ಜಿತಿನ್ ಪ್ರಸಾದ 
ದೇಶ

ಜಿತಿನ್ ಪ್ರಸಾದ ಸೇರ್ಪಡೆ ಕುರಿತು ಬಿಜೆಪಿಯನ್ನು ಅಣಕಿಸಿದ ಶಿವಸೇನೆ: ಸದೃಢ ತಂಡ ಕಟ್ಟಲು ಕಾಂಗ್ರೆಸ್ ಗೆ ಸಲಹೆ

ಉತ್ತರ ಪ್ರದೇಶ ಮುಖಂಡ ಜಿತಿನ್ ಪ್ರಸಾದ ಅವರನ್ನು ಪಕ್ಷದೊಳಗೆ ಸೇರಿಸಿಕೊಂಡು ಬಿಜೆಪಿ ಸಂಭ್ರಮಿಸುತ್ತಿರುವುದು ಹಾಸ್ಯಾಸ್ಪದ ಎಂದು ಶಿವಸೇನೆ ಶುಕ್ರವಾರ ಬಣ್ಣಿಸಿದೆ. ಆದರೆ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ತನ್ನ ಪಕ್ಷದೊಳಗೆ ಸದೃಢ ತಂಡವೊಂದನ್ನು ರಚಿಸಲಿದ್ದಾರೆ ಎಂದು ಹೇಳಿದೆ.

ಮುಂಬೈ: ಉತ್ತರ ಪ್ರದೇಶ ಮುಖಂಡ ಜಿತಿನ್ ಪ್ರಸಾದ ಅವರನ್ನು ಪಕ್ಷದೊಳಗೆ ಸೇರಿಸಿಕೊಂಡು ಬಿಜೆಪಿ ಸಂಭ್ರಮಿಸುತ್ತಿರುವುದು ಹಾಸ್ಯಾಸ್ಪದ ಎಂದು ಶಿವಸೇನೆ ಶುಕ್ರವಾರ ಬಣ್ಣಿಸಿದೆ. ಆದರೆ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ತನ್ನ ಪಕ್ಷದೊಳಗೆ ಸದೃಢ ತಂಡವೊಂದನ್ನು ರಚಿಸಲಿದ್ದಾರೆ ಎಂದು ಹೇಳಿದೆ.

ಯುವ ನಾಯಕರಾಗಿದ್ದ ಜಿತಿನ್ ಪ್ರಸಾದ  ಕಾಂಗ್ರೆಸ್ ಪಕ್ಷಕ್ಕೆ ಪ್ರಯೋಜನಕಾರಿಯಾಗಿರಿಲಲ್ಲ, ಬಿಜೆಪಿಯಲ್ಲೂ ಅದೇ ರೀತಿಯಲ್ಲಿ ಇರಲಿದ್ದಾರೆ ಎಂದು ಪಕ್ಷದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.

ಜಿತಿನ್ ಪ್ರಸಾದ, ಜೋತ್ಯಿರಾದಿತ್ಯ ಸಿಂಧಿಯಾ, ಸಚಿನ್ ಪೈಲಟ್ ಯುವ ಮುಖಂಡರಾಗಿದ್ದು, ಅವರಿಂದ ಹೆಚ್ಚಿನದ್ದನ್ನು ನಿರೀಕ್ಷಿಸಲಾಗುತ್ತದೆ. ಅಹ್ಮದ್ ಪಟೇಲ್, ರಾಜೀವ್ ಸತಾವ್ ನಿಧನದ ನಂತರ ಕಾಂಗ್ರೆಸ್ ನಲ್ಲಿ ಈಗಾಗಲೇ ನಿರ್ವಾತವಿದೆ. ಯುವ ಮುಖಂಡರು ಬಿಜೆಪಿ ಹಾದಿಯಲ್ಲಿ ಸಾಗುವುದು ಒಳ್ಳೆಯದಲ್ಲಾ ಎಂದು ಶಿವಸೇನೆ ಹೇಳಿದೆ.

ಪ್ರಸಾದ ಅವರ ಕುಟುಂಬಸ್ಥರು ಕಾಂಗ್ರೆಸ್ ಪಕ್ಷದ ನಂಬಿಕಸ್ತರು. ಮನ್ ಮೋಹನ್ ಸಿಂಗ್ ಅವರ ಮಂತ್ರಿ ಮಂಡಲದಲ್ಲಿ ಪ್ರಸಾದ ಕೂಡಾ ಮಂತ್ರಿಯಾಗಿದ್ದರು. ಆದಾಗ್ಯೂ, ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದರು. ಇದೀಗ ಅವರನ್ನು ಸೇರ್ಪಡೆ ಮಾಡಿಕೊಂಡು ಬಿಜೆಪಿ ಸಂಭ್ರಮಿಸುತ್ತಿದೆ. ಜಾತಿ ರಾಜಕಾರಣ ಇದರ ಹಿಂದೆ ಇದೆ. ಉತ್ತರ ಪ್ರದೇಶದಲ್ಲಿನ ಬ್ರಾಹ್ಮಣ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಶಿವಸೇನೆ ಹೇಳಿದೆ.

ಬಂಡಾಯ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸೀಮಿತವಾಗಿಲ್ಲ, ಮುಂದೆ ಏನು ಮಾಡಬೇಕು, ಹೇಗೆ ಪಕ್ಷದ ಆಸ್ತಿತ್ವ ಉಳಿಸಿಕೊಳ್ಳಬೇಕೆಂಬ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆ ನಡೆಯುತ್ತಿಲ್ಲ. ಮಹಾರಾಷ್ಟ್ರ, ಕೇರಳ, ಮತ್ತು ಕರ್ನಾಟಕ ಹೊರತುಪಡಿಸಿದಂತೆ ಉಳಿದ ಎಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಆಸ್ತಿತ್ವಕ್ಕಾಗಿ ಹೋರಾಡಬೇಕಾಗಿದೆ. ಈ ರಾಜಕೀಯ ಅಸಮಾತೋಲನ ಪ್ರಜಾಪ್ರಭುತ್ವಕ್ಕೆ ಹಾನಿಯಾಗಲಿದೆ. ದೇಶ ಸ್ಥಾಪನೆಯಲ್ಲಿ ಕಾಂಗ್ರೆಸ್ ಕೊಡುಗೆ ನೀಡಿದೆ. ತಳಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕಾಗಿದೆ. ರಾಹುಲ್ ಗಾಂಧಿ ಈಗ ಪಕ್ಷದೊಳಗೆ ಸದೃಢ ತಂಡ ರಚಿಸಬೇಕಾಗಿದೆ ಎಂದು ಶಿವಸೇನೆ ಸಲಹೆ ನೀಡಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT