ಸೆರೋ ಸರ್ವೆ (ಸಂಗ್ರಹ ಚಿತ್ರ) 
ದೇಶ

ಕೋವಿಡ್-19 ಸೋಂಕು ಪ್ರಸರಣದ ಮಾಹಿತಿ ತಿಳಿಯಲು ಐಸಿಎಂಆರ್ ನಿಂದ ಶೀಘ್ರದಲ್ಲೇ ದೇಶಾದ್ಯಂತ ಸೆರೋ ಸರ್ವೆ: ಆರೋಗ್ಯ ಸಚಿವಾಲಯ

ದೇಶದಲ್ಲಿ ಮಾರಕ ಕೊರೋನಾ ಸೋಂಕಿನ 2ನೇ ಅಲೆಯ ಆರ್ಭಟ ತಗ್ಗಿದೆಯಾದರೂ ಸಾಂಕ್ರಾಮಿಕದ ಪ್ರಸರಣ ಕುರಿತ ಅಧ್ಯಯನಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲು ಶೀಘ್ರದಲ್ಲೇ ಐಸಿಎಂಆರ್ ಸೆರೋ ಸರ್ವೆ ನಡೆಸಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ಸೋಂಕಿನ 2ನೇ ಅಲೆಯ ಆರ್ಭಟ ತಗ್ಗಿದೆಯಾದರೂ ಸಾಂಕ್ರಾಮಿಕದ ಪ್ರಸರಣ ಕುರಿತ ಅಧ್ಯಯನಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲು ಶೀಘ್ರದಲ್ಲೇ ಐಸಿಎಂಆರ್ ಸೆರೋ ಸರ್ವೆ ನಡೆಸಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಇತ್ತೀಚೆಗಷ್ಟೇ ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ಆರ್ಭಟ ಮೆರೆದಿತ್ತು. ಕಳೆದೊಂದು ವಾರದಿಂದ ಈ ಅಬ್ಬರ ತಗ್ಗಿದ್ದು, ಸತತ 55ಕ್ಕೂ ಹೆಚ್ಚು ದಿನಗಳ ಬಳಿಕ ಇದೇ ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆಯಾಗಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ  ದೇಶದಲ್ಲಿನ ಕೋವಿಡ್ ಪರಿಸ್ಥಿತಿ ಹಾಗೂ ಜನರಲ್ಲಿ ಪ್ರತಿಕಾಯಗಳು ಎಷ್ಟರ ಮಟ್ಟಿಗೆ ಉತ್ಪತ್ತಿಯಾಗಿವೆ ಎಂಬುದನ್ನು ತಿಳಿದುಕೊಳ್ಳಲು ಐಸಿಎಂಆರ್ ದೇಶಾದ್ಯಂತ ಸೆರೋ ಸರ್ವೆ ನಡೆಸಲಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಇಲಾಖೆಯ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರು, 'ದೇಶದಲ್ಲಿ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ ಶೇ 70ರಷ್ಟು ಕಡಿಮೆಯಾಗಿದೆ. ದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ಒಟ್ಟು ಸೋಂಕಿತರ ಸಂಖ್ಯೆ ಕಳೆದ  ನಾಲ್ಕು ದಿನಗಳಿಂದ ಒಂದು ಲಕ್ಷಕ್ಕೂ ಕಡಿಮೆಯಾಗಿದೆ. ಭಾರತದ 196 ಜಿಲ್ಲೆಗಳಲ್ಲಿ 100ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ದೇಶಾದ್ಯಂತ ಹೊಸ ಪ್ರಕರಣಗಳ ಪತ್ತೆ ಕಡಿಮೆಯಾಗಿದ್ದು, ಸೋಂಕಿತರು ಗುಣಮುಖರಾಗುವ ಪ್ರಮಾಣವೂ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ರಿಕವರಿ ರೇಟ್ ಶೇ  94.9ರಷ್ಟು ಇದೆ. 4 ದಿನಗಳಿಂದ ಪಾಸಿಟಿವಿಟಿ ರೇಟ್ ಶೇ.5ಕ್ಕಿಂತ ಕಡಿಮೆ ಇದೆ ಎಂದು ಅವರು ತಿಳಿಸಿದ್ದಾರೆ.

ಐಸಿಎಂಆರ್ ನಿಂದ ಸೆರೋ ಸರ್ವೆ
ಇದೇ ವೇಳೆ ಜನರಲ್ಲಿ ಪ್ರತಿಕಾಯಗಳು ಎಷ್ಟರಮಟ್ಟಿಗೆ ಉತ್ಪತ್ತಿಯಾಗಿವೆ ಎಂಬುದನ್ನು ತಿಳಿದುಕೊಳ್ಳಲು ರಾಷ್ಟ್ರೀಯ ಸೆರೊ ಸಮೀಕ್ಷೆ ಇದೇ ತಿಂಗಳಲ್ಲಿ ಆರಂಭವಾಗುವ ಸಾಧ್ಯತೆಯಿದೆ. ರಾಜ್ಯಗಳು ಸಹ ರಾಜ್ಯವಾರು ಸೆರೊ ಸರ್ವೆ ನಡೆಸಬೇಕು ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ತಿಳಿಸಿದರು. ಇದೇ  ವೇಳೆ ಕಳೆದ ಮೇ 7ರಂದು ಕೊರೊನಾ ಸೋಂಕು ಅತ್ಯಂತ ಹೆಚ್ಚಿತ್ತು. ಅಲ್ಲಿಂದಾಚೆಗೆ ಸೋಂಕು ಸತತವಾಗಿ ಕಡಿಮೆಯಾಗುತ್ತಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿ​ಗೆ 2ನೇ ಡೋಸ್ ನೀಡಲು ರಾಜ್ಯಗಳು ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಕೋವ್ಯಾಕ್ಸಿನ್ ಗೆ ತುರ್ತುಬಳಕೆಗೆ ಅನುಮತಿ ನಿರಾಕರಣೆ: ಎಫ್ ಡಿಎ ನಿರ್ಧಾವನ್ನು ಗೌರವಿಸುತ್ತೇವೆ
ಅಂತೆಯೇ ಭಾರತ್ ಬಯೋಟೆಕ್‌ನ ಕೋವಿಡ್-19 ಲಸಿಕೆ ಕೊವಾಕ್ಸಿನ್‌ಗೆ ತುರ್ತು ಬಳಕೆಯ ಅನುಮತಿ (ಇಯುಎ) ನಿರಾಕರಿಸಿರುವ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಕುರಿತು ಆರೋಗ್ಯ ಸಚಿವಾಲಯ, ನಾವು ಪ್ರತಿ ದೇಶದ ನಿಯಂತ್ರಣ ವ್ಯವಸ್ಥೆಯನ್ನು ಗೌರವಿಸುತ್ತೇವೆ, ಆದರೆ ಇದು  ಭಾರತದ ಲಸಿಕೆ ಕಾರ್ಯಕ್ರಮದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪೌಲ್ ಅಭಿಪ್ರಾಯಪಟ್ಟರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT