ಮಿಥುನ್ ಚಕ್ರವರ್ತಿ 
ದೇಶ

ಪ್ರಚೋದನಾಕಾರಿ ಭಾಷಣ: ಕೋಲ್ಕತಾ ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ನಡೆಸಿದ ಭಾಷಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ಹಾಗೂ ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಅವರನ್ನು ಕೋಲ್ಕತಾ ಪೊಲೀಸರು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ನಡೆಸಿದ ಭಾಷಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ಹಾಗೂ ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಅವರನ್ನು ಕೋಲ್ಕತಾ ಪೊಲೀಸರು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಪುಣೆಯಲ್ಲಿರುವ ಮಿಥುನ್ ಚಕ್ರವರ್ತಿ ಅವರನ್ನು ಉತ್ತರ ಕೊಲ್ಕೋತಾದ ಮಣಿಕ್ತಲಾ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ್ದಾರೆ. 

ಏಪ್ರಿಲ್- ಮೇ ತಿಂಗಳಲ್ಲಿ ಎಂಟು ಹಂತಗಳವರೆಗೆ ನಡೆದ ಚುನಾವಣೆಯಲ್ಲಿ ಮಿಥುನ್ ಚಕ್ರವರ್ತಿ ಅವರು ಬಿಜೆಪಿಯ ತಾರಾ ಪ್ರಚಾರಕರಲ್ಲಿ ಒಬ್ಬರಾಗಿದ್ದರು. ಅವರು ಚುನಾವಣಾ ಪ್ರಚಾರದ ವೇಳೆ ನೀಡಿದ್ದ ಹೇಳಿಕೆಯು ಚುನಾವಣೆ ಬಳಿಕದ ಹಿಂಸಾಚಾರದಲ್ಲಿ ಪ್ರಮುಖ ಪಾತ್ರ ವಹಿಸಿತ್ತು ಎಂದು ಆರೋಪಿಸಲಾಗಿತ್ತು. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಮಿಥುನ್ ಚಕ್ರವರ್ತಿ ಅವರು ಕೊಲ್ಕೊತ್ತಾ ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಅವರನ್ನು ತನಿಖಾಧಿಕಾರಿಯೊಬ್ಬರು ಆನ್‌ಲೈನ್ ಮೂಲಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್ ಸೂಚನೆ ನೀಡಿತ್ತು.

ಮಾರ್ಚ್ 7 ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ 'ನಾನು ನಾಗರಹಾವು. ಒಮ್ಮೆ ಕಚ್ಚಿದರೆ ಸಾಕು' ಎಂದು ವಿರೋಧಿಗಳಿಗೆ ಮಾತಿನ ಬಾಣ ಬಿಟ್ಟಿದ್ದಾರೆ. ನಿನಗೆ ಇಲ್ಲಿ ಹೊಡೆದರೆ, ನಿನ್ನ ದೇಹ ಚಿತಾಗಾರದಲ್ಲಿ ಹೋಗಿ ಬೀಳುತ್ತದೆ' ಎಂಬ ತಮ್ಮದೇ ಸಿನಿಮಾ ಸಂಭಾಷಣೆಯನ್ನು ಅವರು ಹೇಳಿದ್ದರು.

ತಾವು ಪ್ರಚಾರದ ವೇಳೆ ಸಿನಿಮಾ ಡೈಲಾಗ್‌ಗಳನ್ನು ಮಾತ್ರವೇ ಉಚ್ಚರಿಸಿದ್ದಾಗಿ ಮತ್ತು ಅವುಗಳು ಯಾವುದೇ ನಿರ್ದಿಷ್ಟ ಅರ್ಥ ಬಿಂಬಿಸುತ್ತಿರಲಿಲ್ಲ ಎಂದು ಚಕ್ರವರ್ತಿ ಪ್ರತಿಪಾದಿಸಿದ್ದರು. ಆದರೆ ಇದು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಹೇಳಿಕೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT