ಮುಂಬೈ-ಕೊಲ್ಕತ್ತಾ ವಿಮಾನದಲ್ಲಿದ್ದ 8 ಮಂದಿಗೆ ಗಾಯ 
ದೇಶ

ಪ್ರಕ್ಷುಬ್ಧ ವಾತಾವರಣ: ಮುಂಬೈ-ಕೊಲ್ಕತ್ತಾ ವಿಮಾನದಲ್ಲಿದ್ದ 8 ಮಂದಿಗೆ ಗಾಯ

ಮುಂಬೈನಿಂದ ಕೊಲ್ಕತ್ತಾಗೆ ಬರುತ್ತಿದ್ದ ವಿಸ್ತಾರಾ ಏರ್ ಲೈನ್ಸ್ ಸಂಸ್ಥೆಯ ವಿಮಾನ ಕೊಲ್ಕತ್ತಾದಲ್ಲಿ ಇಳಿಯುವ ವೇಳೆ ಪ್ರಕ್ಷುಬ್ಧ ಹವಾಮಾನದಿಂದಾಗಿ (ಟರ್ಬಲೆನ್ಸ್) ಜೋಲಿ ಹೊಡೆದಿದ್ದು, ಪರಿಣಾಮ ವಿಮಾನದಲ್ಲಿದ್ದ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕೊಲ್ಕತ್ತಾ: ಮುಂಬೈನಿಂದ ಕೊಲ್ಕತ್ತಾಗೆ ಬರುತ್ತಿದ್ದ ವಿಸ್ತಾರಾ ಏರ್ ಲೈನ್ಸ್ ಸಂಸ್ಥೆಯ ವಿಮಾನ ಕೊಲ್ಕತ್ತಾದಲ್ಲಿ ಇಳಿಯುವ ವೇಳೆ ಪ್ರಕ್ಷುಬ್ಧ ಹವಾಮಾನದಿಂದಾಗಿ (ಟರ್ಬಲೆನ್ಸ್) ಜೋಲಿ ಹೊಡೆದಿದ್ದು, ಪರಿಣಾಮ ವಿಮಾನದಲ್ಲಿದ್ದ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ವಿಸ್ತಾರಾ ಏರ್ ಲೈನ್ಸ್ ಸಂಸ್ಥೆಯ ಯುಕೆ 775 ವಿಮಾನವು ಕೊಲ್ಕತ್ತಾದಲ್ಲಿ ಇಳಿಯುವ ವೇಳೆ ಪ್ರಕ್ಷುಬ್ಧ ಹವಾಮಾನದಿಂದಾಗಿ (ಟರ್ಬಲೆನ್ಸ್) ಜೋಲಿ ಹೊಡೆದಿದೆ. ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರ ಪೈಕಿ 8 ಮಂದಿ ಗಾಯಗೊಂಡಿದ್ದಾರೆ. ಆದರೆ ಪೈಲಟ್ ಗಳ ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾದ ದೊಡ್ಡ  ದುರಂತ ತಪ್ಪಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಿಮಾನ ನಿಲ್ದಾಣದ ನಿರ್ದೇಶಕ ಸಿ.ಪಟ್ಟಾಭಿ ಅವರು, ಪ್ರಕ್ಷುಬ್ಧ ಹವಾಮಾನದಿಂದ (ಟರ್ಬಲೆನ್ಸ್) ಜೋಲಿ ಹೊಡೆದಿದೆ. ಇದರಿಂದಾಗಿ ವಿಮಾನದಲ್ಲಿದ್ದ 8 ಮಂದಿಗೆ ಗಾಯಗಳಾಗಿವೆ. ಆದರೆ ವಿಮಾನವು ಸುರಕ್ಷಿತವಾಗಿ ಇಳಿದಿದೆ ಎಂದು ಹೇಳಿದ್ದಾರೆ.

ಘಟನೆ ವೇಳೆ ವಿಮಾನದಲ್ಲಿ 123 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದ್ದು, ವಿಮಾನವು ಕೊಲ್ಕತ್ತಾದಿಂದ 25 ನಾಟಿಕಲ್ ಮೈಲಿ ದೂರದಲ್ಲಿದ್ದಾಗ ಸಂಜೆ 4 ಗಂಟೆಯ ವೇಳೆ ಈ ಘಟನೆ ಸಂಭವಿಸಿದೆ. ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ತಮಗಾದ ಭಯಾನಕ ಅನುಭವವನ್ನು ಹಂಚಿಕೊಂಡಿದ್ದು, 'ವಿಮಾನವು  ಇಳಿಯವಾಗ ಕಾಣಿಸಿಕೊಂಡ ಪ್ರಕ್ಷುಬ್ಧ ಹವಾಮಾನದಿಂದಾಗಿ ವಿಮಾನ ತೀವ್ರವಾಗಿ ಅಲುಗಾಡಿತು. ಈ ಸಂದರ್ಭ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾದವು ಎಂದು ಹೇಳಿದ್ದಾರೆ. 

ಅಂತೆಯೇ ತೀವ್ರವಾಗಿ ಗಾಯಗೊಂಡ ಪ್ರಯಾಣಿಕರನ್ನು ಚಾರ್ನೋಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡ ಐವರಿಗೆ ಪ್ರಥಮ ಚಿಕಿತ್ಸೆಯ ಬಳಿಕ ಅವರ ಮನೆಗಳಿಗೆ ಕಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಸ್ತಾರ ಸಂಸ್ಥೆ ವಿಷಾದ
ಇನ್ನು ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿಸ್ತಾರಾ ಕಂಪನಿಯ ವಕ್ತಾರರು, ಪ್ರಯಾಣಿಕರಿಗೆ ಆದ ಈ ಕೆಟ್ಟ ಅನುಭವದಿಂದ ನಮಗೆ ನೋವಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿಯನ್ನು ನಾವೂ ಗಮನಿಸುತ್ತಿದ್ದೇವೆ. ಇಂಥ ಘಟನೆ ಏಕೆ ನಡೆಯಿತು ಎಂಬ ಬಗ್ಗೆ ಆದ್ಯತೆಯ ಮೇಲೆ ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ  ಮಾಹಿತಿಯನ್ನು ಶೀಘ್ರ ನೀಡುತ್ತೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT