ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್ ಎರಡನೇ ಅಲೆ ಕೃಷಿ ಕ್ಷೇತ್ರದ ಮೇಲೆ ಪರಿಣಾಮ ಬೀರಲ್ಲ- ನೀತಿ ಆಯೋಗ

ಮೇ ತಿಂಗಳಲ್ಲಿ ಕೃಷಿ ಚಟುವಟಿಕೆಗಳು ಕನಿಷ್ಠ ಮಟ್ಟದಲ್ಲಿದ್ದಾಗ ಹಳ್ಳಿಗಳಲ್ಲಿ ಸೋಂಕು ಹರಡುವಿಕೆಯಿಂದ ದೇಶದ ಕೃಷಿ ಕ್ಷೇತ್ರದ ಮೇಲೆ ಕೋವಿಡ್ ಎರಡನೇ ಅಲೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ ಎಂದು ನೀತಿ ಆಯೋಗದ ಸದಸ್ಯ (ಕೃಷಿ) ರಮೇಶ್ ಚಂದ್ ಭಾನುವಾರ ಹೇಳಿದ್ದಾರೆ.

ನವದೆಹಲಿ: ಮೇ ತಿಂಗಳಲ್ಲಿ ಕೃಷಿ ಚಟುವಟಿಕೆಗಳು ಕನಿಷ್ಠ ಮಟ್ಟದಲ್ಲಿದ್ದಾಗ ಹಳ್ಳಿಗಳಲ್ಲಿ ಸೋಂಕು ಹರಡುವಿಕೆಯಿಂದ ದೇಶದ ಕೃಷಿ ಕ್ಷೇತ್ರದ ಮೇಲೆ ಕೋವಿಡ್ ಎರಡನೇ ಅಲೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ ಎಂದು ನೀತಿ ಆಯೋಗದ ಸದಸ್ಯ (ಕೃಷಿ) ರಮೇಶ್ ಚಂದ್ ಭಾನುವಾರ ಹೇಳಿದ್ದಾರೆ.

ಸಬ್ಸಿಡಿ, ದರ ಮತ್ತು ತಂತ್ರಜ್ಞಾನದಲ್ಲಿನ ನೀತಿಗಳು ಹೆಚ್ಚಾಗಿ ಅಕ್ಕಿ, ಗೋಧಿ ಮತ್ತು ಭತ್ತದ ಪರವಾಗಿದ್ದು, ಖರೀದಿ ಮತ್ತು ದ್ವಿದಳ ಧಾನ್ಯಗಳಿಗೆ ಅನುಕೂಲಕರವಾದ ಕನಿಷ್ಠ ಬೆಂಬಲ ಬೆಲೆ ನೀತಿಯ ಅಗತ್ಯವಿದೆ ಎಂದು ಚಂದ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿನ ತಿಳಿಸಿದ್ದಾರೆ.

ಮೇ ತಿಂಗಳ ಆರಂಭದೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್-19 ಪ್ರಕರಣಗಳು ಹರಡುವಿಕೆಯೂ ಆರಂಭವಾಯಿತು. ಮೇ ತಿಂಗಳಲ್ಲಿ ಕೃಷಿ ಚಟುವಟಿಕೆಗಳು ವಿಶೇಷವಾಗಿ, ಭೂ ಆಧಾರಿತ ಚಟುವಟಿಕೆಗಳು ಕನಿಷ್ಠ ಮಟ್ಟದಲ್ಲಿರುತ್ತವೆ. ಮೇ ತಿಂಗಳಲ್ಲಿ ಯಾವುದೇ ಬೆಳೆ ಬಿತ್ತನೆ ಮಾಡುವುದಿಲ್ಲ, ಸ್ವಲ್ಪ ತರಕಾರಿಗಳು ಮತ್ತು ಕೆಲವು ಆಫ್-ಸೀಸನ್ ಬೆಳೆಗಳನ್ನು ಹೊರತುಪಡಿಸಿ ಯಾವುದೇ ಬೆಳೆ ಕೊಯ್ಲು ಮಾಡಲಾಗುವುದಿಲ್ಲ ಎಂದು ಅವರು ವಿವರಿಸಿದರು.

ಮಾರ್ಚ್ ತಿಂಗಳ ಆರಂಭ ಅಥವಾ ಏಪ್ರಿಲ್ ಮಧ್ಯಭಾಗದಿಂದ ಕೃಷಿ ಚಟುವಟಿಕೆಗಳು ಆರಂಭವಾಗುತ್ತವೆ. ನಂತರ ಕಡಿಮೆಯಾಗಿ, ಮುಂಗಾರು ಆರಂಭದೊಂದಿಗೆ ಮತ್ತೆ ಗರಿಷ್ಠ ಪ್ರಮಾಣದ ಚಟುವಟಿಕೆಗಳು ನಡೆಯುತ್ತವೆ. ಆದ್ದರಿಂದ ಮೇ ತಿಂಗಳಿನಿಂದ ಜೂನ್ ಮಧ್ಯದವರೆಗೂ ಕಾರ್ಮಿಕರ ಕೊರತೆ ಇದ್ದರೂ, ಇದು ಕೃಷಿ ವಲಯದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಲಿದೆ ಎಂದು ಅನಿಸುವುದಿಲ್ಲ ಎಂದು ಚಂದ್ ಹೇಳಿದರು.

ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ ದೇಶ ಏಕೆ ಇನ್ನೂ ಸ್ವಾವಲಂಬಿಯಾಗಿಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಂದ್, ನೀರಾವರಿ ಅಡಿಯಲ್ಲಿ ದ್ವಿದಳ ಧಾನ್ಯ ಉತ್ಪಾದನೆ ಹೆಚ್ಚಾಗುವ ಅಗತ್ಯವಿದೆ. ಅದು ಉತ್ಪಾದನೆಯಲ್ಲಿ ಬಹಳಷ್ಟು ವ್ಯತ್ಯಾಸವನ್ನು ಮತ್ತು ಬೆಲೆಗಳಲ್ಲಿ ಸ್ಥಿರತೆಯನ್ನು ಮಾಡುತ್ತದೆ.2021-22ರಲ್ಲಿ ಕೃಷಿ ಕ್ಷೇತ್ರದ ಬೆಳವಣಿಗೆ ಶೇಕಡಾ 3ಕ್ಕಿಂತಲೂ ಹೆಚ್ಚಾಗುತ್ತದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT