ಸೋನು ಸೂದ್ 
ದೇಶ

ಐಎಎಸ್ ಆಕಾಂಕ್ಷಿಗಳಿಗೆ ಉಚಿತ ಕೋಚಿಂಗ್ ನಟ ಸೋನು ಸೂದ್ ರಿಂದ ಸ್ಕಾಲರ್ ಶಿಪ್ ಘೋಷಣೆ!

ಬಾಲಿವುಡ್ ನಟ ಸೋನು ಸೂದ್ ಭಾರತೀಯ ಆಡಳಿತ ಸೇವೆಗಳ (ಐಎಎಸ್) ಆಕಾಂಕ್ಷಿಗಳಿಗೆ ಉಚಿತ ತರಬೇತಿಗಾಗಿ ಸ್ಕಾಲರ್ ಶಿಪ್ ಘೋಷಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ಮಧ್ಯೆ ಬಾಲಿವುಡ್ ನಟ ಸೋನು ಸೂದ್ ತಮ್ಮ ಸಮಾಜ ಸೇವೆ ಕೆಲಸಕ್ಕೆ ಹೆಸರಾಗಿದ್ದಾರೆ. ಸಾಂಕ್ರಾಮಿಕ ಸಮಯದಲ್ಲಿ ಅಸಂಖ್ಯಾತ ಕುಟುಂಬಗಳಿಗೆ ಬೆಂಬಲ ನೀಡಿ ಮನೆಮಾತಾಗಿದ್ದಾರೆ. ಆದಾಗ್ಯೂ, ಅವರ ದತ್ತಿ ಉಪಕ್ರಮಗಳು ಕೇವಲಕೋವಿಡ್  ರೋಗಿಗಳಿಗೆ ಅಥವಾ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವವರಿಗೆ ಮಾತ್ರ ಸೀಮಿತವಾಗಿಲ್ಲ. ನಟ ಭಾರತೀಯ ಆಡಳಿತ ಸೇವೆಗಳ (ಐಎಎಸ್) ಆಕಾಂಕ್ಷಿಗಳಿಗೆ ಉಚಿತ ತರಬೇತಿಗಾಗಿ ಸ್ಕಾಲರ್ ಶಿಪ್ ಘೋಷಿಸಿದ್ದಾರೆ.

ಯುಪಿಎಸ್ಸಿಯಂತಹ ಪರೀಕ್ಷೆಗಳನ್ನು ಬರೆಯಲು ಐಎಎಸ್ ಗೆ ಸೇರಲು ಬಯಸುವ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ಸ್ಕಾಲರ್ ಶಿಪ್ ಒದಗಿಸುವುದಾಗಿ ನಟ ತನ್ನ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ 'ಸಂಭವಂ' ಎಂಬ ಉಪಕ್ರಮದ ಬಗ್ಗೆ ಬರೆದುಕೊಂಡಿದ್ದಾರೆ. "ನೀವು ಐಎಎಸ್ ಗೆ ತಯಾರಿ ನಡೆಸಲು ಬಯಸಿದರೆ, ನಾವು ನಿಮ್ಮ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇವೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸೋನು ಸೂದ್ ಚಾರಿಟಿ ಫೌಂಡೇಶನ್ ವೆಬ್‌ಸೈಟ್ ಪ್ರಕಾರ, ಸ್ಕಾಲರ್ ಶಿಪ್ ಗಾಗಿ ನೋಂದಾಯಿಸಲು ಕೊನೆಯ ದಿನಾಂಕ 2021 ಜೂನ್ 30 ಆಗಿದೆ. 

ಆಕಾಂಕ್ಷಿಗಳು www.soodcharityfoundation.org ಗೆ ಭೇಟಿ ನೀಡುವ ಮೂಲಕ ಫೌಂಡೇಶನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು

ಶನಿವಾರ ಪೋಸ್ಟ್ ಮಾಡಿದ ತನ್ನ ಇತ್ತೀಚಿನ ಟ್ವೀಟ್‌ನಲ್ಲಿ ಸೂದ್ ಹೀಗೆ ಹೇಳಿದ್ದಾರೆ- : "ಜೀವನವು ನಿಮ್ಮನ್ನು ಆರ್ಥಿಕವಾಗಿ ಸಬಲವಾಗಿಸಿದಾಗ ನಿಮ್ಮ ಜೀವನ ಮಟ್ಟವನ್ನು ಹೆಚ್ಚಿಸಿಕೊಳ್ಳುವ ಬದಲು . ನಿಮ್ಮ ದಾನದ ಗುಣಮಟ್ಟವನ್ನು ಹೆಚ್ಚಿಸಿ." ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದ ಮಧ್ಯೆ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಸೋನು ಆಗಾಗ್ಗೆ ಪ್ರತಿಪಾದಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ, ಮಾರಣಾಂತಿಕ ವೈರಸ್ ವಿರುದ್ಧದ ಯುದ್ಧದಲ್ಲಿ ಪೋಷಕರನ್ನು ಕಳೆದುಕೊಂಡ  ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ಒದಗಿಸಲು ಪಂಜಾಬ್‌ನ ಸಿಟಿ ವಿಶ್ವವಿದ್ಯಾಲಯದೊಂದಿಗಿನ ಸಹಯೋಗವನ್ನು ಅವರು ಘೋಷಿಸಿದ್ದರು.

ಇ-ರಿಕ್ಷಾ ಮತ್ತು ಇತರ ವಿಧಾನಗಳ ಮೂಲಕ ಉದ್ಯೋಗವನ್ನು ಒದಗಿಸುವುದರಿಂದ ಹಿಡಿದು ವೈದ್ಯಕೀಯ ಚಿಕಿತ್ಸೆಯನ್ನು ನೀಡುವವರೆಗೆ ಜನರಿಗೆ ಸಹಾಯ ಮಾಡಲು ಸೋನು ಹಲವಾರು ಬಗೆಯಲ್ಲಿ ನೆರವಾಗುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT