ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡ ಹೈದರಾಬಾದ್ ನ ನಿಜಾಮ್ ಕ್ಲಬ್ 
ದೇಶ

ಹೈದರಾಬಾದ್ ನ ನಿಜಾಮ್ ಕ್ಲಬ್ ನಲ್ಲಿ ಬೆಂಕಿ, ದೆಹಲಿಯ ರೋಹಿಂಗ್ಯಾ ನಿರಾಶ್ರಿತರ ಗುಡಿಸಲು ಭಸ್ಮ: ಸಾವು-ನೋವುಗಳಿಂದ ಪಾರು

ನಗರದ ಸೈಫಾಬಾದ್ ನ ಪ್ರತಿಷ್ಠಿತ ನಿಜಾಮ್ ಕ್ಲಬ್ ನಲ್ಲಿ ಭಾನುವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿದೆ.

ಹೈದರಾಬಾದ್: ನಗರದ ಸೈಫಾಬಾದ್ ನ ಪ್ರತಿಷ್ಠಿತ ನಿಜಾಮ್ ಕ್ಲಬ್ ನಲ್ಲಿ ಭಾನುವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿದೆ.

ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ. ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಆದರೆ ಆಸ್ತಿ-ಪಾಸ್ತಿಗೆ ಸ್ವಲ್ಪ ಹಾನಿಯುಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಗ್ಗೆ ನಿಜಾಮ್ ಕ್ಲಬ್ ನ ಸಿಬ್ಬಂದಿ ಕಟ್ಟಡದ ಬ್ಲಾಕ್ ವೊಂದರ ಪೆಂಟ್ ಹೌಸ್ ನಲ್ಲಿ ಬೆಂಕಿ ಹೊತ್ತಿಕೊಳ್ಳುವುದನ್ನು ಕಂಡು ಕೂಡಲೇ ಕ್ಲಬ್ ನ ಮುಖ್ಯಸ್ಥರಿಗೆ ತಿಳಿಸಿದರು. ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಗೆ ಸುದ್ದಿ ಮುಟ್ಟಿಸಲಾಯಿತು.
ಕೇವಲ ಹತ್ತೇ ನಿಮಿಷದಲ್ಲಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಹತ್ತಿಕೊಳ್ಳಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ತನಿಖೆಯ ನಂತರವಷ್ಟೇ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

50 ಗುಡಿಸಲುಗಳು ಭಸ್ಮ: ಆಗ್ನೇಯ ದೆಹಲಿಯ ಕಳಿಂದಿ ಕುಂಜ್ ಮೆಟ್ರೋ ನಿಲ್ದಾಣದ ಹತ್ತಿರ ಇರುವ ರೊಹಿಂಗ್ಯಾ ನಿರಾಶ್ರಿತ ಶಿಬಿರದಲ್ಲಿ ಬೆಂಕಿ ಸ್ಫೋಟವುಂಟಾಗಿ 50ಕ್ಕೂ ಹೆಚ್ಚು ಗುಡಿಸಲುಗಳು ನಾಶವಾಗಿವೆ.

ಕಳೆದ ರಾತ್ರಿ ಈ ದುರ್ಘಟನೆ ನಡೆದಿದ್ದು ಅಗ್ನಿಶಾಮಕ ಇಲಾಖೆಗೆ ಸುಮಾರು 11.55ರ ಹೊತ್ತಿಗೆ ಮಾಹಿತಿ ಸಿಕ್ಕಿದೆ. ದುರ್ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT