ಸಾಂದರ್ಭಿಕ ಚಿತ್ರ 
ದೇಶ

ತೈಲ ಮತ್ತಿತರ ಅವಶ್ಯಕ ಸರಕುಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳ ರಾಷ್ಟ್ರವ್ಯಾಪಿ ಪ್ರತಿಭಟನೆ

ತೈಲ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ಕಾಲ ರಾಷ್ಟ್ರವ್ಯಾಪ್ತಿ ಪ್ರತಿಭಟನೆ ನಡೆಸಲಿವೆ.

ನವದೆಹಲಿ: ತೈಲ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ಕಾಲ ರಾಷ್ಟ್ರವ್ಯಾಪ್ತಿ ಪ್ರತಿಭಟನೆ ನಡೆಸಲಿವೆ.

ಸಿಪಿಐ(ಎಂ) ಸಿಪಿಐ, ಅಲ್ ಇಂಡಿಯಾ ಫಾರ್ವಡ್ ಬ್ಲಾಕ್, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಸಿಪಿಐ (ಎಲ್) ಒಳಗೊಂಡಂತೆ ಎಡಪಕ್ಷಗಳು ಭಾನುವಾರ ಪ್ರತಿಭಟನೆ ಕುರಿತು ಜಂಟಿ ಹೇಳಿಕೆ ಹೊರಡಿಸಿವೆ. ಈ ಹೇಳಿಕೆ ಪ್ರಕಾರ ಜೂನ್ 16 ರಂದು ಆರಂಭವಾಗಲಿರುವ ಪ್ರತಿಭಟನೆ ಜೂನ್ 30 ರಂದು ಅಂತ್ಯವಾಗಲಿದೆ.

ಹೆಚ್ಚುತ್ತಿರುವ ತೈಲ ಬೆಲೆಯನ್ನು ಇಳಿಸಬೇಕು ಹಾಗೂ ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆಗಳನ್ನು ನಿಯಂತ್ರಿಸಬೇಕು ಎಂದು ಎಡಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ನಿರಂತರವಾಗಿ ಹೆಚ್ಚಾಗುತ್ತಿರುವ ತೈಲ ಬೆಲೆಯಿಂದ ಜನಸಾಮಾನ್ಯರ ಬದುಕಿಗೆ ಹೊರೆಯಾಗಿದೆ. ಇತ್ತೀಚಿಗೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ 21 ಬಾರಿ ತೈಲ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಎಡಪಕ್ಷಗಳು ಆರೋಪಿಸಿವೆ.

ತೈಲ ಬೆಲೆ ಏರುತ್ತಿರುವ ಸಂದರ್ಭದಲ್ಲಿ ದೇಶದ ಆರ್ಥಿಕ ಕುಸಿತಗೊಂಡಿದ್ದು, ನಿರುದ್ಯೋಗ ಹೆಚ್ಚಾಗಿದೆ, ಖರೀದಿ ಸಾಮರ್ಥ್ಯ ಕುಸಿತಗೊಂಡಿದ್ದು, ಹಸಿವಿನ ಪ್ರಮಾಣ ಹೆಚ್ಚಳವಾಗಿದೆ ಎಂದು ಆರೋಪಿಸಿರುವ ಎಡಪಕ್ಷಗಳು, ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಎಲ್ಲಾ ಕುಟುಂಬಗಳಿಗೆ  ಆರು ತಿಂಗಳವರೆಗೂ ತಿಂಗಳಿಗೆ 7,500 ರೂ.ಗಳನ್ನು ಕೇಂದ್ರ ಸರ್ಕಾರ ಕೂಡಲೇ ನೇರ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!