ರಾಹುಲ್ ಗಾಂಧಿ 
ದೇಶ

ಬ್ಲೂ ಟಿಕ್ ಗಾಗಿ ಮೋದಿ ಸರ್ಕಾರ ಹೋರಾಟ: ಟ್ವಿಟರ್ ವಿವಾದ ಕುರಿತು ರಾಹುಲ್ ಹೇಳಿಕೆ!

ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮೋದಿ ಸರ್ಕಾರ ಬ್ಲೂ ಟಿಕ್ ವೊಂದಕ್ಕಾಗಿ ಹೋರಾಟ ಮಾಡುತ್ತಿದೆ. ಕೋವಿಡ್ ಲಸಿಕೆ ಪಡೆಯಲು ಬಯಸುವ ಜನರು ಸ್ವಾವಲಂಬಿಯಾಗಬೇಕಾದ ಅಗತ್ಯವಿದೆ ಎಂದಿದ್ದಾರೆ.

ನವದೆಹಲಿ:  ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮೋದಿ ಸರ್ಕಾರ ಬ್ಲೂ ಟಿಕ್ ವೊಂದಕ್ಕಾಗಿ ಹೋರಾಟ ಮಾಡುತ್ತಿದೆ. ಕೋವಿಡ್ ಲಸಿಕೆ ಪಡೆಯಲು ಬಯಸುವ ಜನರು ಸ್ವಾವಲಂಬಿಯಾಗಬೇಕಾದ ಅಗತ್ಯವಿದೆ ಎಂದಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉನ್ನತ ಪದಾಧಿಕಾರಿ ಮೋಹನ್ ಭಾಗವತ್ ಸೇರಿದಂತೆ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಖಾತೆಯಿಂದ ಬ್ಲೂ ಟಿಕ್  ಬ್ಯಾಡ್ಜ್ ನ್ನು ಟ್ವಿಟರ್ ತೆಗೆದ ನಂತರ ಸಾಕಷ್ಟು ವಿವಾದವಾಗಿ ತದನಂತರ ಮರುಸ್ಥಾಪಿಸಲಾಗಿತ್ತು. ಇದು ನಡೆದ ಮಾರನೇ ದಿನ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ನಿಯಮಗಳ ಪ್ರಕಾರ, ಆರು ತಿಂಗಳಿನಿಂದ ನಿಷ್ಕ್ರಿಯವಾಗಿದ್ದರೆ ಅಥವಾ ಅಪೂರ್ಣವಾಗಿದ್ದರೆ ಬ್ಲೂ ಬ್ಯಾಡ್ಜ್ ಮತ್ತು ಪರಿಶೀಲಿಸಿದ ಸ್ಥಿತಿಯನ್ನು ಖಾತೆಯಿಂದ ಸ್ವಯಂ ಚಾಲಿತವಾಗಿ ತೆಗೆದುಹಾಕಬಹುದು ಎಂದು ಟ್ವಿಟರ್ ಹೇಳಿತ್ತು.

ಮೋದಿ ಸರ್ಕಾರ ಬ್ಲೂ ಟಿಕ್ ಗಾಗಿ ಹೋರಾಡುತ್ತಿದೆ. ನೀವು ಕೋವಿಡ್ ಲಸಿಕೆ ಬಯಸಿದರೆ, ನಂತರ ಸ್ವಾವಲಂಬಿಗಳಾಗಿರಿ ಎಂದು ಆದ್ಯತೆ ಹ್ಯಾಷ್ ಟಾಗ್ ಬಳಸಿ ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವಿಟ್ ಮಾಡಿದ್ದಾರೆ.

ಮತ್ತೊಂದು ಟ್ವಿಟ್ ನಲ್ಲಿ  ಮಲಯಾಳಂ ಭಾಷೆಯಲ್ಲಿ ನರ್ಸ್ ಗಳು ಮಾತನಾಡುವಂತಿಲ್ಲ ದೆಹಲಿ ಸರ್ಕಾರದ ಆಸ್ಪತ್ರೆಗಳು ಆದೇಶ ನೀಡಿದ ನಂತರ ಭಾಷೆ ತಾರತಮ್ಯ ನಿಲ್ಲಿಸುವಂತೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಮಲಯಾಳಂ ದೇಶದ ಇತರ ಭಾಷೆಗಳಂತೆ ಭಾರತೀಯ ಭಾಷೆ. ಭಾಷೆ ತಾರತಮ್ಯವನ್ನು ನಿಲ್ಲಿಸಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT