ಸಚಿನ್ ಪೈಲಟ್ (ಸಂಗ್ರಹ ಚಿತ್ರ) 
ದೇಶ

ರಾಜಸ್ಥಾನ ಸರ್ಕಾರದಲ್ಲಿ ಬಿರುಕು ಉಲ್ಬಣ: ಸಚಿನ್ ಪೈಲಟ್ ಬಣದ ಶಾಸಕನಿಂದ ಫೋನ್ ಕದ್ದಾಲಿಕೆ ಆರೋಪ

ರಾಜಸ್ಥಾನದ ಸರ್ಕಾರದಲ್ಲಿನ ಬಿರುಕು ಮತ್ತಷ್ಟು ಉಲ್ಬಣಗೊಂಡಿದೆ. ಈ ಬಾರಿ ಸಚಿನ್ ಪೈಲಟ್ ಬಣದ ಶಾಸಕರಿಂದ ಫೋನ್ ಟ್ಯಾಪಿಂಗ್ ಆರೋಪ ಕೇಳಿಬಂದಿದೆ. 

ಜೈಪುರ: ರಾಜಸ್ಥಾನದ ಸರ್ಕಾರದಲ್ಲಿನ ಬಿರುಕು ಮತ್ತಷ್ಟು ಉಲ್ಬಣಗೊಂಡಿದೆ. ಈ ಬಾರಿ ಸಚಿನ್ ಪೈಲಟ್ ಬಣದ ಶಾಸಕರಿಂದ ಫೋನ್ ಟ್ಯಾಪಿಂಗ್ ಆರೋಪ ಕೇಳಿಬಂದಿದೆ. 

ಜೈಪುರ ಜಿಲ್ಲೆಯ ಚಕ್ಸು ಕ್ಷೇತ್ರದ ಶಾಸಕ, ಸಚಿನ್ ಪೈಲಟ್ ನ ಆಪ್ತ ವೇದ್ ಪ್ರಸಾದ್ ಸೋಲಂಕಿ ಆರೋಪ ಮಾಡಿದ್ದು, ಕೆಲವು ಶಾಸಕರು ತಮ್ಮ ಫೋನ್ ಕದ್ದಾಲಿಕೆಯಾಗುತ್ತಿರುವ ಆರೋಪ ಮಾಡುತ್ತಿದ್ದಾರೆಂದು ಹೇಳಿದ್ದಾರೆ. ಆದರೆ ಕದ್ದಾಲಿಕೆ ಆರೋಪ ಮಾಡುತ್ತಿರುವ ಶಾಸಕರ ಹೆಸರುಗಳನ್ನು ಬಹಿರಂಗಪಡಿಸುವುದಕ್ಕೆ ಸೋಲಂಕಿ ನಿರಾಕರಿಸಿದ್ದಾರೆ. 

"ನನ್ನ ಫೋನ್ ಕದ್ದಾಲಿಕೆಯಾಗುತ್ತಿದೆಯೋ ಇಲ್ಲವೋ ಎಂಬುದು ತಿಳಿದಿಲ್ಲ. ಸರ್ಕಾರ ಫೋನ್ ಕದ್ದಾಲಿಕೆ ನಡೆಸುತ್ತಿದೆಯೋ ಇಲ್ಲವೋ ಎಂಬುದೂ ನನಗೆ ತಿಳಿದಿಲ್ಲ. ಆದರೆ ಕೆಲವು ಶಾಸಕರು ತಮ್ಮ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಲಾಗುತ್ತಿದೆ" ಎಂದು ಆರೋಪಿಸಿರುವುದಾಗಿ ಸೋಲಂಕಿ ಹೇಳಿದ್ದಾರೆ. 

ಸರ್ಕಾರದ ಬಗ್ಗೆ ಸಚಿನ್ ಪೈಲಟ್ ಅಸಾಮಾಧಾನಗೊಂಡಿದ್ದು, ದೆಹಲಿಯಲ್ಲಿ ಕ್ಯಾಂಪ್ ಮಾಡಿದ್ದಾರೆ. ಸಚಿನ್ ಪೈಲಟ್ ಅವರ ಆಪ್ತರು ಸಚಿವ ಸಂಪುಟ ಪುನಾರಚನೆ ಮಾಡುವುದಕ್ಕಾಗಿ ಆಗ್ರಹಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ಮಹತ್ವ ಪಡೆದುಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!