ಹತ್ಯೆ (ಸಾಂಕೇತಿಕ ಚಿತ್ರ) 
ದೇಶ

ರಾಜಕೀಯ ದ್ವೇಷ: ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಇಬ್ಬರು ಟಿಡಿಪಿ ನಾಯಕರ ಭೀಕರ ಹತ್ಯೆ!

ಆಂಧ್ರ ಪ್ರದೇಶದಲ್ಲಿ ಮತ್ತೆ ಹತ್ಯಾ ರಾಜಕೀಯ ಮುಂದುವರೆದಿದ್ದು, ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಇಬ್ಬರು ಟಿಡಿಪಿ ನಾಯಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕರ್ನೂಲ್: ಆಂಧ್ರ ಪ್ರದೇಶದಲ್ಲಿ ಮತ್ತೆ ಹತ್ಯಾ ರಾಜಕೀಯ ಮುಂದುವರೆದಿದ್ದು, ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಇಬ್ಬರು ಟಿಡಿಪಿ ನಾಯಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಆಂಧ್ರ ಪ್ರದೇಶದ ಪಣ್ಯಂ ವಿಧಾನಸಭಾ ಕ್ಷೇತ್ರದ ಗಡಿ ವೇಮುಲಾ ಮಂಡಲದ ಪೆಸರವಾಯಿ ಗ್ರಾಮದ ಸಹೋದರರಾದ ಒಡ್ಡು ನಾಗೇಶ್ವರ ರೆಡ್ಡಿ ಮತ್ತು ಅವರ ಕಿರಿಯ ಸಹೋದರ ಪ್ರತಾಪ್ ರೆಡ್ಡಿ ಅವರನ್ನು ಸಿನಿಮಾ ಶೈಲಿಯಲ್ಲಿ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಸ್ಮಶಾನದಿಂದ ಬರುವಾಗ ಹತ್ಯೆ
ಮೃತ ಒಡ್ಡು ನಾಗೇಶ್ವರ ರೆಡ್ಡಿ ಮಾಜಿ ಸರ್ಪಂಚ್ ಆಗಿದ್ದು, ಅವರ ಕಿರಿಯ ಸಹೋದರ ಪ್ರತಾಪ್ ರೆಡ್ಡಿ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿದ್ದರು. ಪೆಸರವಾಯಿ ಗ್ರಾಮದ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ದುಷ್ಕರ್ಮಿಗಳು ಇಬ್ಬರೂ ಸಹೊದರರನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಲೆ ಗೈದಿದ್ದಾರೆ. ಅದೇ ರಸ್ತೆಯಲ್ಲಿ ಸಹೋದರರು ಸಾಗುತ್ತಿದ್ದ ವೇಳೆ ಅವರ ಬೊಲೆರೊ ವಾಹನಕ್ಕೆ ದುಷ್ಕರ್ಮಿಗಳ ವಾಹನ ಢಿಕ್ಕಿ ಹೊಡೆದಿದ್ದು, ಈ ವೇಳೆ ವಾಹನದಿಂದ ಕೆಳಗೆ ಇಳಿಯುತ್ತಲೇ ಅವರನ್ನು ಅಟ್ಟಾಡಿಸಿ ಕೊಲೆಗೈಯ್ಯಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಮೂರು ದಿನಗಳ ಹಿಂದೆ ನಿಧನರಾದ ಆಪ್ತ ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಬ್ಬರು ಸಹೋದರರು ಸ್ಮಶಾನದಿಂದ ವಾಪಸ್ ಆಗುತ್ತಿದ್ದಾಗ ಸ್ಥಳದಲ್ಲೇ ಅವಿತಿದ್ದ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಈ ವೇಳೆ ನಾಗೇಶ್ವರ ರೆಡ್ಡಿ ಮತ್ತು ಪ್ರತಾಪ್ ರೆಡ್ಡಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇಬ್ಬರನ್ನೂ ಸಮೀಪದ ನಂದ್ಯಾಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಇಬ್ಬರೂ ಸಾವಿಗೀಡಾಗಿದ್ದರು. 

ಗ್ರಾಮದಲ್ಲಿ ಭಾರಿ ಭದ್ರತೆ
ಜೋಡಿ ಹತ್ಯೆ ಬಳಿಕ ಕೃತ್ಯ ನಡೆದ ಪೆಸರವಾಯಿ ಗ್ರಾಮದಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ. ಗ್ರಾಮದಲ್ಲಿ ಯಾವುದೇ ಘರ್ಷಣೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ನಂದ್ಯಾಲಾ ಡಿಎಸ್ಪಿ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದು, ಘಟನೆಯಲ್ಲಿ ಗಾಯಗೊಂಡವರ ಹೇಳಿಕೆಗಳ ಆಧಾರದ ಮೇಲೆ ಈ ಘಟನೆಗೆ ಯಾರು ಕಾರಣ ಎಂಬ ವಿಚಾರದ ಕುರಿತು ತನಿಖೆ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT