ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಸಮ-ಬೆಸ ಮಾದರಿಯಲ್ಲಿ ಮಾರುಕಟ್ಟೆ ಓಪನ್, ಮೆಟ್ರೋದಲ್ಲಿ ಶೇ.50ರಷ್ಟು ಪ್ರಯಾಣಿಕರು: ದೆಹಲಿಯಲ್ಲಿ ಅನ್ ಲಾಕ್ ಪ್ರಕ್ರಿಯೆಗೆ ಸಿದ್ಧತೆ

ಮಾರಕ ಕೊರೋನಾ ವೈರಸ್ ಉಲ್ಬಣದಿಂದಾಗಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಸೋಮವಾರಕ್ಕೆ ಅಂತ್ಯವಾಗಲಿದ್ದು, ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆಗೆ ಸಿಎಂ ಕೇಜ್ರಿವಾಲ್ ಸರ್ಕಾರ ಚಾಲನೆ ನೀಡಲಿದೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಉಲ್ಬಣದಿಂದಾಗಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಸೋಮವಾರಕ್ಕೆ ಅಂತ್ಯವಾಗಲಿದ್ದು, ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆಗೆ ಸಿಎಂ ಕೇಜ್ರಿವಾಲ್ ಸರ್ಕಾರ ಚಾಲನೆ ನೀಡಲಿದೆ.

ಸಮ-ಬೆಸ ಮಾದರಿ
ದೆಹಲಿಯಲ್ಲಿ 'ಅನ್ ಲಾಕ್' ಯೋಜನೆಗೆ ಪ್ರೋತ್ಸಾಹ ನೀಡುವ ಭಾಗವಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಗರದ ಮಾರುಕಟ್ಟೆಗಳನ್ನು ಸಮ-ಬೆಸ ನಿಯಮದ ಆಧಾರದಲ್ಲಿ ತೆರೆಯಲು ಅನುಮತಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯವನ್ನು ನಿವಾರಿಸಲು ಸಮ-ಬೆಸ ನಿಯಮವನ್ನು ಜಾರಿಗೊಳಿಸಲಾಗಿತ್ತು. ಇದೀಗ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲೂ ಇದೇ ಸಮಬೆಸ ಆಧಾರದ ಮೇಲೆ ಮಾರುಕಟ್ಟೆ ಮತ್ತು ಅಂಗಡಿಗಳನ್ನು ಪ್ರತಿದಿನ ತೆರೆಯಲು ಅನುಮತಿಸಲಾಗುತ್ತದೆ. ಮಾಲ್ ಗಳು ಹಾಗೂ ಶಾಪಿಂಗ್ ಸೆಂಟರ್ ಗಳನ್ನೂ ಕೂಡ ಸಮ-ಬೆಸ ಆಧಾರದಲ್ಲಿ ತೆರೆಯಲ್ಪಡುತ್ತವೆ.

ಬೆಳಗ್ಗೆ 10 ರಿಂದ 8
ಇದೇ ಸಮ-ಬೆಸ ಮಾದರಿಯಲ್ಲಿ ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಪಾಲನೆ ಕಡ್ಡಾಯವಾಗಿರಲಿದೆ ಎಂದು ಹೇಳಿದ್ದಾರೆ. ಸಂಭಾವ್ಯ ಮೂರನೇ ಅಲೆ ವೇಳೆ ದೆಹಲಿಯಲ್ಲಿ ದೈನಂದಿನ ಸೋಂಕಿತರ ಸಂಖ್ಯೆ 37 ಸಾವಿರಕ್ಕೆ ದಾಖಲಾಗುವ ಕುರಿತು ತಜ್ಞರು ಎಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ಸರ್ಕಾರ ಕೋವಿಡ್ ನಿಯಮಗಳನ್ನು ಮುಂದುವರೆಸಲು ನಿರ್ಧರಿಸಿದೆ.

ಮೆಟ್ರೋದಲ್ಲಿ ಶೇ.50ರಷ್ಟು ಪ್ರಯಾಣಿಕರು
ಇನ್ನು ಸರ್ಕಾರಿ ಸಾರಿಗೆ ಸೇವೆಗಳಿಗೂ ನಿಯಮ ಜಾರಿ ಮಾಡಲಾಗಿದ್ದು, ಪ್ರಮುಖವಾಗಿ ಮೆಟ್ರೋ ರೈಲಿನಲ್ಲಿ ಶೇ.50 ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೇವಲ 50 ಪ್ರತಿಶತದಷ್ಟು ಆಸನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತೆಯೇ ಖಾಸಗಿ ಕಚೇರಿಗಳನ್ನು ಶೇಕಡಾ 50 ರಷ್ಟು ಉದ್ಯೋಗಗಳ ಮಿತಿಯೊಂದಿಗೆ ತೆರೆಯಬಹುದಾಗಿದೆ. 

ಅಗತ್ಯ ವಸ್ತು ಅಂಗಡಿಗಳಿಗೆ ಸಮ-ಬೆಸ ನಿಯಮವಿಲ್ಲ
ಇದೇ ವೇಳೆ ಸಮ-ಬೆಸ ನೀತಿ ಅಗತ್ಯ ವಸ್ತು ಅಂಗಡಿಗಳಿಗೆ ಅನ್ವಯಿಸುವುದಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಅವರು ಸ್ಪಷ್ಟಪಡಿಸಿದ್ದು, ಅಗತ್ಯವಸ್ತುಗಳ ಅಂಗಡಿಗಳು ಎಲ್ಲ ದಿನಗಳಲ್ಲಿ ತೆರೆಯಬಹುದು. ಸಮ-ಬೆಸ  ನಿಯಮವು ಇದಕ್ಕೆ ಅನ್ವಯಿಸುವುದಿಲ್ಲ. ಪರಿಸ್ಥಿತಿ ಇನ್ನಷ್ಟು ಸುಧಾರಿಸಿದರೆ ಹೆಚ್ಚಿನ ಸಡಿಲಿಕೆ ಘೋಷಿಸಲಾಗುತ್ತದೆ ಎಂದು ಹೇಳಿದರು. 

ಎಲ್ಎನ್ ಜೆಪಿ ಆಸ್ಪತ್ರೆಯಲ್ಲಿ ಜೆನೋಮ್ ಸೀಕ್ವೆನ್ಸ್ ಲ್ಯಾಬ್
ಇದೇ ವೇಳೆ ಕೊರೋನಾ ವೈರಸ್ ರೂಪಂತರವನ್ನು ಗಮನದಲ್ಲಿಟ್ಟುಕೊಂಡು ದೆಹಲಿಯ ಎಲ್ಎನ್ ಜೆಪಿ ಆಸ್ಪತ್ರೆಯಲ್ಲಿ ಜೆನೋಮ್ ಸೀಕ್ವೆನ್ಸ್ ಲ್ಯಾಬ್ ತೆರೆಯಲು ನಿರ್ಧರಿಸಲಾಗಿದೆ. ಅಂತೆಯೇ ದೆಹಲಿಯಲ್ಲಿ ಕೋವಿಡ್ ಸೋಂಕು ಹೆಚ್ಚಳಕ್ಕೆ ಕಾರಣವಾದ ಅಂಶಗಳ ಅಧ್ಯಯನಕ್ಕೆ ಈ ಲ್ಯಾಬ್ ನೆರವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!