ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಟ್ವಿಟಿರ್ ನಿಯಂತ್ರಿಸುವ ಪ್ರಯತ್ನ ಖಂಡನೀಯ; ಬಗ್ಗದ ಪ್ರತಿಯೊಬ್ಬರನ್ನು ನಿಯಂತ್ರಿಸಲು ಕೇಂದ್ರದಿಂದ ಪ್ರಯತ್ನ: ಮಮತಾ

ಟ್ವಿಟರ್ ನಿಯಂತ್ರಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಯತ್ನದ ವಿರುದ್ಧ ಗುರುವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಮೈಕ್ರೊಬ್ಲಾಗ್ಗಿಂಗ್ ವೇದಿಕೆ ಮೇಲೆ ಪ್ರಭಾವ ಬೀರುವಲ್ಲಿ ವಿಫಲವಾಗಿ, ಇದೀಗ ಅದನ್ನು ನಾಶಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.

ಕೊಲ್ಕತ್ತಾ:  ಟ್ವಿಟರ್ ನಿಯಂತ್ರಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಯತ್ನದ ವಿರುದ್ಧ ಗುರುವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಮೈಕ್ರೊಬ್ಲಾಗ್ಗಿಂಗ್ ವೇದಿಕೆ ಮೇಲೆ ಪ್ರಭಾವ ಬೀರುವಲ್ಲಿ ವಿಫಲವಾಗಿ, ಇದೀಗ ಅದನ್ನು ನಾಶಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದಿಂದ ತನ್ನ ಸರ್ಕಾರ ಕೂಡಾ ಅದೇ ರೀತಿಯ ಬೆದರಿಕೆ ಎದುರಿಸುತ್ತಿದೆ. ಅದನ್ನು ನಾನು ಖಂಡಿಸುತ್ತೇನೆ, ಟ್ವಿಟರ್ ನ್ನು ನಿಯಂತ್ರಿಸಲು ಅವರಿಗೆ ಸಾಧ್ಯವಿಲ್ಲ, ಆದ್ದರಿಂದ ಅದನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ಬಗ್ಗದ ಪ್ರತಿಯೊಬ್ಬರನ್ನು ನಿಯಂತ್ರಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಅವರನ್ನು ನನನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆದ್ದರಿಂದ ನನ್ನ ಸರ್ಕಾರವನ್ನು ಕೂಡಾ ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ಐಟಿ ಕಾನೂನುಗಳನ್ನು ಪಾಲಿಸದ ಟ್ವಿಟರ್, ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕಡ್ಡಾಯವಾಗಿ ಪ್ರಮುಖ ನೇಮಕದಲ್ಲೂ ವಿಫಲವಾಗಿರುವುದರಿಂದ ದೇಶದಲ್ಲಿ ಕಾನೂನು ವಿನಾಯಿತಿಯನ್ನು ಕಳೆದುಕೊಂಡಿದೆ. ಮೂರನೇ ವ್ಯಕ್ತಿಯ ಕಾನೂನುಬಾಹಿರ ವಿಷಯಕ್ಕಾಗಿ ಭಾರತೀಯ ದಂಡ ಸಂಹಿತೆಯಡಿ ಕ್ರಮ ಕೈಗೊಳ್ಳಲು ಈಗ ಅದು ಜವಾಬ್ದಾರವಾಗಿರುತ್ತದೆ.

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರ ಮುಂದುವರೆದಿದೆ ಎಂದು ಬಿಜೆಪಿ ಆರೋಪಿಸುತ್ತಿದ್ದರೆ, ಅದು ಕೇಸರಿ ಪಕ್ಷದ ಗಿಮ್ಮಿಕ್, ಇದು ಸಂಪೂರ್ಣವಾಗಿ ಆಧಾರ ರಹಿತವಾದದ್ದು, ರಾಜ್ಯದಲ್ಲಿ ಇದೀಗ ಯಾವುದೇ ರಾಜಕೀಯ ಹಿಂಸಾಚಾರ ನಡೆಯುತ್ತಿಲ್ಲ, ಒಂದೆರಡು ಸಣ್ಣಪುಟ್ಟ ಘಟನೆಗಳು ನಡೆಯುತ್ತಿರಬಹುದು ಆದರೆ, ಅವುಗಳಿಗೆ ರಾಜಕೀಯ ಹಿಂಸಾಚಾರವೆಂದು ಹಣೆಪಟ್ಟಿ ಕಟ್ಟಬಾರದು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT