ಸಾಂದರ್ಭಿಕ ಚಿತ್ರ 
ದೇಶ

ತೈಲ ಮತ್ತಿತರ ಅವಶ್ಯಕ ಸರಕುಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳ ರಾಷ್ಟ್ರವ್ಯಾಪಿ ಪ್ರತಿಭಟನೆ

ತೈಲ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ಕಾಲ ರಾಷ್ಟ್ರವ್ಯಾಪ್ತಿ ಪ್ರತಿಭಟನೆ ನಡೆಸಲಿವೆ.

ನವದೆಹಲಿ: ತೈಲ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ಕಾಲ ರಾಷ್ಟ್ರವ್ಯಾಪ್ತಿ ಪ್ರತಿಭಟನೆ ನಡೆಸಲಿವೆ.

ಸಿಪಿಐ(ಎಂ) ಸಿಪಿಐ, ಅಲ್ ಇಂಡಿಯಾ ಫಾರ್ವಡ್ ಬ್ಲಾಕ್, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಸಿಪಿಐ (ಎಲ್) ಒಳಗೊಂಡಂತೆ ಎಡಪಕ್ಷಗಳು ಭಾನುವಾರ ಪ್ರತಿಭಟನೆ ಕುರಿತು ಜಂಟಿ ಹೇಳಿಕೆ ಹೊರಡಿಸಿವೆ. ಈ ಹೇಳಿಕೆ ಪ್ರಕಾರ ಜೂನ್ 16 ರಂದು ಆರಂಭವಾಗಲಿರುವ ಪ್ರತಿಭಟನೆ ಜೂನ್ 30 ರಂದು ಅಂತ್ಯವಾಗಲಿದೆ.

ಹೆಚ್ಚುತ್ತಿರುವ ತೈಲ ಬೆಲೆಯನ್ನು ಇಳಿಸಬೇಕು ಹಾಗೂ ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆಗಳನ್ನು ನಿಯಂತ್ರಿಸಬೇಕು ಎಂದು ಎಡಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ನಿರಂತರವಾಗಿ ಹೆಚ್ಚಾಗುತ್ತಿರುವ ತೈಲ ಬೆಲೆಯಿಂದ ಜನಸಾಮಾನ್ಯರ ಬದುಕಿಗೆ ಹೊರೆಯಾಗಿದೆ. ಇತ್ತೀಚಿಗೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ 21 ಬಾರಿ ತೈಲ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಎಡಪಕ್ಷಗಳು ಆರೋಪಿಸಿವೆ.

ತೈಲ ಬೆಲೆ ಏರುತ್ತಿರುವ ಸಂದರ್ಭದಲ್ಲಿ ದೇಶದ ಆರ್ಥಿಕ ಕುಸಿತಗೊಂಡಿದ್ದು, ನಿರುದ್ಯೋಗ ಹೆಚ್ಚಾಗಿದೆ, ಖರೀದಿ ಸಾಮರ್ಥ್ಯ ಕುಸಿತಗೊಂಡಿದ್ದು, ಹಸಿವಿನ ಪ್ರಮಾಣ ಹೆಚ್ಚಳವಾಗಿದೆ ಎಂದು ಆರೋಪಿಸಿರುವ ಎಡಪಕ್ಷಗಳು, ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಎಲ್ಲಾ ಕುಟುಂಬಗಳಿಗೆ  ಆರು ತಿಂಗಳವರೆಗೂ ತಿಂಗಳಿಗೆ 7,500 ರೂ.ಗಳನ್ನು ಕೇಂದ್ರ ಸರ್ಕಾರ ಕೂಡಲೇ ನೇರ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT