ಕಪಿಲ್ ಸಿಬಲ್ 
ದೇಶ

ಕಾಂಗ್ರೆಸ್ ನಲ್ಲಿ ಜಡತ್ವ ಇಲ್ಲವೆಂಬುದನ್ನು ತೋರಿಸಲು ಸುಧಾರಣೆಗಳ ಅಗತ್ಯವಿದೆ: ಕಪಿಲ್ ಸಿಬಲ್ 

ಕಾಂಗ್ರೆಸ್ ನಲ್ಲಿ ಆಮೂಲಾಗ್ರ ಸುಧಾರಣೆಗಳಾಗಿ ಬಿಜೆಪಿಗೆ ಸೂಕ್ತವಾದ ಪರ್ಯಾಯವಾದ ವಿರೋಧಪಕ್ಷವಾಗಿ ತನ್ನನ್ನು ಪ್ರಸ್ತುತಪಡಿಸಿಕೊಳ್ಳಬೇಕೆಂದು ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಹೇಳಿದ್ದಾರೆ. 

ನವದೆಹಲಿ: ಕಾಂಗ್ರೆಸ್ ನಲ್ಲಿ ಆಮೂಲಾಗ್ರ ಸುಧಾರಣೆಗಳಾಗಿ ಬಿಜೆಪಿಗೆ ಸೂಕ್ತವಾದ ಪರ್ಯಾಯವಾದ ವಿರೋಧಪಕ್ಷವಾಗಿ ತನ್ನನ್ನು ಪ್ರಸ್ತುತಪಡಿಸಿಕೊಳ್ಳಬೇಕೆಂದು ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಹೇಳಿದ್ದಾರೆ. 

ಕಾಂಗ್ರೆಸ್ ನಲ್ಲಿ ಆಂತರಿಕ ಸುಧಾರಣೆಗಳು ಹಾಗೂ ನಾಯಕತ್ವಕ್ಕೆ ಸಂಬಂಧಿಸಿದಂತೆ ಕೂಲಂಕುಷ ಪರೀಕ್ಷೆ ನಡೆಸುವ ಸಂಬಂಧ ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷರಾದ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದ ಜಿ-23 (ಗ್ರೂಪ್ 23) ನಾಯಕರ ಪೈಕಿ ಕಪಿಲ್ ಸಿಬಲ್ ಸಹ ಇದ್ದರು. ಈಗ ಮತ್ತೊಮ್ಮೆ ಕಾಂಗ್ರೆಸ್ ನಲ್ಲಿ ಆಂತರಿಕ ಸುಧಾರಣೆಗಳಾಗಬೇಕಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಕಪಿಲ್ ಸಿಬಲ್, ಇತ್ತೀಚೆಗಷ್ಟೇ ಮುಂದೂಡಲ್ಪಟ್ಟಿದ್ದ ಸಂಘಟನೆಗೆ ಸಂಬಂಧಿಸಿದ ಚುನಾವಣೆ ಶೀಘ್ರವೇ ನಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಕಪಿಲ್ ಸಿಬಲ್, ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿಗೆ ಪರ್ಯಾಯವಾದ ಬಲಿಷ್ಠ ರಾಜಕೀಯ ಆಯ್ಕೆಗಳು ಇಲ್ಲ, ಆದರೆ ಮೋದಿ ದೇಶವನ್ನು ಆಳುವ ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. 

ಕಾಂಗ್ರೆಸ್ ಪರ್ಯಾಯವಾದ ಆಯ್ಕೆಯಾಗಿ ಗುರುತಿಸಿಕೊಳ್ಳಬಹುದು ಎಂದು ಸಿಬಲ್ ಹೇಳಿದ್ದಾರೆ. ಚುನಾವಣೆ ಸೋಲುತ್ತಿರುವುದಕ್ಕೆ ಆತ್ಮಾವಲೋಕನ ಮಾಡಿಕೊಳ್ಳಲು ಸಮಿತಿಗಳನ್ನು ರಚಿಸುವುದು ಒಳ್ಳೆಯದೇ ಆದರೆ ಸೂಚಿಸಿದ ಪರಿಹಾರಗಳನ್ನು ಜಾರಿಗೆ ತರದೇ ಇದ್ದಲ್ಲಿ ಸಮಿತಿಗಳಿಂದ ಯಾವುದೇ ಪ್ರಯೋಜನಗಳೂ ಇಲ್ಲ ಎಂದು ಕಪಿಲ್ ಸಿಬಲ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT