ಪ್ರಧಾನಿ ಮೋದಿ 
ದೇಶ

ಪುಣೆ ಅಗ್ನಿ ಅವಘಡ, ಪಶ್ಚಿಮ ಬಂಗಾಳ ಸಿಡಿಲು ದುರಂತ; ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ ಮಾಡಿದ ಪ್ರಧಾನಿ ಮೋದಿ

ಪುಣೆಯಲ್ಲಿ ಸಂಭವಿಸಿರುವ ಭೀಕರ ಅಗ್ನಿ ಅವಘಡ ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆದ ಸಿಡಿಲು ಬಡಿದು ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ಸಂತ್ರಸ್ಥರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ನವದೆಹಲಿ: ಪುಣೆಯಲ್ಲಿ ಸಂಭವಿಸಿರುವ ಭೀಕರ ಅಗ್ನಿ ಅವಘಡ ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆದ ಸಿಡಿಲು ಬಡಿದು ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ಸಂತ್ರಸ್ಥರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಮೂಲಗಳ ಪ್ರಕಾರ ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಮಂದಿ ಕಾರ್ಮಿಕರು ಸಾವನ್ನಪ್ಪಿ ಹಲವಾರು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿ 8ಕ್ಕೂ ಹೆಚ್ಚು  ಅಗ್ನಿಶಾಮಕ ದಳ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದು, ಈ ವಿಚಾರ ತಿಳಿದ ಕೂಡಲೇ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ಘೋಷಣೆ ಮಾಡಿದ್ದಾರೆ.

ಅವಘಡದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಸಿಡಿಲು ದುರಂತ ಸಂತ್ರಸ್ಥರಿಗೂ ಪರಿಹಾರ ಘೋಷಣೆ
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ್ದ ಸಿಡಿಲು ದುರಂತ ಸಂತ್ರಸ್ಥರಿಗೂ ಪರಿಹಾರ ನೀಡಿಕೆಗೆ ಅನುಮೋದನೆ ನೀಡಿದ್ದು, ಸಿಡಿಲು ಬಡಿದು ಸಾವನ್ನಪ್ಪಿದವರ ಕುಟುಂಬಸ್ಥರಿಗೆ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT