ರೈತ ನಾಯಕ ಟಿಕಾಯತ್ ಜೊತೆ ಮಮತಾ ಬ್ಯಾನರ್ಜಿ 
ದೇಶ

ನಿಮ್ಮ ಚಳುವಳಿ ಇಡೀ ದೇಶಕ್ಕಾಗಿ ಇದೆ: ರೈತರ ಪ್ರತಿಭಟನೆಗೆ ಮಮತಾ ಬೆಂಬಲ 

ಕೇಂದ್ರ ಸರ್ಕಾರ 2020 ರಲ್ಲಿ ಜಾರಿಗೆ ತಂದಿದ್ದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಬೆಂಬಲ ವ್ಯಕ್ತಪಡಿಸಿದ್ದಾರೆ. 

ಕೋಲ್ಕತ್ತ: ಕೇಂದ್ರ ಸರ್ಕಾರ 2020 ರಲ್ಲಿ ಜಾರಿಗೆ ತಂದಿದ್ದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಬೆಂಬಲ ವ್ಯಕ್ತಪಡಿಸಿದ್ದಾರೆ. 

ರಾಕೇಶ್ ಟಿಕಾಯತ್ ಹಾಗೂ ಯುಧ್ವೀರ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತನಾಡಿದ ಬಳಿಕ ಮಾತನಾಡಿರುವ ಮಮತಾ ಬ್ಯಾನರ್ಜಿ ರಾಜ್ಯಗಳು ನೀತಿಗಳ ವಿಷಯವಾಗಿ ಸಂವಾದ ನಡೆಸುವುದಕ್ಕೆ ವೇದಿಕೆ ಇರಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ರಾಜ್ಯಗಳನ್ನು ಮೌನವಾಗಿಸುವುದು ಒಕ್ಕೂಟ ವ್ಯವಸ್ಥೆಗೆ ಒಳಿತಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನಿಮ್ಮ ಚಳುವಳಿ ಇಡೀ ದೇಶಕ್ಕಾಗಿ ಇದೆ ನಿಮ್ಮ ಚಳುವಳಿಗೆ ಬೆಂಬಲ ಇದೆ ಎಂದು ಮಮತಾ ಬ್ಯಾನರ್ಜಿ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ. 

ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಪಶ್ಚಿಮ ಬಂಗಾಳದಾಚೆಗೂ ವಿಸ್ತರಿಸುವ ಯೋಜನೆಯನ್ನು ಘೋಷಿಸಿದ ಬೆನ್ನಲ್ಲೇ ಉತ್ತರ ಭಾರತ ಮೂಲದ ರೈತ ಸಂಘಟನೆಗಳಿಗೆ ಟಿಎಂಸಿ ಬೆಂಬಲ ಘೋಷಿಸಿದೆ. ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೋ ವೋಟ್ ಫಾರ್ ಬಿಜೆಪಿ ಅಭಿಯಾನಕ್ಕೆ ಟಿಕಾಯತ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಹಾಗೂ ಸಿಂಗ್ ಬೆಂಬಲಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ

ಹೈಕಮಾಂಡ್‌ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

SCROLL FOR NEXT