ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆಯ ಮುಖ್ಯ ಸಚೇತಕ ಮತ್ತು ಬಿಜೆಪಿ ಶಾಸಕ ನರೀಂದರ್ ಬರಾಗಟಾ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ಶನಿವಾರ ಪಿಜಿಐ ಚಂಡೀಗಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಮಗ ಚೇತನ್ ಬರಾಗಟಾ ಟ್ವೀಟ್ ಮಾಡಿದ್ದಾರೆ. ನರೀಂದರ್ ಅವರು ಜುಬ್ಬಲ್ ಕೊಟ್ಕಾಯಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ನರೀಂದರ್ ಅವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಜಯರಾಮ್ ಠಾಕೂರ್ ಅವರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿದ್ದರು. ಅವರು ತೋಟಗಾರಿಕೆ, ತಂತ್ರಜ್ಞಾನ ಶಿಕ್ಷಣ ಮತ್ತು ಆರೋಗ್ಯ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಏಪ್ರಿಲ್ 13 ರಂದು ಕೊರೋನಾ ವೈರಸ್ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಶನಿವಾರ ಸಾವನ್ನಪ್ಪಿದ್ದಾರೆ.