ಇಸ್ರೇಲಿ ರಾಯಭಾರಿ ಕಛೇರಿ ಬಳಿ ಸ್ಫೋಟದ ಘಟನೆಯ ಬಳಿಕ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಗಳ ಕಾವಲು 
ದೇಶ

ಇಸ್ರೇಲಿ ರಾಯಭಾರಿ ಕಛೇರಿ ಬಳಿ ಸ್ಫೋಟ ಪ್ರಕರಣ: ಇಬ್ಬರ ಗುರುತು ಪತ್ತೆಗೆ ಮಾಹಿತಿ ನೀಡಿದರೆ ತಲಾ 10 ಲಕ್ಷ ರೂ. ಬಹುಮಾನ!

ಈ ವರ್ಷದ ಪ್ರಾರಂಭದಲ್ಲಿ ನವದೆಹಲಿಯ ಇಸ್ರೇಲಿ ರಾಯಭಾರಿ ಕಛೇರಿ ಬಳಿ ನಡೆದ ಸ್ಫೋಟ ಪ್ರಕರಣದಲ್ಲಿನ 2 ಆರೋಪಿಗಳ ಗುರುತು ಪತ್ತೆಗೆ ಸಹಕರಿಸಿದವರಿಗೆ ತಲಾ 10 ಲಕ್ಷ ರೂಪಾಯಿಗಳ ಬಹುಮಾನವನ್ನು ಎನ್ಐಎ ಘೋಷಿಸಿದೆ. 

ನವದೆಹಲಿ: ಈ ವರ್ಷದ ಪ್ರಾರಂಭದಲ್ಲಿ ನವದೆಹಲಿಯ ಇಸ್ರೇಲಿ ರಾಯಭಾರಿ ಕಛೇರಿ ಬಳಿ ನಡೆದ ಸ್ಫೋಟ ಪ್ರಕರಣದಲ್ಲಿನ 2 ಆರೋಪಿಗಳ ಗುರುತು ಪತ್ತೆಗೆ ಸಹಕರಿಸಿದವರಿಗೆ ತಲಾ 10 ಲಕ್ಷ ರೂಪಾಯಿಗಳ ಬಹುಮಾನವನ್ನು ಎನ್ಐಎ ಘೋಷಿಸಿದೆ. 

ಜೂ.15 ರಂದು ಎನ್ಐಎ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು,  ಇಸ್ರೇಲಿ ರಾಯಭಾರಿ ಕಛೇರಿಯ ಹೊರಭಾಗದಲ್ಲಿ ಈ ವರ್ಷದ ಪ್ರಾರಂಭದಲ್ಲಿ ಸ್ಫೋಟಕಗಳನ್ನು ಇರಿಸುತ್ತಿದ್ದಾಗ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿತ್ತು. ಸಿಸಿಟಿವಿಯಲ್ಲಿ ದಾಖಲಾದ ವ್ಯಕ್ತಿಗಳ ಗುರುತು ಪತ್ತೆಗೆ ಸಹಕರಿಸಿದವರಿಗೆ ಇಬ್ಬರಿಂದ ತಲಾ 10 ಲಕ್ಷ ರೂಪಾಯಿ ಬಹುಮಾನ ದೊರೆಯಲಿದೆ ಎಂದು ಎನ್ಐಎ ವಕ್ತಾರರು ಹೇಳಿದ್ದಾರೆ. 

ಸಿಸಿಟಿವಿ ದೃಶ್ಯಾವಳಿಗಳು ಹಾಗೂ ವಿಡಿಯೋಗಳಿರುವ ಡ್ರೈವ್ ಲಿಂಕ್ ನ್ನು https://drive.google.com/drive/folders/18kmmCvfFXm8bXQovI9bxye8qcr0zLqFr?usp ಹಂಚಿಕೊಂಡಿರುವ ಎನ್ಐಎ, ವಿಡಿಯೋದಲ್ಲಿ ದಾಖಲಾಗಿರುವವರ ಗುರುತು ಪತ್ತೆಯಾದಲ್ಲಿ ಅವರು do.nia@gov.in info.nia@gov.in ಗೆ ಮೇಲ್ ಕಳಿಸಬಹುದಾಗಿದೆ ಅಥವಾ 011-24368800, 9654447345 ಸಂಖ್ಯೆಗೆ ದೂರವಾಣಿ ಕರೆ ಮಾಡಬಹುದಾಗಿದೆ ಎಂದು ಎನ್ಐಎ ಹೇಳಿದೆ.

ದೆಹಲಿಯ ಇಸ್ರೇಲ್ ರಾಯಭಾರಿ ಕಛೇರಿ ಇರುವ ಪ್ರದೇಶದಲ್ಲಿ ಜ.29 ರಂದು ಐಇಡಿ ಸ್ಫೋಟ ಸಂಭವಿಸಿತ್ತು. ಈ ಘಟನೆಯ ತನಿಖೆಯನ್ನು ಫೆ.2 ರಂದು ಎನ್ಐಎಗೆ ವಹಿಸಲಾಗಿತ್ತು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿರಲಿಲ್ಲ, ಆದರೆ ಕೆಲವು ಕಾರುಗಳು ಜಖಂಗೊಂಡಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT