ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್ ಎರಡನೇ ಅಲೆ ಕೃಷಿ ಕ್ಷೇತ್ರದ ಮೇಲೆ ಪರಿಣಾಮ ಬೀರಲ್ಲ- ನೀತಿ ಆಯೋಗ

ಮೇ ತಿಂಗಳಲ್ಲಿ ಕೃಷಿ ಚಟುವಟಿಕೆಗಳು ಕನಿಷ್ಠ ಮಟ್ಟದಲ್ಲಿದ್ದಾಗ ಹಳ್ಳಿಗಳಲ್ಲಿ ಸೋಂಕು ಹರಡುವಿಕೆಯಿಂದ ದೇಶದ ಕೃಷಿ ಕ್ಷೇತ್ರದ ಮೇಲೆ ಕೋವಿಡ್ ಎರಡನೇ ಅಲೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ ಎಂದು ನೀತಿ ಆಯೋಗದ ಸದಸ್ಯ (ಕೃಷಿ) ರಮೇಶ್ ಚಂದ್ ಭಾನುವಾರ ಹೇಳಿದ್ದಾರೆ.

ನವದೆಹಲಿ: ಮೇ ತಿಂಗಳಲ್ಲಿ ಕೃಷಿ ಚಟುವಟಿಕೆಗಳು ಕನಿಷ್ಠ ಮಟ್ಟದಲ್ಲಿದ್ದಾಗ ಹಳ್ಳಿಗಳಲ್ಲಿ ಸೋಂಕು ಹರಡುವಿಕೆಯಿಂದ ದೇಶದ ಕೃಷಿ ಕ್ಷೇತ್ರದ ಮೇಲೆ ಕೋವಿಡ್ ಎರಡನೇ ಅಲೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ ಎಂದು ನೀತಿ ಆಯೋಗದ ಸದಸ್ಯ (ಕೃಷಿ) ರಮೇಶ್ ಚಂದ್ ಭಾನುವಾರ ಹೇಳಿದ್ದಾರೆ.

ಸಬ್ಸಿಡಿ, ದರ ಮತ್ತು ತಂತ್ರಜ್ಞಾನದಲ್ಲಿನ ನೀತಿಗಳು ಹೆಚ್ಚಾಗಿ ಅಕ್ಕಿ, ಗೋಧಿ ಮತ್ತು ಭತ್ತದ ಪರವಾಗಿದ್ದು, ಖರೀದಿ ಮತ್ತು ದ್ವಿದಳ ಧಾನ್ಯಗಳಿಗೆ ಅನುಕೂಲಕರವಾದ ಕನಿಷ್ಠ ಬೆಂಬಲ ಬೆಲೆ ನೀತಿಯ ಅಗತ್ಯವಿದೆ ಎಂದು ಚಂದ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿನ ತಿಳಿಸಿದ್ದಾರೆ.

ಮೇ ತಿಂಗಳ ಆರಂಭದೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್-19 ಪ್ರಕರಣಗಳು ಹರಡುವಿಕೆಯೂ ಆರಂಭವಾಯಿತು. ಮೇ ತಿಂಗಳಲ್ಲಿ ಕೃಷಿ ಚಟುವಟಿಕೆಗಳು ವಿಶೇಷವಾಗಿ, ಭೂ ಆಧಾರಿತ ಚಟುವಟಿಕೆಗಳು ಕನಿಷ್ಠ ಮಟ್ಟದಲ್ಲಿರುತ್ತವೆ. ಮೇ ತಿಂಗಳಲ್ಲಿ ಯಾವುದೇ ಬೆಳೆ ಬಿತ್ತನೆ ಮಾಡುವುದಿಲ್ಲ, ಸ್ವಲ್ಪ ತರಕಾರಿಗಳು ಮತ್ತು ಕೆಲವು ಆಫ್-ಸೀಸನ್ ಬೆಳೆಗಳನ್ನು ಹೊರತುಪಡಿಸಿ ಯಾವುದೇ ಬೆಳೆ ಕೊಯ್ಲು ಮಾಡಲಾಗುವುದಿಲ್ಲ ಎಂದು ಅವರು ವಿವರಿಸಿದರು.

ಮಾರ್ಚ್ ತಿಂಗಳ ಆರಂಭ ಅಥವಾ ಏಪ್ರಿಲ್ ಮಧ್ಯಭಾಗದಿಂದ ಕೃಷಿ ಚಟುವಟಿಕೆಗಳು ಆರಂಭವಾಗುತ್ತವೆ. ನಂತರ ಕಡಿಮೆಯಾಗಿ, ಮುಂಗಾರು ಆರಂಭದೊಂದಿಗೆ ಮತ್ತೆ ಗರಿಷ್ಠ ಪ್ರಮಾಣದ ಚಟುವಟಿಕೆಗಳು ನಡೆಯುತ್ತವೆ. ಆದ್ದರಿಂದ ಮೇ ತಿಂಗಳಿನಿಂದ ಜೂನ್ ಮಧ್ಯದವರೆಗೂ ಕಾರ್ಮಿಕರ ಕೊರತೆ ಇದ್ದರೂ, ಇದು ಕೃಷಿ ವಲಯದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಲಿದೆ ಎಂದು ಅನಿಸುವುದಿಲ್ಲ ಎಂದು ಚಂದ್ ಹೇಳಿದರು.

ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ ದೇಶ ಏಕೆ ಇನ್ನೂ ಸ್ವಾವಲಂಬಿಯಾಗಿಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಂದ್, ನೀರಾವರಿ ಅಡಿಯಲ್ಲಿ ದ್ವಿದಳ ಧಾನ್ಯ ಉತ್ಪಾದನೆ ಹೆಚ್ಚಾಗುವ ಅಗತ್ಯವಿದೆ. ಅದು ಉತ್ಪಾದನೆಯಲ್ಲಿ ಬಹಳಷ್ಟು ವ್ಯತ್ಯಾಸವನ್ನು ಮತ್ತು ಬೆಲೆಗಳಲ್ಲಿ ಸ್ಥಿರತೆಯನ್ನು ಮಾಡುತ್ತದೆ.2021-22ರಲ್ಲಿ ಕೃಷಿ ಕ್ಷೇತ್ರದ ಬೆಳವಣಿಗೆ ಶೇಕಡಾ 3ಕ್ಕಿಂತಲೂ ಹೆಚ್ಚಾಗುತ್ತದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT