ಸಂಗ್ರಹ ಚಿತ್ರ 
ದೇಶ

ದೆಹಲಿ ಸರ್ಕಾರಿ ಆಸ್ಪತ್ರೆಯಲ್ಲಿ ಮಲಯಾಳಂ ಮಾತನಾಡದಂತೆ ದಾದಿಯರಿಗೆ ಸೂಚನೆ!

ಆಸ್ಪತ್ರೆಯಲ್ಲಿ ದಾದಿಯರು ಬಳಸುತ್ತಿರುವ ಮಲಯಾಳಂ ಭಾಷೆ ಹಲವರಲ್ಲಿ ಇರಿಸು-ಮುನಿಸು ಮೂಡಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ತವ್ಯ ನಿರತ ಕೇರಳ ಮೂಲದ ದಾದಿಯರು ಇನ್ನು ಮುಂದೆ ಆಸ್ಪತ್ರೆಯಲ್ಲಿ ಮಲಯಾಳಂ ಭಾಷೆ ಬಳಸುವಂತಿಲ್ಲ ಎಂದು ರಾಷ್ಟ್ರ ರಾಜಧಾನಿ ನವದೆಹಲಿಯ ಸರ್ಕಾರಿ ಆಸ್ಪತ್ರೆ ಸೂಚನೆ ನೀಡಿದೆ. 

ನವದೆಹಲಿ: ಆಸ್ಪತ್ರೆಯಲ್ಲಿ ದಾದಿಯರು ಬಳಸುತ್ತಿರುವ ಮಲಯಾಳಂ ಭಾಷೆ ಹಲವರಲ್ಲಿ ಇರಿಸು-ಮುನಿಸು ಮೂಡಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ತವ್ಯ ನಿರತ ಕೇರಳ ಮೂಲದ ದಾದಿಯರು ಇನ್ನು ಮುಂದೆ ಆಸ್ಪತ್ರೆಯಲ್ಲಿ ಮಲಯಾಳಂ ಭಾಷೆ ಬಳಸುವಂತಿಲ್ಲ ಎಂದು ರಾಷ್ಟ್ರ ರಾಜಧಾನಿ ನವದೆಹಲಿಯ ಸರ್ಕಾರಿ ಆಸ್ಪತ್ರೆ ಸೂಚನೆ ನೀಡಿದೆ. 

ಈ ಸಂಬಂಧ ದೆಹಲಿ ಸರ್ಕಾರಿ ಆಸ್ಪತ್ರೆ ಸುತ್ತೋಲೆಯನ್ನು ಹೊರಡಿಸಿದ್ದು, ಆಸ್ಪತ್ರೆಯಲ್ಲಿ ದಾಖಲಾಗುವ ಬಹುತೇಕ ರೋಗಿಗಳಿಗೆ ಮತ್ತು ಸಹೋದ್ಯೋಗಿಗಳಿಗೆ ಈ ಭಾಷೆ ತಿಳಿದಿಲ್ಲ. ಹಾಗಾಗಿ ಕರ್ತವ್ಯ ನಿರತ ಕೇರಳ ಮೂಲದ ದಾದಿಯರು ಮಲಯಾಳಂ ಬದಲು ಹಿಂದಿ ಹಾಗೂ ಆಂಗ್ಲ ಭಾಷೆಯಲ್ಲೇ ಸಂವಹನ ಮಾಡುವಂತೆ ಆದೇಶಿಸಲಾಗಿದೆ.

ಗೋವಿಂದ್ ವಲ್ಲಭ್ ಪಂತ್ ಇನ್ಸ್ಟಿಟ್ಯೂಟ್ ಆಫ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (ಜಿಐಪಿಎಂಇಆರ್) ಸುತ್ತೋಲೆ ಹೊರಡಿಸಿದ್ದು, 'ದಾದಿಯರು ಸಂವಹನಕ್ಕಾಗಿ ಹಿಂದಿ ಹಾಗೂ ಇಂಗ್ಲಿಷ್ ಭಾಷೆಯನ್ನು ಮಾತ್ರ ಬಳಸುವಂತೆ ತಿಳಿಸಲಾಗಿದೆ. ಇದನ್ನು ಉಲ್ಲಂಘಿಸಿದ್ದಲ್ಲಿ ಕಠಿಣ ಕ್ರಮ ಎದುರಿಸಬೇಕಾದಿತು' ಎಂದು ಎಚ್ಚರಿಸಿದೆ.

ಜಿಐಪಿಎಂಇಆರ್ ಆಸ್ಪತ್ರೆಯಲ್ಲಿ ಕೆಲಸದ ಸಮಯದಲ್ಲಿ ಸಂವಹನಕ್ಕಾಗಿ ಮಲಯಾಳಂ ಭಾಷೆಯನ್ನೇ ಬಳಸಲಾಗುತ್ತಿದೆ ಎಂಬ ಬಗ್ಗೆ ದೂರುಗಳು ಬಂದಿವೆ. ಬಹುತೇಕ ರೋಗಿಗಳು ಹಾಗೂ ಸಹೋದ್ಯೋಗಿಗಳಿಗೆ ಈ ಭಾಷೆ ತಿಳಿದಿಲ್ಲ. ಇದರಿಂದ ಅಸಹಾಯಕರಾಗಿದ್ದು, ಬಹಳಷ್ಟು ಅನಾನುಕೂಲತೆಯಾಗುತ್ತಿದೆ ಎಂದು ತಿಳಿಸಿದೆ.

ಈ ನಡುವೆ ದೆಹಲಿ ಸರ್ಕಾರಿ ಆಸ್ಪತ್ರೆಯ ಸುತ್ತೋಲೆಯ ವಿರುದ್ಧ ಮಲಯಾಳಂ ಶುಶ್ರೂಷಕರ ಸಂಘದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದೇಶದಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕೇರಳ ಮೂಲದ ದಾದಿಯರು ಸೇವೆ ಸಲ್ಲಿಸುತ್ತಿದ್ದಾರೆ. ಮಲಯಾಳಂ ಅವರ ಮಾತೃಭಾಷೆ ಎಂದು ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel