ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

ಸಾಂಕ್ರಾಮಿಕ ಎದುರಿಸಲು "ಒಂದೇ ಭೂಮಿ, ಒಂದೇ ಆರೋಗ್ಯ" ವಿಧಾನ ಅಳವಡಿಕೆಗೆ ಜಿ-7 ಶೃಂಗಸಭೆಯಲ್ಲಿ ಮೋದಿ ಕರೆ

ಜಿ-7 ಶೃಂಗಸಭೆಯ ಅಧಿವೇಶನದಲ್ಲಿ ವರ್ಚ್ಯುಯಲ್ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಾಂಕ್ರಾಮಿಕವನ್ನು ಪರಿಣಾಮಕಾರಿಯಾಗಿ ಎದುರಿಸುವುದಕ್ಕಾಗಿ ಜಾಗತಿಕ ಸಮುದಾಯ ಒನ್ ಹೆಲ್ತ್ ಒನ್ ಅರ್ತ್ (ಒಂದೇ ಭೂಮಿ ಒಂದೇ ಆರೋಗ್ಯ) ಕಾರ್ಯವಿಧಾನ ಅಳವಡಿಕೆಗೆ ಕರೆ ನೀಡಿದ್ದಾರೆ. 

ನವದೆಹಲಿ: ಜಿ-7 ಶೃಂಗಸಭೆಯ ಅಧಿವೇಶನದಲ್ಲಿ ವರ್ಚ್ಯುಯಲ್ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಾಂಕ್ರಾಮಿಕವನ್ನು ಪರಿಣಾಮಕಾರಿಯಾಗಿ ಎದುರಿಸುವುದಕ್ಕಾಗಿ ಜಾಗತಿಕ ಸಮುದಾಯ ಒನ್ ಹೆಲ್ತ್ ಒನ್ ಅರ್ತ್ (ಒಂದೇ ಭೂಮಿ ಒಂದೇ ಆರೋಗ್ಯ) ಕಾರ್ಯವಿಧಾನ ಅಳವಡಿಕೆಗೆ ಕರೆ ನೀಡಿದ್ದಾರೆ. 

"ಮುಂದಿನ ಸಾಂಕ್ರಾಮಿಕಗಳ ತಡೆಗೆ ಜಾಗತಿಕ ಏಕತೆ, ನಾಯಕತ್ವ, ಒಗ್ಗಟ್ಟಿಗೆ ಪ್ರಧಾನಿ ಕರೆ ನೀಡಿದ್ದು,  ಪ್ರಜಾಸತ್ತೀಯಹಾಗೂ ಪಾರದರ್ಶಕ ಸಮಾಜಗಳಿಗೆ ಇಂತಹ ಸವಾಲುಗಳನ್ನು ನಿಭಾಯಿಸುವಲ್ಲಿ ವಿಶೇಷ ಜವಾಬ್ದಾರಿ ಇದೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಇದೇ ವೇಳೆ ಡಬ್ಲ್ಯುಟಿಒ ಮುಂದಿಡಲಾಗಿರುವ, ಕೋವಿಡ್-19 ಸಂಬಂಧಿತ ತಂತ್ರಜ್ಞಾನಗಳನ್ನು ಪೇಟೆಂಟ್ ಮುಕ್ತಗೊಳಿಸುವ ಭಾರತ ಮತ್ತು ದಕ್ಷಿಣ ಆಫ್ರಿಕಾದ ಪ್ರಸ್ತಾವನೆಗೆ ಪ್ರಧಾನಿ ಮೋದಿ ಜಿ-7 ಬೆಂಬಲವನ್ನೂ ಕೋರಿದ್ದು ಜಾಗತಿಕ ಆರೋಗ್ಯ ಆಡಳಿತದ ಸುಧಾರಣೆಗೆ ಸಾಮೂಹಿಕ ಪ್ರಯತ್ನಗಳಿಗೂ ಭಾರತ ಬದ್ಧವಾಗಿದೆ ಎಂದು ಹೇಳಿದ್ದಾರೆ. 

ಯುಕೆ, ಕೆನಡಾ, ಫ್ರಾನ್ಸ್, ಜರ್ಮನಿ, ಇಟಾಲಿ, ಜಪಾನ್, ಅಮೆರಿಕಾಗಳು ಜಿ-7 ರಾಷ್ಟ್ರಗಳಾಗಿದ್ದು, ಆಯೋಜಕ ರಾಷ್ಟ್ರ ಬ್ರಿಟನ್ ಶೃಂಗಸಭೆಯಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳಲು ಭಾರತ, ಆಸ್ಟ್ರೇಲಿಯಾ, ದಕ್ಷಿಣ ಕೊರಿಯಾ, ದಕ್ಷಿಣ ಆಫ್ರಿಕಾಗಳನ್ನು ಆಹ್ವಾನಿಸಿತ್ತು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT