ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಫೋಟೋದೊಂದಿಗೆ ಲಸಿಕೆ ಪ್ರಮಾಣ ಪತ್ರ ನೀಡಿಕೆ

ಪಶ್ಚಿಮ ಬಂಗಾಳ ಸರ್ಕಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋದೊಂದಿಗೆ 18-44 ವರ್ಷದ ಗುಂಪಿನ ಜನರಿಗೆ ನೀಡುತ್ತಿರುವ ಕೋವಿಡ್-19 ಲಸಿಕೆ ಪ್ರಮಾಣ ಪತ್ರಗಳನ್ನು ವಿತರಿಸುತ್ತಿದೆ.

ಕೊಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋದೊಂದಿಗೆ 18-44 ವರ್ಷದ ಗುಂಪಿನ ಜನರಿಗೆ ನೀಡುತ್ತಿರುವ ಕೋವಿಡ್-19 ಲಸಿಕೆ ಪ್ರಮಾಣ ಪತ್ರಗಳನ್ನು ವಿತರಿಸುತ್ತಿದೆ.

ರಾಜ್ಯ ಸರ್ಕಾರ ತನ್ನ ಸ್ವಂತ ಸಂಪನ್ಮೂಲಗಳಿಂದ ಲಸಿಕೆ ತಯಾರಿಕಾ ಕಂಪನಿಗಳಿಂದ ನೇರವಾಗಿ ಖರೀದಿಸಿದಾಗಿನಿಂದಲೂ ಇದನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.

ದೇಶದ ಇತರೆಡೆ ಇರುವಂತೆ 45 ವರ್ಷಕ್ಕೂ ಮೇಲ್ಪಟ್ಟ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಫೋಟೋ ಇರುವ ಲಸಿಕೆ ಪ್ರಮಾಣ ಪತ್ರಗಳನ್ನು ನೀಡಲಾಗುತ್ತಿದೆ. ಆದರೆ, 18-44 ವರ್ಷದೊಳಗಿನವರಿಗೆ ಮಮತಾ ಬ್ಯಾನರ್ಜಿ ಅವರ ಫೋಟೋವಿರುವ ಲಸಿಕಾ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ.

ಉತ್ಪಾದನಾಕಾರರಿಂದ ನೇರವಾಗಿ ಲಸಿಕೆ ಖರೀದಿಯನ್ನು ಸರ್ಕಾರ ಆರಂಭಿಸಿದ್ದು, ಜನರಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಿದೆ. ಇದರಿಂದಾಗಿ ಲಸಿಕೆ ಪ್ರಮಾಣ ಪತ್ರಗಳಲ್ಲಿ  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋ ಬಳಸಲು ನಿರ್ಧರಿಸಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

18-44 ವರ್ಷದೊಳಗಿನ ಜನರಿಗೆ ಕೇಂದ್ರ ಸರ್ಕಾರ ಲಸಿಕೆ ನೀಡದಿದ್ದಾಗ ರಾಜ್ಯ ಸರ್ಕಾರ ಅದಕ್ಕಾಗಿ ವೆಚ್ಚ ಮಾಡಿದೆ. ತದನಂತರ ಮುಖ್ಯಮಂತ್ರಿ ಫೋಟೋವನ್ನು ಲಸಿಕೆ ಪ್ರಮಾಣ ಪತ್ರದಲ್ಲಿ ಬಳಸಲಾಗುತ್ತಿದೆ ಎಂದು ವಸತಿ ಸಚಿವ ಫಿರ್ಹಾದ್ ಹಕ್ಕಿಂ ಹೇಳಿದ್ದಾರೆ. ಆದರೆ, ಈ ನಡೆ ಕೋವಿನ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಇರುವ ಲಸಿಕೆ ಪ್ರಮಾಣ ಪತ್ರಗಳನ್ನು ಪಡೆದ ಫಲಾನುಭವಿಗಳಲ್ಲಿ ಗೊಂದಲ ಮೂಡಿಸಿರುವುದನ್ನು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT