ಇಟಲಿ ನಾವಿಕರು 
ದೇಶ

ಇಟಲಿ ನಾವಿಕರಿಂದ ಭಾರತದ ಮೀನುಗಾರರ ಹತ್ಯೆ ಪ್ರಕರಣ: ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಕೇರಳ ಕರಾವಳಿ ತೀರದಲ್ಲಿ ಭಾರತದ ಮೀನುಗಾರರ ಹತ್ಯೆ ಮಾಡಿದ್ದ ಇಟಲಿ ನಾವಿಕರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ನವದೆಹಲಿ: ಕೇರಳ ಕರಾವಳಿ ತೀರದಲ್ಲಿ ಭಾರತದ ಮೀನುಗಾರರ ಹತ್ಯೆ ಮಾಡಿದ್ದ ಇಟಲಿ ನಾವಿಕರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಕೇರಳ ಕರಾವಳಿಯಲ್ಲಿ 2012ರ ಫೆಬ್ರವರಿ ತಿಂಗಳಲ್ಲಿ ತಮ್ಮ ನೌಕೆಯತ್ತ ಆಗಮಿಸಿದ್ದ ಇಬ್ಬರು ಮೀನುಗಾರರನ್ನು ಕಡಲ್ಗಳ್ಳರು ಎಂದು ತಪ್ಪಾಗಿ ಭಾವಿಸಿದ್ದ ಇಟಲಿ ನಾವಿಕರು ಗುಂಡು ಹಾರಿಸಿದ್ದರು. ಈ ವೇಳೆ ಭಾರತದ ಇಬ್ಬರು ಮೀನುಗಾರರು ಸಾವಿಗೀಡಾಗಿದ್ದರು. ಈ ಪ್ರಕರಣದಲ್ಲಿ ಇಟಲಿಯ ಇಬ್ಬರು ನಾವಿಕರ ವಿರುದ್ಧ ಭಾರತದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. 

ಪ್ರಕರಣಗಳನ್ನು ರದ್ದುಗೊಳಿಸಲು ಹಾಗೂ ಸಂತ್ರಸ್ತರ ಕುಟುಂಬದವರಿಗೆ 10 ಕೋಟಿ ರೂ ಪರಿಹಾರ ವಿತರಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿತ್ತು. ಅಂತಾರಾಷ್ಟ್ರೀಯ ನ್ಯಾಯಮಂಡಳಿ ತೀರ್ಪು ಮತ್ತು ಭಾರತ, ಇಟಲಿ ಹಾಗೂ ಕೇರಳ ಸರ್ಕಾರಗಳ ನಡುವೆ ನಡೆದ  ಒಪ್ಪಂದಗಳಿಗೆ ಅನುಗುಣವಾಗಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂಆರ್ ಶಾ ಅವರನ್ನು ಒಳಗೊಂಡ ರಜೆಕಾಲದ ನ್ಯಾಯಪೀಠ, ಆರೋಪಿಗಳಾದ ಮಸ್ಸಿಮಿಲಾನೊ ಲಾಟೊರೆ ಮತ್ತು ಸಾಲ್ವಟೋರ್ ಗಿರೋನ್ ವಿರುದ್ಧದ ಪ್ರಕರಣಗಳನ್ನು ಇಟಲಿಯಲ್ಲಿಯೇ ವಿಚಾರಣೆಗೆ ಒಳಪಡಿಸಬಹುದು ಎಂದು ಹೇಳಿತ್ತು. 

ನಾವಿಕರಿಂದ ಹತ್ಯೆಯಾದ ಮೀನುಗಾರರ ಕುಟುಂಬದವರಿಗೆ ಪಾವತಿಸಲು ಇಟಲಿ ಒಪ್ಪಿಕೊಂಡಿದ್ದ 10 ಕೋಟಿ ರೂ ಪರಿಹಾರವನ್ನು ನ್ಯಾಯಾಲಯದ ಹಿಂದಿನ ನಿರ್ದೇಶನದಂತೆ ಕೋರ್ಟ್ ರಿಜಿಸ್ಟ್ರಿಯಲ್ಲಿ ಜಮೆ ಮಾಡಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಶುಕ್ರವಾರ ನ್ಯಾಯಪೀಠಕ್ಕೆ ತಿಳಿಸಿದ್ದರು. ಈ 10 ಕೋಟಿ ರೂ ಪರಿಹಾರದಲ್ಲಿ ತಲಾ ನಾಲ್ಕು ಕೋಟಿ ರೂ ಮೃತಪಟ್ಟ ಕುಟುಂಬದವರ ಸಂಬಂಧಿಕರಿಗೆ ಹಾಗೂ ಉಳಿದ ಎರಡು ಕೋಟಿ ರೂ ಆ ಮೀನುಗಾರರು ತೆರಳುತ್ತಿದ್ದ ದೋಣಿಯ ಮಾಲೀಕರಿಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್  ಸೂಚಿಸಿದೆ.

ಅದರಂತೆ ನಾವಿಕರು ಪರಿಹಾರ ಮೊತ್ತ ಪಾವತಿಸಿರುವ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಅಲ್ಲದೆ ಇಟಲಿ ಸರ್ಕಾರ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸಬಹುದು ಎಂದು ಹೇಳಿದೆ

ಏನಿದು ಪ್ರಕರಣ?
2012ರ ಫೆಬ್ರವರಿ 15ರಂದು ಲಕ್ಷದ್ವೀಪದ ಕಡೆಯಿಂದ ಮೀನುಗಾರಿಕೆ ನಡೆಸಿ ಕೇರಳ ಮೀನುಗಾರರು ಮರಳುತ್ತಿದ್ದ ಸಂದರ್ಭದಲ್ಲಿ ಇಟಲಿಯ ಎನ್ರಿಕಾ ಲೆಕ್ಸಿ ಆಯಿಲ್ ಟ್ಯಾಂಕರ್‌ನಲ್ಲಿದ್ದ ಇಬ್ಬರು ನಾವಿಕರು ಗುಂಡು ಹಾರಿಸಿ ಇಬ್ಬರನ್ನು ಹತ್ಯೆ ಮಾಡಿದ್ದರು. ಘಟನೆ ನಡೆದ ಕೆಲವೇ ಸಮಯಗಳಲ್ಲಿ ಭಾರತದ ಕಾವಲು ಪಡೆ ಮಸ್ಸಿಮಿಲನೊ ಲಾಟೊರೆ ಮತ್ತು ಸಾಲ್ವಟೋರ್ ಗಿರೋನ್ ಅವರನ್ನು ಬಂಧಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT