ಮಿಥುನ್ ಚಕ್ರವರ್ತಿ 
ದೇಶ

ಪ್ರಚೋದನಾಕಾರಿ ಭಾಷಣ: ಕೋಲ್ಕತಾ ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ನಡೆಸಿದ ಭಾಷಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ಹಾಗೂ ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಅವರನ್ನು ಕೋಲ್ಕತಾ ಪೊಲೀಸರು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ನಡೆಸಿದ ಭಾಷಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ಹಾಗೂ ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಅವರನ್ನು ಕೋಲ್ಕತಾ ಪೊಲೀಸರು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಪುಣೆಯಲ್ಲಿರುವ ಮಿಥುನ್ ಚಕ್ರವರ್ತಿ ಅವರನ್ನು ಉತ್ತರ ಕೊಲ್ಕೋತಾದ ಮಣಿಕ್ತಲಾ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ್ದಾರೆ. 

ಏಪ್ರಿಲ್- ಮೇ ತಿಂಗಳಲ್ಲಿ ಎಂಟು ಹಂತಗಳವರೆಗೆ ನಡೆದ ಚುನಾವಣೆಯಲ್ಲಿ ಮಿಥುನ್ ಚಕ್ರವರ್ತಿ ಅವರು ಬಿಜೆಪಿಯ ತಾರಾ ಪ್ರಚಾರಕರಲ್ಲಿ ಒಬ್ಬರಾಗಿದ್ದರು. ಅವರು ಚುನಾವಣಾ ಪ್ರಚಾರದ ವೇಳೆ ನೀಡಿದ್ದ ಹೇಳಿಕೆಯು ಚುನಾವಣೆ ಬಳಿಕದ ಹಿಂಸಾಚಾರದಲ್ಲಿ ಪ್ರಮುಖ ಪಾತ್ರ ವಹಿಸಿತ್ತು ಎಂದು ಆರೋಪಿಸಲಾಗಿತ್ತು. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಮಿಥುನ್ ಚಕ್ರವರ್ತಿ ಅವರು ಕೊಲ್ಕೊತ್ತಾ ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಅವರನ್ನು ತನಿಖಾಧಿಕಾರಿಯೊಬ್ಬರು ಆನ್‌ಲೈನ್ ಮೂಲಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್ ಸೂಚನೆ ನೀಡಿತ್ತು.

ಮಾರ್ಚ್ 7 ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ 'ನಾನು ನಾಗರಹಾವು. ಒಮ್ಮೆ ಕಚ್ಚಿದರೆ ಸಾಕು' ಎಂದು ವಿರೋಧಿಗಳಿಗೆ ಮಾತಿನ ಬಾಣ ಬಿಟ್ಟಿದ್ದಾರೆ. ನಿನಗೆ ಇಲ್ಲಿ ಹೊಡೆದರೆ, ನಿನ್ನ ದೇಹ ಚಿತಾಗಾರದಲ್ಲಿ ಹೋಗಿ ಬೀಳುತ್ತದೆ' ಎಂಬ ತಮ್ಮದೇ ಸಿನಿಮಾ ಸಂಭಾಷಣೆಯನ್ನು ಅವರು ಹೇಳಿದ್ದರು.

ತಾವು ಪ್ರಚಾರದ ವೇಳೆ ಸಿನಿಮಾ ಡೈಲಾಗ್‌ಗಳನ್ನು ಮಾತ್ರವೇ ಉಚ್ಚರಿಸಿದ್ದಾಗಿ ಮತ್ತು ಅವುಗಳು ಯಾವುದೇ ನಿರ್ದಿಷ್ಟ ಅರ್ಥ ಬಿಂಬಿಸುತ್ತಿರಲಿಲ್ಲ ಎಂದು ಚಕ್ರವರ್ತಿ ಪ್ರತಿಪಾದಿಸಿದ್ದರು. ಆದರೆ ಇದು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಹೇಳಿಕೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT