ಕಪ್ಪು ಶಿಲೀಂಧ್ರ 
ದೇಶ

3 ವಾರಗಳಲ್ಲಿ ಬ್ಲಾಕ್ ಫಂಗಸ್ ಗೆ 2100 ಮಂದಿ ಸಾವು, ಸೋಂಕಿತರ ಪ್ರಮಾಣ ಶೇ.150ರಷ್ಟು ಏರಿಕೆ

ದೇಶದಲ್ಲಿ ಮಾರಕ ಬ್ಲಾಕ್ ಫಂಗಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಪ್ರಮಾಣದಲ್ಲಿ ಶೇ.150ರಷ್ಟು ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 31 ಸಾವಿರಕ್ಕೆ ಏರಿಕೆಯಾಗಿದೆ.

ನವದೆಹಲಿ: ದೇಶದಲ್ಲಿ ಮಾರಕ ಬ್ಲಾಕ್ ಫಂಗಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಪ್ರಮಾಣದಲ್ಲಿ ಶೇ.150ರಷ್ಟು ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 31 ಸಾವಿರಕ್ಕೆ ಏರಿಕೆಯಾಗಿದೆ.

ಅಂತೆಯೇ ಬ್ಲಾಕ್ ಫಂಗಸ್ ನಿಂದಾಗಿ ಸಾವನ್ನಪ್ಪಿದವರ ಪ್ರಮಾಣದಲ್ಲಿ ಶೇ.50ರಷ್ಟು ಏರಿಕೆಯಾಗಿದ್ದು, ಕಳೆದ ಮೂರು ವಾರಗಳಲ್ಲಿ ದೇಶಾದ್ಯಂತ ಬ್ಲಾಕ್ ಫಂಗಸ್ ಗೆ ಬಲಿಯಾದವರ ಸಂಖ್ಯೆ 2100ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ದೇಶದಲ್ಲಿ ಬ್ಲಾಕ್ ಫಂಗಸ್ ಸೋಂಕಿನ ಸೋಂಕಿನ ಏರಿಕೆ ಪ್ರಮಾಣವೂ ಶೇ.150ಕ್ಕಿಂತ ಹೆಚ್ಚಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಒಂದೆಡೆ ಕೊರೊನಾ ಸೋಂಕು ವ್ಯಾಪಕ ಪ್ರಮಾಣದಲ್ಲಿ ಕಾಣಿಸಿಕೊಂಡು ಈಗ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಕಪ್ಪು ಶಿಲೀಂದ್ರ ಪ್ರಕರಣಗಳು ಹೆಚ್ಚಾಗುತ್ತಿರುವುದು ಆರೋಗ್ಯ  ಇಲಾಖೆಯ ಕಳವಳಕ್ಕೆ ಕಾರಣವಾಗಿದೆ.

ದೇಶದ ವಿವಿಧ ಭಾಗಗಳಲ್ಲಿ ಈವರೆಗೆ 31,216 ಬ್ಲಾಕ್ ಫಂಗಸ್ ಪ್ರಕರಣಗಳು ಮತ್ತು 2,109 ಸಾವುಗಳು ವರದಿಯಾಗಿವೆ. ಬ್ಲಾಕ್​ ಫಂಗಸ್​ ಸೋಂಕು ಪ್ರಕರಣ ಮತ್ತು ಸಾವಿನ ಏರಿಕೆಗೆ ಆಂಫೊಟೆರಿಸಿನ್-ಬಿ ಔಷಧದ ತೀವ್ರ ಕೊರತೆಯೇ ಕಾರಣ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಹೆಚ್ಚು ಹಾನಿ‌ ಸಂಭವಿಸಿರುವ ರಾಜ್ಯಗಳ ಪಟ್ಟಿಯಲ್ಲಿಯೂ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು. ಈವರೆಗೆ 7,057 ಪ್ರಕರಣಗಳು ದಾಖಲಾಗಿದ್ದು, 609 ಸಾವುಗಳು ಸಂಭವಿಸಿವೆ. ಗುಜರಾತ್ 5,418 ಪ್ರಕರಣಗಳು ಮತ್ತು 323 ಸಾವುಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, 2,976  ಪ್ರಕರಣಗಳೊಂದಿಗೆ ರಾಜಸ್ಥಾನ ಮೂರನೇ ಸ್ಥಾನದಲ್ಲಿದೆ. ಮೇ 25 ರಂದು ಮಹಾರಾಷ್ಟ್ರದಲ್ಲಿ ಕೇವಲ 2,770 ಕಪ್ಪು ಶಿಲೀಂದ್ರ ಪ್ರಕರಣಗಳು ಮತ್ತು ಗುಜರಾತ್‌ನಲ್ಲಿ 2,859 ಪ್ರಕರಣಗಳು ವರದಿಯಾಗಿವೆ.

ಉತ್ತರ ಪ್ರದೇಶದಲ್ಲಿ 1,744 ಪ್ರಕರಣಗಳು ಮತ್ತು 142 ಸಾವುಗಳು ಮತ್ತು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1,200 ಪ್ರಕರಣಗಳು ಮತ್ತು 125 ಸಾವುಗಳು ವರದಿಯಾಗಿವೆ. ಮೇ 25 ರಂದು ಒಂದೇ ದಿನ ಉತ್ತರ ಪ್ರದೇಶದಲ್ಲಿ ಕೇವಲ 701 ಪ್ರಕರಣಗಳು ಮತ್ತು ನೆರೆಯ ದೆಹಲಿಯಲ್ಲಿ 119 ಪ್ರಕರಣಗಳು ದಾಖಲಾಗಿವೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT