ಅಭಿಷೇಕ್ ಬ್ಯಾನರ್ಜಿ 
ದೇಶ

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ನೇಮಕ!

ಡೈಮಂಡ್ ಹಾರ್ಬರ್ ಸಂಸದ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಮುಖಂಡ ಪಾರ್ಥ ಚಟರ್ಜಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕೋಲ್ಕತ್ತಾ: ಡೈಮಂಡ್ ಹಾರ್ಬರ್ ಸಂಸದ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಮುಖಂಡ ಪಾರ್ಥ ಚಟರ್ಜಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಳೆದ ತಿಂಗಳು ನಡೆದ ವಿಧಾನಸಭೆ ಚುನಾವಣೆಯ ವಿಜಯದ ನಂತರ ಯುವ ಟಿಎಂಸಿ ನಾಯಕನನ್ನು ಪಕ್ಷದ ಮೊದಲ ಸಾಂಸ್ಥಿಕ ಸಭೆಯಲ್ಲಿ ಹೆಚ್ಚಿನ ಜವಾಬ್ದಾರಿಯುತ ಸ್ಥಾನಕ್ಕೆ ಏರಿಸಲಾಯಿತು.

ಅಭಿಷೇಕ್ ಇದುವರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಯಾಗಿದ್ದ ಸುಬ್ರತಾ ಭಕ್ಷಿ ಅವರ ಸ್ಥಾನಕ್ಕೆ ಬರಲಿದ್ದಾರೆ.

"ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಂಸದ ಅಭಿಷೇಕ್ ಬ್ಯಾನರ್ಜಿಯನ್ನು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ನಾಮನಿರ್ದೇಶನ ಮಾಡಿದ್ದಾರೆ" ಎಂದು ಚಟರ್ಜಿ ಹೇಳಿದರು. 

ಏತನ್ಮಧ್ಯೆ, ಟಿಎಂಸಿ ಮುಖಂಡರಾಗಿ ಬದಲಾದ ನಟ ಸಾಯೋನಿ ಘೋಷ್​ ಅವರನ್ನು ಪಕ್ಷದ ಯುವ ವಿಭಾಗದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇದನ್ನು ಈ ವರೆಗೆ ಸಂಸದ ಬ್ಯಾನರ್ಜಿ ವಹಿಸಿಕೊಂಡಿದ್ದರು.

ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಕೇವಲ ಒಂದು ಹುದ್ದೆ ಅಲಂಕರಿಸಲು ಅವಕಾಶ ನೀಡಲಾಗುವುದು ಎಂದು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಮತ್ತು ಕೋರ್ ಕಮಿಟಿ ತನ್ನ ಅನುಮೋದನೆಯನ್ನು ನೀಡಿದೆ ಎಂದು ಚಟರ್ಜಿ ಹೇಳಿದ್ದಾರೆ. ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಲು ಟಿಎಂಸಿಯನ್ನು ತೊರೆದಿದ್ದ ನಾಯಕರ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಮತ್ತು ಈಗ ಅವರೆಲ್ಲಾ ಪಕ್ಷಕ್ಕೆ ಮರಳಲು ಸಿದ್ಧರಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT