ಸಾಂದರ್ಭಿಕ ಚಿತ್ರ 
ದೇಶ

ಬೇರೊಬ್ಬನ ಕೈ ಹಿಡಿದ ಪ್ರೀತಿಸಿದ ಯುವತಿ; ಮರಕ್ಕೆ ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿ ಬೇರೊಬ್ಬನನ್ನು ಮದುವೆಯಾದಳು ಎಂಬ ನೋವಿನಿಂದ 20 ವರ್ಷದ ಯುವಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಹಮೀರ್ ಪುರ್: ಪ್ರೀತಿಸಿದ ಯುವತಿ ಬೇರೊಬ್ಬನನ್ನು ಮದುವೆಯಾದಳು ಎಂಬ ನೋವಿನಿಂದ 20 ವರ್ಷದ ಯುವಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಹಮೀರ್ ಪುರ್ ಜಿಲ್ಲೆಯ ಲಾಲ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಥ್ ಕೋಟ್ವಾಲಿ ಪ್ರದೇಶದ ಜಖೇಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 20 ವರ್ಷದ ಲಕ್ಷ್ಮೀ ಪ್ರಜಾಪತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಈ ಬಗ್ಗೆ ಮಾಹಿತಿ ನೀಡಿರುವ ಲಾಲ್ ಪುರ ಪೊಲೀಸ್ ಠಾಣಾ ವರಿಷ್ಛಾಧಿಕಾರಿ ಓಂ ಪ್ರಕಾಶ್ ಯಾದವ್ ಅವರು, ರಾಜಸ್ಥಾನದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ಪ್ರಜಾಪತಿ ಮೊಹಾಬ ಜಿಲ್ಲೆಯ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಇತ್ತೀಚೆಗೆ ಆಕೆ ಬೇರೊಬ್ಬನೊಂದಿಗೆ ವಿವಾಹವಾಗಿದ್ದಳು. ಈ ವಿಚಾರ  ತಿಳಿಯುತ್ತಿದ್ದಂತೆಯೇ ತೀವ್ರವಾಗಿ ನೊಂದಿದ್ದ ಲಕ್ಷ್ಮೀ ಪ್ರಜಾಪತಿ ಬಸ್ ನಲ್ಲಿ ಮನೆಗೆ ಬಂದು ಮರಕ್ಕೆ ಹಗ್ಗ ಬಿಗಿದು ನೇಣು ಹಾಕಿಕೊಂಡಿದ್ದಾನೆ. ಸಾವಿಗೂ ಮುನ್ನ ಸೆಲ್ಫಿ ತೆಗೆದುಕೊಂಡು ತನ್ನ ಕುಟುಂಬಸ್ಥರಿಗೆ ರವಾನೆ ಮಾಡಿದ್ದಾನೆ ಎಂದು ಹೇಳಿದ್ದಾರೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT