ಕೆ ಸುರೇಂದ್ರನ್ 
ದೇಶ

ನಾಮಪತ್ರ ಹಿಂಪಡೆಯಲು ಆಮಿಷ: ಕೇರಳ ಬಿಜೆಪಿ ಮುಖ್ಯಸ್ಥನ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ

ನಾಮಪತ್ರ ಹಿಂಪಡೆಯಲು ಮಂಜೇಶ್ವರದ ಬಿಎಸ್ ಪಿ ಅಭ್ಯರ್ಥಿಗೆ ಆಮಿಷವೊಡ್ಡಿದ್ದ ಆರೋಪ ಹಿನ್ನಲೆ ಕೇರಳ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ. 

ಕಾಸರಗೋಡು: ನಾಮಪತ್ರ ಹಿಂಪಡೆಯಲು ಮಂಜೇಶ್ವರದ ಬಿಎಸ್ ಪಿ ಅಭ್ಯರ್ಥಿಗೆ ಆಮಿಷವೊಡ್ಡಿದ್ದ ಆರೋಪ ಹಿನ್ನಲೆ ಕೇರಳ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ. 

ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಮತ್ತು ಮಂಜೇಶ್ವರ ಎಲ್‌ಡಿಎಫ್ ಅಭ್ಯರ್ಥಿ ವಿ ವಿ ರಮೇಶನ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕಾಸರಗೋಡಿನ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ - II ಈ ನಿರ್ದೇಶನ ನೀಡಿದೆ. 

"ಚುನಾವಣೆಯಿಂದ ಹಿಂದೆ ಸರಿಯಲು ಲಂಚ ನೀಡಲಾಗಿದೆ ಎಂದು ಹೇಳಿದ ಕೆ ಸುಂದರ ಅವರ ಹೇಳಿಕೆಗಳ ಬಗ್ಗೆ ಪೊಲೀಸ್ ತನಿಖೆ ನಡೆಸಬೇಕೆಂದು ಒತ್ತಾಯಿಸಿ ನಾವು ನ್ಯಾಯಾಲಯ ಮೆಟ್ಟಿಲೇರಿದ್ದೇವೆ ಎಂದು ರಮೇಶನ್ ಪರ ವಕೀಲ ಸಿ.ಶುಕೂರ್ ಹೇಳಿದರು.

ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿಯಾಗಿದ್ದ ಕೆ. ಸುಂದರ್ ಮಾರ್ಚ್ 22ರಂದು ತಮ್ಮ ನಾಮಪತ್ರ ಹಿಂಪಡೆದಿದ್ದರು. ಕೆ. ಸುಂದರ ಮತ್ತು ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಹೆಸರು ತಾಳೆಯಾಗುವುದರಿಂದ ನಾಮಪತ್ರ ಹಿಂಪಡೆಯುವಂತೆ ಆಮಿಷ ಒಡ್ಡಿದ್ದರು ಎಂದು ಆರೋಪಿಸಲಾಗಿದೆ. 

ಬಿಜೆಪಿ ನಾಯಕರು ನಾಮಪತ್ರ ಹಿಂಪಡೆದುಕೊಳ್ಳುವಂತೆ ಆಮಿಷವೊಡ್ಡಿದ್ದರು. ನಾನು 15 ಲಕ್ಷ ರೂಪಾಯಿ ಕೇಳಿದ್ದೆ. ಆದರೆ ಅವರು ನನಗೆ ಕೇವಲ 2.5 ಲಕ್ಷ ರೂಪಾಯಿ ಹಾಗೂ 15 ಸಾವಿರ ಮೌಲ್ಯದ ಮೊಬೈಲ್ ಫೋನ್ ನೀಡಿದ್ದರು. ಮಂಜೇಶ್ವರದಲ್ಲಿ ಬಿಜೆಪಿ ಗೆದ್ದರೆ ಕರ್ನನಾಟಕದಲ್ಲಿ ಒಂದು ಮದ್ಯದ ಅಂಗಡಿಗೆ ಅವಕಾಶ ಕೊಡಿಸಬೇಕು ಎಂದು ಕೇಳಿದ್ದರೆ. ಆದರೆ ಚುನಾವಣೆ ಮುಗಿದ ನಂತರ ಯಾರೂ ನನ್ನನ್ನು ಸಂಪರ್ಕಿಸಲಿಲ್ಲ ಎಂದು ಸುಂದರ ಆರೋಪಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT