾಲಯದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿ ಎ ಧಧಲ್ ಗುರುವಾರ ಐಪಿಸಿ ಸೆಕ್ಷನ್ 353 (ಸರ್ಕಾರಿ ನೌಕರನ ಮೇಲೆ ಕರ್ತವ್ಯ ನಿರ್ವಹಿಸದಂತೆ ತಡೆಯಲು ಹಲ್ಲೆ) ಅಡಿಯಲ್ಲಿ ಆರೋಪಕ್ಕೆ ಭವಾನಿ ದಾಸ್ ಬಾವಾಜಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿ ಶಿಕ್ಷೆ ವಿಧಿಸಿದ್ದಾರೆ.

ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ಬಾವಾಜಿ ತಮ್ಮ ಪ್ರಕರಣ ದೀರ್ಘಾವಧಿಯಿಂದ ಇತ್ಯರ್ಥವಾಗದೆ ಇರುವ ಬಗ್ಗೆ ಹತಾಶೆಗೊಂಡು ನ್ಯಾಯಾಧೀಶರತ್ತ ತನ್ನ ಚಪ್ಪಲಿ ಎಸೆದಿದ್ದೆ ಎಂದು ಹೇಳೊಕೊಂಡಿದ್ದನು.

ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆಯುವ ಕ್ರಿಯೆ "ಅತ್ಯಂತ ಖಂಡನೀಯ" ಎಂದು ಗಮನಿಸಿದ ಮ್ಯಾಜಿಸ್ಟ್ರೇಟ್ ಬಾವಾಜಿಗೆ ಉತ್ತಮ ನಡವಳಿಕೆಗಾಗಿ ತಿದ್ದಿಕೊಳ್ಳಲು ಅವಕಾಶ ನೀಡಲು ನಿರಾಕರಿಸಿದರು. 

ರಾಜ್‌ಕೋಟ್‌ನ ಭಯವದರ್ ಪಟ್ಟಣದ ನಿವಾಸಿ ಬಾವಾಜಿಗೆ 18 ತಿಂಗಳ ಸರಳ ಜೈಲು ಶಿಕ್ಷೆಯನ್ನು ಮ್ಯಾಜಿಸ್ಟ್ರೇಟ್ ವಿಧಿಸಿದ್ದು, ಅವನ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ ಆತನ ಮೇಲೆ ಯಾವುದೇ ದಂಡ ವಿಧಿಸಿಲ್ಲ.

ಪ್ರಕರಣದ ವಿವರದಂತೆ ಆರೋಪಿ 2012 ರ ಏಪ್ರಿಲ್ 11 ರಂದು ವಿಚಾರಣೆಯ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ಕೆ ಎಸ್. ಝವೇರಿ ಅವರತ್ತ ತನ್ನ ಚಪ್ಪಲಿ ಎಸೆದಿದ್ದ. ಅದೃಷ್ಟವಶಾತ್, ನ್ಯಾಯಮೂರ್ತಿಗಳಿಗೆ ಆ ಚಪ್ಪಲಿ ತಾಕಲಿಲ್ಲ. ನ್ಯಾಯಾಧೀಶರು ಈ ಕೃತ್ಯದ ಕಾರಣವನ್ನು ಕೇಳಿದಾಗ, ಬಾವಾಜಿ  ಹತಾಶೆಯಿಂದ ಇದನ್ನು ಮಾಡಿದ್ದಾಗಿ ಹೇಳಿದ್ದಾನೆ. ಏಕೆಂದರೆ ಅವನ ಪ್ರಕರಣವು ಬಹಳ ಹಿಂದಿನಿಂದಲೂ ವಿಚಾರಣೆಗೆ ಬರಲಿಲ್ಲ. ನಂತರ ಬಾವಾಜಿಯನ್ನು  ಸೋಲಾ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು, ಅಲ್ಲಿ ಪಿಸಿಯ ಸೆಕ್ಷನ್ 186 ಮತ್ತು 353 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಬಾವಾಜಿ ಭಯವದರ್‌ನಲ್ಲಿ ರಸ್ತೆ ಬದಿಯ ಚಹಾ ಅಂಗಡಿಯೊಂದನ್ನು ನಡೆಸುತ್ತಿದ್ದು  ಭಯವದರ್ ಪುರಸಭೆಯು ಸ್ಟಾಲ್ ಅನ್ನು ಅಲ್ಲಿಂದ ತೆರವುಗೊಳಿಸುವಂತೆ ಕೇಳಲು ಬಾವಾಜಿ  ಗೊಂಡಾಲ್ ಸೆಷನ್ಸ್ ನ್ಯಾಯಾಲಯದಿಂದ ನಾಗರಿಕ ಸಂಸ್ಥೆಯ ವಿರುದ್ಧ ತಡೆ ಆದೇಶವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು, ಅದರ ನಂತರ ಪುರಸಭೆಯು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತು. ಆ ಮನವಿಯ ಆಧಾರದ ಮೇಲೆ ಪುರಸಭೆಯು ತನ್ನ ಚಹಾ ಅಂಗಡಿಯನ್ನು ತೆಗೆದುಹಾಕಿ, ಅವನನ್ನು ನಿರುದ್ಯೋಗಿಯನ್ನಾಗಿ ಮಾಡಿದೆ ಎಂದು ಬಾವಾಜಿ ಹೇಳಿಕೆಯಲ್ಲಿ ಹೇಳಿಕೊಂಡಿದ್ದಾನೆ.

ಯಾವುದೇ ಆದಾಯದ ಮೂಲವಿಲ್ಲದೆ, ವಿಚಾರಣೆಗೆ ಹಾಜರಾಗಲು ಅಹಮದಾಬಾದ್ ಗೆ ಪ್ರಯಾಣಿಸಲು ಇತರರಿಂದ ಸಾಲ ಅಥವಾ ಭಿಕ್ಷೆ ಬೇಡಬೇಕಾಗಿರುವುದರಿಂದ ಆರೋಪಿ ತನ್ನ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದೆನೆಂದು ಹೇಳಿದ್ದಾನೆ. ಬಾವಾಜಿ ತಮ್ಮ ಪ್ರಕರಣವನ್ನು ದೀರ್ಘಕಾಲದವರೆಗೆ ವಿಚಾರಣೆಗೆ ಒಳಪಡಿಸದ ಕಾರಣ ಮತ್ತು ಅವರು "ಹೈಕೋರ್ಟ್‌ಗೆ ಬರಲು ಕಷ್ಟವಾಗಿದ್ದರಿಂದ" ಅವನು ಹತಾಶೆಯಿಂದ ಚಪ್ಪಲಿ ಎಸೆದಿದ್ದಾನೆ.

ನ್ಯಾಯಾಧೀಶರು ತಮ್ಮ ಆದೇಶದಲ್ಲಿ, ಪ್ರಕರಣಗಳು ಬಾಕಿ ಇರುವುದರಿಂದ ಸಮಯಕ್ಕೆ ಸರಿಯಾಗಿ ವಿಲೇವಾರಿ ಆಗುತ್ತಿಲ್ಲ ಎಂಬ ಅಂಶವಿದ್ದರೂ, ಅದು ಹೈಕೋರ್ಟ್ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆಯಲು ಒಂದು ಕಾರಣವಲ್ಲ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT