ಸಂಗ್ರಹ ಚಿತ್ರ 
ದೇಶ

ಮಲಯಾಳಂ ಮಾತಾಡಬೇಡಿ ಆದೇಶ: ವಿವಾದ ಭುಗಿಲೆದ್ದ ಬಳಿಕ ಆದೇಶ ವಾಪಸ್ ಪಡೆದ ದೆಹಲಿ ಆಸ್ಪತ್ರೆ!

ದೆಹಲಿಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಗೋವಿಂದ್ ವಲ್ಲಭ್ ಪಂತ್ ಇನ್​ಸ್ಟಿಟ್ಯೂಟ್ (ಜಿಐಪಿಎಂಇಆರ್) ತನ್ನ ಎಲ್ಲಾ ಶುಶ್ರೂಷಾ ಸಿಬ್ಬಂದಿಗೆ ಸಂವಹನಕ್ಕಾಗಿ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಬಳಸಬೇಕು, ಮಲಯಾಳಂನಲ್ಲಿ ಮಾತನಾಡಬಾರದು ಎಂದು ನೀಡಲಾಗಿದ್ದ ಆದೇಶವನ್ನು ಬುಧವಾರ ಹಿಂಪಡೆದುಕೊಂಡಿದೆ. 

ನವದೆಹಲಿ: ದೆಹಲಿಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಗೋವಿಂದ್ ವಲ್ಲಭ್ ಪಂತ್ ಇನ್​ಸ್ಟಿಟ್ಯೂಟ್ (ಜಿಐಪಿಎಂಇಆರ್) ತನ್ನ ಎಲ್ಲಾ ಶುಶ್ರೂಷಾ ಸಿಬ್ಬಂದಿಗೆ ಸಂವಹನಕ್ಕಾಗಿ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಬಳಸಬೇಕು, ಮಲಯಾಳಂನಲ್ಲಿ ಮಾತನಾಡಬಾರದು ಎಂದು ನೀಡಲಾಗಿದ್ದ ಆದೇಶವನ್ನು ಬುಧವಾರ ಹಿಂಪಡೆದುಕೊಂಡಿದೆ. 

ಮಲಯಾಳಂ ಭಾಷೆಯ ಬಳಕೆಯ ವಿರುದ್ಧ ಜಿಐಪಿಎಂಇಆರ್​ಗೆ ದೂರು ಬಂದಿದೆ. ಜಿಐಪಿಎಂಇಆರ್​ನಲ್ಲಿ ಕೆಲಸದ ಸ್ಥಳಗಳಲ್ಲಿ ಸಂವಹನಕ್ಕಾಗಿ ಮಲಯಾಳಂ ಭಾಷೆಯನ್ನು ಬಳಸಲಾಗುತ್ತಿದೆ ಎಂಬ ಬಗ್ಗೆ ದೂರು ಬಂದಿದೆ. ಆದರೆ ಗರಿಷ್ಠ ರೋಗಿಗಳು ಮತ್ತು ಸಹೋದ್ಯೋಗಿಗಳು ಈ ಭಾಷೆಯನ್ನು ತಿಳಿದಿಲ್ಲ. ಇದರಿಂದ ಸಾಕಷ್ಟು ಅನಾನುಕೂಲತೆಗಳು ಉಂಟಾಗುತ್ತವೆ. ಆದ್ದರಿಂದ ಸಂವಹನಕ್ಕಾಗಿ ಹಿಂದಿ ಮತ್ತು ಇಂಗ್ಲಿಷ್ ಅನ್ನು ಮಾತ್ರ ಬಳಸುವಂತೆ ಎಲ್ಲಾ ನರ್ಸಿಂಗ್ ಸಿಬ್ಬಂದಿಗೆ ನಿರ್ದೇಶಿಸಲಾಗಿದೆ. ಇಲ್ಲದಿದ್ದರೆ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಈ ಹಿಂದೆ ಜಿಐಪಿಎಂಇಆರ್ ಸುತ್ತೋಲೆ ಹೊರಡಿಸಿತ್ತು.

ಇದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದರಾದ ಕೆ.ಸಿ.ವೇಣುಗೋಪಾಲ್, ಶಶಿ ತರೂರ್ ಸೇರಿದಂತೆ ಹಲವು ನಾಯಕರು ತಮ್ಮ ಟ್ವಿಟರ್​ನಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದರು.

ವಿವಾದ ಭುಗಿಲೇಳುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಆಸ್ಪತ್ರೆಯ ಆಡಳಿತ ಮಂಡಳಿಯ ಅಧಿಕಾರಿಗಳು ಇದೀಗ ಆದೇಶವನ್ನು ವಾಪಸ್ ಪಡೆದುಕೊಂಡಿದ್ದು, ತಮ್ಮ ಗಮನಕ್ಕೆ ಬಾರದೆ ಈ ಬೆಳವಣಿಗೆ ನಡೆದಿದೆ. ಹೀಗಾಗಿ ಈ ಆದೇಶ ಹಿಂಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಆದೇಶವು ಮಲಯಾಳಂ ಮಾತನಾಡುವ ಸಿಬ್ಬಂದಿಗಳ ವಿರುದ್ಧವಾಗಿರಲಿಲ್ಲ. ಆದೇಶದ ಹಿಂದೆ ಯಾವುದೇ ದುರುದ್ದೇಶವೂ ಇಲ್ಲ. ಸುತ್ತೋಲೆಯನ್ನು ತಪ್ಪಾಗಿ ಆರ್ಥೈಸಲಾಗಿದೆ. ಈ ಕುರಿತು ಸ್ಪಷ್ಟನೆ ನೀಡಲು ನನಗೆ ಅವಕಾಶವನ್ನೂ ನೀಡಲಾಗಿಲ್ಲ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಹೇಳಿದ್ದಾರೆ. 

ಆಸ್ಪತ್ರೆಯ ಕೆಲ ಸಿಬ್ಬಂದಿಗಳು ಹಾಗೂ ರೋಗಿಗಳು ಸ್ಥಳೀಯ ಭಾಷೆ ಬಳಕೆ ಮಾಡುವಂತೆ ಹೇಳಿ ದೂರುಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಾಷೆಯಿಂದಾಗುವ ಗೊಂದಲಗಳ ನಿವಾರಣೆಗೆ ಸುತ್ತೋಲೆಯನ್ನು ಹೊರಡಿಸಲಾಗಿತ್ತು. ಯಾವುದೇ ಸಿಬ್ಬಂದಿಗೂ ನೋವುಂಟು ಮಾಡುವ ಉದ್ದೇಶ ಆಗಿರಲಿಲ್ಲ. ಸುತ್ತೋಲೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!