ಹತ್ಯೆ (ಸಾಂಕೇತಿಕ ಚಿತ್ರ) 
ದೇಶ

ರಾಜಕೀಯ ದ್ವೇಷ: ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಇಬ್ಬರು ಟಿಡಿಪಿ ನಾಯಕರ ಭೀಕರ ಹತ್ಯೆ!

ಆಂಧ್ರ ಪ್ರದೇಶದಲ್ಲಿ ಮತ್ತೆ ಹತ್ಯಾ ರಾಜಕೀಯ ಮುಂದುವರೆದಿದ್ದು, ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಇಬ್ಬರು ಟಿಡಿಪಿ ನಾಯಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕರ್ನೂಲ್: ಆಂಧ್ರ ಪ್ರದೇಶದಲ್ಲಿ ಮತ್ತೆ ಹತ್ಯಾ ರಾಜಕೀಯ ಮುಂದುವರೆದಿದ್ದು, ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಇಬ್ಬರು ಟಿಡಿಪಿ ನಾಯಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಆಂಧ್ರ ಪ್ರದೇಶದ ಪಣ್ಯಂ ವಿಧಾನಸಭಾ ಕ್ಷೇತ್ರದ ಗಡಿ ವೇಮುಲಾ ಮಂಡಲದ ಪೆಸರವಾಯಿ ಗ್ರಾಮದ ಸಹೋದರರಾದ ಒಡ್ಡು ನಾಗೇಶ್ವರ ರೆಡ್ಡಿ ಮತ್ತು ಅವರ ಕಿರಿಯ ಸಹೋದರ ಪ್ರತಾಪ್ ರೆಡ್ಡಿ ಅವರನ್ನು ಸಿನಿಮಾ ಶೈಲಿಯಲ್ಲಿ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಸ್ಮಶಾನದಿಂದ ಬರುವಾಗ ಹತ್ಯೆ
ಮೃತ ಒಡ್ಡು ನಾಗೇಶ್ವರ ರೆಡ್ಡಿ ಮಾಜಿ ಸರ್ಪಂಚ್ ಆಗಿದ್ದು, ಅವರ ಕಿರಿಯ ಸಹೋದರ ಪ್ರತಾಪ್ ರೆಡ್ಡಿ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿದ್ದರು. ಪೆಸರವಾಯಿ ಗ್ರಾಮದ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ದುಷ್ಕರ್ಮಿಗಳು ಇಬ್ಬರೂ ಸಹೊದರರನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಲೆ ಗೈದಿದ್ದಾರೆ. ಅದೇ ರಸ್ತೆಯಲ್ಲಿ ಸಹೋದರರು ಸಾಗುತ್ತಿದ್ದ ವೇಳೆ ಅವರ ಬೊಲೆರೊ ವಾಹನಕ್ಕೆ ದುಷ್ಕರ್ಮಿಗಳ ವಾಹನ ಢಿಕ್ಕಿ ಹೊಡೆದಿದ್ದು, ಈ ವೇಳೆ ವಾಹನದಿಂದ ಕೆಳಗೆ ಇಳಿಯುತ್ತಲೇ ಅವರನ್ನು ಅಟ್ಟಾಡಿಸಿ ಕೊಲೆಗೈಯ್ಯಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಮೂರು ದಿನಗಳ ಹಿಂದೆ ನಿಧನರಾದ ಆಪ್ತ ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಬ್ಬರು ಸಹೋದರರು ಸ್ಮಶಾನದಿಂದ ವಾಪಸ್ ಆಗುತ್ತಿದ್ದಾಗ ಸ್ಥಳದಲ್ಲೇ ಅವಿತಿದ್ದ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಈ ವೇಳೆ ನಾಗೇಶ್ವರ ರೆಡ್ಡಿ ಮತ್ತು ಪ್ರತಾಪ್ ರೆಡ್ಡಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇಬ್ಬರನ್ನೂ ಸಮೀಪದ ನಂದ್ಯಾಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಇಬ್ಬರೂ ಸಾವಿಗೀಡಾಗಿದ್ದರು. 

ಗ್ರಾಮದಲ್ಲಿ ಭಾರಿ ಭದ್ರತೆ
ಜೋಡಿ ಹತ್ಯೆ ಬಳಿಕ ಕೃತ್ಯ ನಡೆದ ಪೆಸರವಾಯಿ ಗ್ರಾಮದಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ. ಗ್ರಾಮದಲ್ಲಿ ಯಾವುದೇ ಘರ್ಷಣೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ನಂದ್ಯಾಲಾ ಡಿಎಸ್ಪಿ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದು, ಘಟನೆಯಲ್ಲಿ ಗಾಯಗೊಂಡವರ ಹೇಳಿಕೆಗಳ ಆಧಾರದ ಮೇಲೆ ಈ ಘಟನೆಗೆ ಯಾರು ಕಾರಣ ಎಂಬ ವಿಚಾರದ ಕುರಿತು ತನಿಖೆ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT