ಮಮತಾ ಬ್ಯಾನರ್ಜಿ-ಸುವೇಂದು ಅಧಿಕಾರಿ 
ದೇಶ

ನಂದಿಗ್ರಾಮ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ಗೆಲುವು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ನಂದಿಗ್ರಾಮ ವಿಧಾನಸಭೆಯಿಂದ ಸುವೇಂದು ಅಧಿಕಾರಿ ಶಾಸನಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಕೋರ್ಟ್ ಮೊರೆ ಹೋಗಿದ್ದಾರೆ.

ನಂದಿಗ್ರಾಮ ವಿಧಾನಸಭೆಯಿಂದ ಸುವೇಂದು ಅಧಿಕಾರಿ ಶಾಸನಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಕೋರ್ಟ್ ಮೊರೆ ಹೋಗಿದ್ದಾರೆ. ಕೋಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿರುವ ಮಮತಾ ಬ್ಯಾನರ್ಜಿ ಅವರ ಅರ್ಜಿಯ ವಿಚಾರಣೆ ಜೂ.18 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. 

ನಂದಿಗ್ರಾಮದಿಂದ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ 2,000 ಮತಗಳ ಅಂತರದಿಂದ ಸೋತಿದ್ದರು. ಈಗ ಸುವೇಂದು ಅಧಿಕಾರಿ ಅವರು ಚುನಾವಣೆಯಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿರುವ ಮಮತಾ ಬ್ಯಾನರ್ಜಿ ಮೂರು ಅಂಶಗಳ ಆಧಾರದಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕೆಂದು ಕೋರ್ಟ್ ಗೆ ಮನವಿ ಮಾಡಿದ್ದಾರೆ. 

ಲಂಚ ನೀಡುವುದು ಸೇರಿದಂತೆ ಭ್ರಷ್ಟಾಚಾರದ ಮೂಲಕ, ದ್ವೇಷ ಹಾಗೂ ಶತ್ರುತ್ವವನ್ನು ಉತ್ತೇಜಿಸುವುದರ ಮೂಲಕ, ಧಾರ್ಮಿಕ ನೆಲೆಗಟ್ಟಿನಲ್ಲಿ ಮತಗಳನ್ನು ಕೇಳುವ ಮೂಲಕ, ಬೂತ್ ಕ್ಯಾಪ್ಚರ್ ಮೂಲಕ ಸುವೇಂದು ಅಧಿಕಾರಿ ಗೆದ್ದಿದ್ದಾರೆ, ಮತ ಎಣಿಕೆಯಲ್ಲಿನ ಪ್ರಕ್ರಿಯೆ ಹಾಗೂ ಮತ ಎಣಿಕೆಯ ಫಲಿತಾಂಶ, ಮತಗಳ ದಾಖಲೆಗೆ ಪಾಲಿಸಬೇಕಿರುವ ಪಾರ್ಮ್ 17 ಸಿ ಯ ಪಾಲನೆ ಮಾಡುವ ವಿಷಯದಲ್ಲಿ ಲೋಪದೋಷಗಳು ಕಂಡುಬಂದಿವೆ. ಈ ಎಲ್ಲಾ ಆಧಾರದಲ್ಲಿ ಸುವೇಂದು ಅಧಿಕಾರಿಯ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕೆಂದು ಮಮತಾ ಬ್ಯಾನರ್ಜಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. 

ಇದೇ ವೇಳೆ ಮರು ಮತ ಎಣಿಕೆಗೆ ತಮ್ಮ ಅರ್ಜಿಯನ್ನು ತಿರಸ್ಕರಿಸಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಸುವೇಂದು ಅಧಿಕಾರಿ ಭ್ರಷ್ಟಾಚಾರದ ಮೂಲಕ ಮಮತಾ ಬ್ಯಾನರ್ಜಿ ಅವರ ಗೆಲುವಿನ ಸಾಧ್ಯತೆಗಳನ್ನು ವಸ್ತುತಃ ಬದಲಾವಣೆ ಮಾಡಿದ್ದಾರೆ ಎಂದು ಮಮತಾ ಬ್ಯಾನರ್ಜಿ ಪರ ವಕೀಲರು ಅರ್ಜಿಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ