ಸಾಂದರ್ಭಿಕ ಚಿತ್ರ 
ದೇಶ

ವಿವಾಹ ಸಮಯದಲ್ಲಿ ಕುದುರೆ ಸವಾರಿ ಮಾಡದಂತೆ ಸ್ಥಳೀಯರ ಬೆದರಿಕೆ: ಪೊಲೀಸರ ರಕ್ಷಣೆ ಕೋರಿದ ವರನ ಕುಟುಂಬ!

ಮದುವೆ ಸಂದರ್ಭದಲ್ಲಿ ಕುದುರೆ ಸವಾರಿ ಮಾಡದಂತೆ ಸ್ಥಳೀಯರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ರಕ್ಷಣೆ ನೀಡುವಂತೆ ಉತ್ತರ ಪ್ರದೇಶದಲ್ಲಿ ದಲಿತ ವ್ಯಕ್ತಿಯೊಬ್ಬರು ಪೊಲೀಸರಿಗೆ ಕೋರಿದ್ದಾರೆ

ಮಹೋಬಾ: ಮದುವೆ ಸಂದರ್ಭದಲ್ಲಿ ಕುದುರೆ ಸವಾರಿ ಮಾಡದಂತೆ ಸ್ಥಳೀಯರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ರಕ್ಷಣೆ ನೀಡುವಂತೆ ಉತ್ತರ ಪ್ರದೇಶದಲ್ಲಿ ದಲಿತ ವ್ಯಕ್ತಿಯೊಬ್ಬರು ಪೊಲೀಸರಿಗೆ ಕೋರಿದ್ದಾರೆ.

ಈ ಸಂಬಂದ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ,  ಆದರೆ ಕುದುರೆ ಸವಾರಿ ಮಾಡುವುದರಿಂದ ಗ್ರಾಮದಲ್ಲಿ ಯಾರಿಗೆ ತೊಂದರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದರೇ ಕೊಲ್ಲುವುದಾಗಿ ಗ್ರಾಮಸ್ಥರು ಬೆದರಿಕೆ ಹಾಕಿದ್ದಾರೆ ಎಂದು ವರ ಅಲಕ್ ರಾಮ್ ಹೇಳಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ, ನಮ್ಮ ಹಳ್ಳಿಯಲ್ಲಿ ಹಳೆಯ ಸಂಪ್ರದಾಯಗಳ ಪ್ರಕಾರ ಮದುವೆಗಳು ನಡೆಯುತ್ತಿವೆ. ನನ್ನ ಮದುವೆ ಮೆರವಣಿಗೆಗಾಗಿ ನಾನು ಕುದುರೆ ಸವಾರಿ ಮಾಡಲು ಬಯಸುತ್ತೇನೆ ಆದರೆ ಇತರ ಸಮುದಾಯಗಳಿಂದ ಬಂದ ಕೆಲವರು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ರಾಮ್ ಹೇಳಿದರು.

ನನ್ನ ಮಗನ ಮದುವೆ ಜೂನ್ 18 ರಂದು ನಡೆಯಲಿದ್ದು, ಈ ವೇಳೆ ಕುದುರೆ ಸವಾರಿ ಮಾಡಿದರೆ ಗ್ರಾಮಸ್ಥರು ಕೊಲ್ಲುವ ಬೆದರಿಕೆ ಹಾಕಿರುವುದರಿಂದ ಪೊಲೀಸರ ರಕ್ಷಣೆ ಕೋರುತ್ತಿರುವುದಾಗಿ ರಾಮ್ ತಂದೆ ಗಯಾದಿನ್ ತಿಳಿಸಿದ್ದಾರೆ. ವರನ ಕುಟುಂಬಕ್ಕೆ ಕಾಂಗ್ರೆಸ್ ಬೆಂಬಲ ಸೂಚಿಸಿದ್ದು, ಪಕ್ಷದ ಇಬ್ಬರ ನಿಯೋಗ ಕಳಿಸಿದೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT