ವೈಷ್ಣೋದೇವಿ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ (ಪಿಟಿಐ ಚಿತ್ರ) 
ದೇಶ

ಜಮ್ಮು: ವೈಷ್ಣೋದೇವಿ ದೇಗುಲ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ, ನಗದು-ದಾಖಲೆ ಭಸ್ಮ

ಜಮ್ಮುವಿನ ಪ್ರಸಿದ್ಧ ಯಾತ್ರಾತಾಣ ವೈಷ್ಣೋದೇವಿ ದೇವಾಲಯದ ಸಂಕೀರ್ಣದೊಳಗಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭಸಿದ್ದು, ಸಾಕಷ್ಟು ಪ್ರಮಾಣದ ನಗದು ಮತ್ತು ದಾಖಲೆಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಜಮ್ಮು: ಜಮ್ಮುವಿನ ಪ್ರಸಿದ್ಧ ಯಾತ್ರಾತಾಣ ವೈಷ್ಣೋದೇವಿ ದೇವಾಲಯದ ಸಂಕೀರ್ಣದೊಳಗಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭಸಿದ್ದು, ಸಾಕಷ್ಟು ಪ್ರಮಾಣದ ನಗದು ಮತ್ತು ದಾಖಲೆಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ನಡೆದಿದೆ ಎಂದು ಹೇಳಲಾಗಿದ್ದು, ಸಂಜೆ 4.15 ರ ಸುಮಾರಿಗೆ ಗರ್ಭಗೃಹದ ಪಕ್ಕದಲ್ಲಿರುವ ಕಾಳಿಕಾ ಭವನದ ನಗದು ಎಣಿಕೆಯ ಕೋಣೆಯೊಳಗೆ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವುಗಳು ಸಂಭವಿಸಿಲ್ಲ. ಆದರೆ ಬೆಂಕಿಯಿಂದಾಗಿ ಅಪಾರ ಪ್ರಮಾಣದ ನಗದು ಸೇರಿದಂತೆ ದಾಖಲೆಗಳು ಸುಟ್ಟು ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ರಿಯಾಸಿ ಜಿಲ್ಲೆಯ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ಶೈಲೇಂದರ್‌ ಸಿಂಗ್ ಅವರು ಪ್ರತಿಕ್ರಿಯೆ ನೀಡಿದ್ದು, ಮಾತಾ ವೈಷ್ಣೋದೇವಿ ದೇವಾಲಯ ಸಂಕೀರ್ಣದ ಒಳಗೆ ಇರುವ ಗರ್ಭಗೃಹದ ಪಕ್ಕದಲ್ಲಿರುವ ಕಾಳಿಕಾ ಭವನದ ನಗದು ಎಣಿಕೆಯ ಕೋಣೆಯೊಳಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಗೆ ವಿದ್ಯುತ್  ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂತಾರಾ ಅಪಹಾಸ್ಯ ಪ್ರಕರಣ: 'ಸೂಪರ್ ಸ್ಟಾರ್ ಆದ್ರೇನು.. ನಾಲಿಗೆ ಮೇಲೆ ಹಿಡಿತ ಇರ್ಬೇಕು..': ನಟ ರಣವೀರ್ ಸಿಂಗ್ ಹೈಕೋರ್ಟ್ ಚಾಟಿ!

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ: ಆದರೆ ದೇಶದ ಹಿತಕ್ಕಾಗಿ ಇದು ಒಳ್ಳೆಯದ್ದು ಎಂದ ಖರ್ಗೆ

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ, 'ನ್ಯಾಯಬೇಕು.. ನನ್ನಂತೆಯೇ ಸಾಕಷ್ಟು ಯುವತಿಯರಿಗೆ ದೌರ್ಜನ್ಯ'

SCROLL FOR NEXT