ಸಂಗ್ರಹ ಚಿತ್ರ 
ದೇಶ

ಆಸ್ತಿ ವಿವಾದ: ರಕ್ತ ಸಂಬಂಧಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ವೈಎಸ್‌ಆರ್‌ಸಿ ಮುಖಂಡ ತಾನೂ ಆತ್ಮಹತ್ಯೆ!

62 ವರ್ಷದ ವೈಎಸ್‌ಆರ್‌ಸಿ ಪಕ್ಷದ ಮುಖಂಡ ಶಿವಪ್ರಸಾದ್ ರೆಡ್ಡಿ ತಮ್ಮ ಸಂಬಂಧಿ ಹಾಗೂ ಅದೇ ಪಕ್ಷದ ನಾಯಕರೂ ಆಗಿದ್ದ 45 ವರ್ಷದ ಪಾರ್ಥಸಾರಥಿ ರೆಡ್ಡಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಡಪ: 62 ವರ್ಷದ ವೈಎಸ್‌ಆರ್‌ಸಿ ಪಕ್ಷದ ಮುಖಂಡ ಶಿವಪ್ರಸಾದ್ ರೆಡ್ಡಿ ತಮ್ಮ ಸಂಬಂಧಿ ಹಾಗೂ ಅದೇ ಪಕ್ಷದ ನಾಯಕರೂ ಆಗಿದ್ದ 45 ವರ್ಷದ ಪಾರ್ಥಸಾರಥಿ ರೆಡ್ಡಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಡಪ ಜಿಲ್ಲೆಯ ಪುಲಿವೆಂಡುಲಾ ಮಂಡಲದ ನಲ್ಲಾಪುರೆಡಿಪಾಲೆ ಗ್ರಾಮದಲ್ಲಿ ಮಂಗಳವಾರ ಈ ಘಟನೆ ವರದಿಯಾಗಿದೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಪಾರ್ಥಸಾರಥಿ ರೆಡ್ಡಿ ಶಿವಪ್ರಸಾದ್ ರೆಡ್ಡಿ ಅವರ ಮನೆಗೆ ಹೋಗಿ ಚಾಕುವಿನಿಂದ ಹಲ್ಲೆಗೆ ಯತ್ನಿಸಿದರು. ಆ ಸಮಯದಲ್ಲಿ, ಆತ್ಮರಕ್ಷಣೆಯಲ್ಲಿ, ಶಿವಪ್ರಸಾದ್ ರೆಡ್ಡಿ ತನ್ನ ಪರವಾನಗಿ ಪಡೆದ ರಿವಾಲ್ವರ್‌ನಿಂದ ಪಾರ್ಥಸಾರಥಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಆ ವೇಳೆ ಪಾರ್ಥಸಾರಥಿ ರೆಡ್ಡಿ ಸ್ಥಳದಲ್ಲೇ ಮೃತಪಟ್ಟರು.

ಘಟನೆಯ ಬಳಿಕ ಬಂಧನ ಭೀತಿಯುಂದ  ಶಿವಪ್ರಸಾದ್ ರೆಡ್ಡಿ, ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ನಂತರ ಅವರನ್ನು ಪುಲಿವೆಂಡುಲಾ ವಲಯದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ವೈದ್ಯರು ಅವರು "ಮೃತಪಟ್ಟಿರುವುದಾಗಿ" ಘೋಷಿಸಿದರು.

ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಪುಲಿವೆಂಡುಲಾದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿತ್ತು. ಪಾರ್ಥಸಾರಥಿ ರೆಡ್ಡಿ ಮತ್ತು ಶಿವಪ್ರಸಾದ್ ರೆಡ್ಡಿ ಅವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT