ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ದೇಶಾದ್ಯಂತ ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆ ಅನುಷ್ಠಾನಕ್ಕೆ ಕೇಜ್ರಿವಾಲ್ ಒತ್ತಾಯ

ಸಾರ್ವಜನಿಕರ ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆಯನ್ನು ಕೇಂದ್ರದಿಂದ ಸರ್ಕಾರದಿಂದ ಏಕೆ ಸ್ಥಗಿತಗೊಳಿಸಲಾಗಿದೆ ಎಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಷ್ಟ್ರೀಯ ಹಿತಾಸಕ್ತಿಯಿಂದ ಈ ಯೋಜನೆ ಅನುಷ್ಠಾನಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ನವದೆಹಲಿ: ಸಾರ್ವಜನಿಕರ ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆಯನ್ನು ಕೇಂದ್ರದಿಂದ ಸರ್ಕಾರದಿಂದ ಏಕೆ ಸ್ಥಗಿತಗೊಳಿಸಲಾಗಿದೆ ಎಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಷ್ಟ್ರೀಯ ಹಿತಾಸಕ್ತಿಯಿಂದ ಈ ಯೋಜನೆ ಅನುಷ್ಠಾನಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ಪಡಿತರ ಅಂಗಡಿಗಳು ಸೋಂಕು ಹರಡುವಿಕೆ ಕೇಂದ್ರವಾಗದಂತೆ ತಡೆಗಟ್ಟಲು ದೇಶಾದ್ಯಂತ ಈ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಫಿಜ್ಜಾ, ಬರ್ಗರ್ಸ್, ಸ್ಮಾರ್ಟ್ ಫೋನ್ ಗಳು, ಬಟ್ಟೆಗಳು ಮನೆ ಬಾಗಿಲಿಗೆ ಪೂರೈಕೆ ಮಾಡುವಂತಾದರೆ, ಪಡಿತರವನ್ನು ಏಕೆ ಮನೆ ಬಾಗಿಲಿಗೆ ಪೂರೈಸಬಾರದು ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.  

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ, ದೆಹಲಿ ಮತ್ತು ಜಾರ್ಕಂಡ್ ಸರ್ಕಾರ, ರೈತರು ಮತ್ತು ಲಕ್ಷದೀಪ ಜನರು ಒಳಗೊಂಡಂತೆ ಪ್ರತಿಯೊಂದು ವಿಚಾರದಲ್ಲೂ ಕೇಂದ್ರ ಸರ್ಕಾರದ ಜೊತೆಗೆ ಪೈಪೋಟಿ ನಡೆಸಬೇಕಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರತಿಯೊಂದರಲ್ಲೂ ಕೇಂದ್ರ ಸರ್ಕಾರದ ಜೊತೆಗಿನ ಹೋರಾಟದಿಂದ ಜನರು ಬೇಸತಿದ್ದಾರೆ. ಈ ರೀತಿಯ ನಾವು ಹೋರಾಡುತ್ತಿದ್ದರೆ ಕೋವಿಡ್ ಹೇಗೆ ನಿಯಂತ್ರಣ ಮಾಡಲು ಸಾಧ್ಯ ಎಂದು ಅವರು ಆನ್ ಲೈನ್ ಭಾಷಣದಲ್ಲಿ ಹೇಳಿದ್ದಾರೆ. ಮನೆ ಬಾಗಿಲಿಗೆ ಪಡಿತರ ವಿತರಿಸುವ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ಅಗತ್ಯವಿಲ್ಲ, ಆದರೆ, ಯಾವುದೇ ವಿವಾದವಾಗದಂತೆ ತಡೆಯಲು ಐದು ಬಾರಿ ಅನುಮತಿಯನ್ನು ಕೋರಲಾಗಿದೆ ಎಂದು ಕೇಜ್ರಿವಾಲ್ ತಿಳಿಸಿದರು.

ಈ ಯೋಜನೆಗೆ  ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಬೇಕಾಗಿ ಉಪ ರಾಜ್ಯಪಾಲರು  ಯೋಜನೆ ಅನುಷ್ಠಾನಕ್ಕೆ ತಿರಸ್ಕರಿಸಿದ್ದಾರೆ ಎಂದು ದೆಹಲಿ ಸರ್ಕಾರ ಶನಿವಾರ ಹೇಳಿಕೆ ನೀಡಿತ್ತು. 

ಈ ಯೋಜನೆಯಿಂದ ದೆಹಲಿಯ ಪವರ್ ಫುಲ್ ಪಡಿತರ ಮಾಫಿಯಾ ಅಂತ್ಯವಾಗಲಿದೆ. ಒಂದು ವೇಳೆ ನೀವೇ ಪಡಿತರ ಮಾಫಿಯಾ ಜೊತೆಗೆ ನಿಂತರೆ, ಬಡ ಜನರ ಪರ ಯಾರು ನಿಲ್ಲುತ್ತಾರೆ ಎಂದು ಕೇಳಿರುವ ಅರವಿಂದ್ ಕೇಜ್ರಿವಾಲ್, ಈ ಯೋಜನೆಯಿಂದ ರಾಷ್ಟ್ರ ರಾಜಧಾನಿಯ 72 ಲಕ್ಷ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!