ಮುಂಬೈಯ ಗೇಟ್ ವೇ ಬಳಿ ಕಂಡುಬಂದ ದೃಶ್ಯ 
ದೇಶ

ಮುಂಬೈಯಲ್ಲಿ ಮುಂದುವರಿದ ಧಾರಾಕಾರ ಮಳೆ: ಅಂಧೇರಿ ಉಪನಗರದಲ್ಲಿ ಪ್ರವಾಹ, ಮುನ್ನೆಚ್ಚರಿಕೆ ಘೋಷಣೆ

ಕಳೆದ ಕೆಲವು ದಿನಗಳಿಂದ ತೀವ್ರ ಮಳೆ ಎದುರಿಸುತ್ತಿರುವ ಮುಂಬೈ ಮಹಾನಗರಿಯ ಹಲವು ಕಡೆಗಳಲ್ಲಿ ಪ್ರವಾಹವುಂಟಾಗಿದ್ದು ನಗರದ ಹಲವು ಪ್ರದೇಶಗಳಲ್ಲಿ ನೀರು ನುಗ್ಗಿವೆ, ಇಲ್ಲಿ ಮುಂಬಾರು ಮಳೆ ಮೊನ್ನೆ 9ಕ್ಕೆ ಆಗಮಿಸಿದೆ.

ಮುಂಬೈ: ಕಳೆದ ಕೆಲವು ದಿನಗಳಿಂದ ತೀವ್ರ ಮಳೆ ಎದುರಿಸುತ್ತಿರುವ ಮುಂಬೈ ಮಹಾನಗರಿಯ ಹಲವು ಕಡೆಗಳಲ್ಲಿ ಪ್ರವಾಹವುಂಟಾಗಿದ್ದು ನಗರದ ಹಲವು ಪ್ರದೇಶಗಳಲ್ಲಿ ನೀರು ನುಗ್ಗಿವೆ, ಇಲ್ಲಿ ಮುಂಬಾರು ಮಳೆ ಮೊನ್ನೆ 9ಕ್ಕೆ ಆಗಮಿಸಿದೆ.

ಇಂದು ಬೆಳಗ್ಗೆ ಸಿಯೊನ್ ಪೂರ್ವ ಮತ್ತು ಅಂಧೇರಿ ಉಪ ನಗರಗಳಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ ನಾಳೆ ಮತ್ತು ನಾಡಿದ್ದು ಮುಂಬೈಯಲ್ಲಿ ತೀವ್ರ ಮಳೆಯುಂಟಾಗಿ ನೆರೆ, ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ಮುನ್ನೆಚ್ಚರಿಕೆ ನೀಡಿದೆ.

ಜೂನ್ 13 ಮತ್ತು 14ರಂದು ಮುಂಬೈಯಲ್ಲಿ ತೀವ್ರ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಗ್ನಿ ಶಾಮಕ ದಳ, ವಿಪತ್ತು ನಿರ್ವಹಣಾ ದಳಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮುಂಬೈ ಮಹಾನಗರ ಪಾಲಿಕೆಯ ಇಲಾಖೆಗಳಾದ ಬೆಸ್ಟ್, ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗಳಿಗೆ ಸಹಕಾರ ನೀಡುವಂತೆ ಪರಿಸ್ಥಿತಿಯನ್ನು ಎದುರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ಹೇಳಿಕೆಯಲ್ಲಿ ತಿಳಿಸಿದೆ.

ತುರ್ತು ಆಶ್ರಯ ತಾಣಗಳನ್ನು ಮುಂಬೈಯಲ್ಲಿ ಶಿಕ್ಷಣ ಇಲಾಖೆ ತೆರೆಯುತ್ತಿದೆ. ವಸತಿ ಪ್ರದೇಶಗಳನ್ನು ಮಿತಿ ನದಿಯ ಹತ್ತಿರ ಬೃಹನ್ ಮುಂಬೈ ಮಹಾನಗರ ಪಾಲಿಕೆ ಗುರುತಿಸಿದ್ದು ಪರಿಸ್ಥಿತಿ ಕೈಮೀರಿ ಹೋದರೆ ಜನರನ್ನು ಈ ಆಶ್ರಯ ತಾಣಗಳಿಗೆ ವರ್ಗಾಯಿಸಲಾಗುತ್ತದೆ. ಎನ್ ಡಿಆರ್ ಎಫ್, ಕರಾವಳಿ ಪಡೆ ಮತ್ತು ನೌಕಾಪಡೆ ಜೊತೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಸಮನ್ವಯ ಸಾಧಿಸುತ್ತಿದೆ. ಅಗತ್ಯಬಿದ್ದರೆ ಈ ಪಡೆಗಳು ಸಹಕಾರ ನೀಡಲಿವೆ ಎಂದು ಪಾಲಿಕೆ ಹೇಳಿಕೆಯಲ್ಲಿ ತಿಳಿಸಿದೆ.

ಚರಂಡಿ ಮತ್ತು ಕಾಲುವೆಗಳ ಮೇಲೆ ಕಸಗಳನ್ನು,ಬೇಡದ ವಸ್ತುಗಳನ್ನು ಬಿಸಾಕಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಮೇಯರ್ ಕಿಶೋರಿ ಕಿಶೋರ್ ಪಡ್ನೇಕರ್ ತಿಳಿಸಿದ್ದಾರೆ.

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ಗಂಟೆಗಳಲ್ಲಿ ಹಗುರದಿಂದ ಕೂಡಿದ ಭಾರೀ ಮಳೆ ಸುರಿಯಲಿದ್ದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT