ದೇಶ

ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Vishwanath S

ಶ್ರೀನಗರ: ಜಮ್ಮು ಕಾಶ್ಮೀರದ ನೌಗಮ್ ಪ್ರದೇಶದ ವಾಗೂರಾದಲ್ಲಿ ಭದ್ರತಾ ಪಡೆ ಭಯೋತ್ಪಾದಕನೋರ್ವನನ್ನು ಹೊಡೆದುರುಳಿಸಿದೆ. 

ಎನ್ಕೌಂಟರ್ ನಲ್ಲಿ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ಇನ್ನಷ್ಟೇ ಪತ್ತೆ ಹಚ್ಚಬೇಕು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಮಂಗಳವಾರ ತಡರಾತ್ರಿ ವಾಗೂರಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿತ್ತು.

SCROLL FOR NEXT