ಅಸ್ಸಾಂನ ಮರಿಯಾನಿ ಶಾಸಕ ರುಪ್ಜ್ಯೋತಿ ಕುರ್ಮಿ 
ದೇಶ

ಅಸ್ಸಾಂ ಕಾಂಗ್ರೆಸ್ ಶಾಸಕ ರುಪ್ಜ್ಯೋತಿ ಕುರ್ಮಿ ರಾಜೀನಾಮೆ: ಬಿಜೆಪಿ ಸೇರಲು ಸಜ್ಜು!

ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಗೆ ಅಸ್ಸಾಂನಲ್ಲಿ ಮತ್ತೊಂದು ಹೊಡೆತ ಬಿದ್ದಿದೆ. ಅಸ್ಸಾಂನ ಮರಿಯಾನಿ ಶಾಸಕ ರುಪ್ಜ್ಯೋತಿ ಕುರ್ಮಿ ಇಂದು ಶಾಸಕ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಸದ್ಯದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.

ಗುವಾಹಟಿ: ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಗೆ ಅಸ್ಸಾಂನಲ್ಲಿ ಮತ್ತೊಂದು ಹೊಡೆತ ಬಿದ್ದಿದೆ. ಅಸ್ಸಾಂನ ಮರಿಯಾನಿ ಶಾಸಕ ರುಪ್ಜ್ಯೋತಿ ಕುರ್ಮಿ ಇಂದು ಶಾಸಕ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಸದ್ಯದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.

ರಾಜ್ಯದ ಚಹಾ ಬೆಳೆಗಾರರ ಸಮುದಾಯದ ನಾಯಕನಾಗಿರುವ ರುಪ್ಜ್ಯೋತಿ ಕುರ್ಮಿ ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ಬಿಸ್ವಜಿತ್ ಡೈಮರಿ ಅವರಿಗೆ ವಿಧಾನಸಭೆಯ ಅವರ ಕಚೇರಿಗೆ ತೆರಳಿ ಸಲ್ಲಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಸಹ ತಲುಪಿಸಿದ್ದೇನೆ ಎಂದಿದ್ದಾರೆ.

ಇದೇ 21ರಂದು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವಾಗಿ ಹೇಳಿದ್ದಾರೆ. ನಾಲ್ಕು ಬಾರಿ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ರುಪ್ಜ್ಯೋತಿ ಕುರ್ಮಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಚ್ಛಾಟಿಸಿತ್ತು.

ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೊರಾ ಹೇಳಿಕೆ ನೀಡಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿ ನಿರ್ಧಾರವನ್ನು ಅನುಮೋದಿಸಿದೆ ಎಂದಿದ್ದಾರೆ.

ಮಾಜಿ ಶಾಸಕ ರಾಣಾ ಗೋಸ್ವಾಮಿ ನೇತೃತ್ವದಲ್ಲಿ ಬೋರಾ ಅವರು ಮೂವರು ಸದಸ್ಯರ ತಂಡವನ್ನು ರಚಿಸಿ, ಮರಿಯಾನಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲು ಮತ್ತು ಅಲ್ಲಿನ ರಾಜಕೀಯ ಪರಿಸ್ಥಿತಿಯನ್ನು ಸಂಗ್ರಹಿಸಲು ಸೂಚಿಸಿದ್ದಾರೆ. ಥೌರಾ ಶಾಸಕ ಸುಶಾಂತ ಬೋರ್ಗೊಹೈನ್ ಮತ್ತು ಮನೋಜ್ ಧನೊವರ್ ತಂಡದ ಇತರ ಸದಸ್ಯರು.

ಚಹಾ ಬುಡಕಟ್ಟು ಸಮುದಾಯದ ಪ್ರಮುಖ ಸದಸ್ಯರಾದ ಕುರ್ಮಿ, ಕಾಂಗ್ರೆಸ್ ನ ಮಾಜಿ ಸಚಿವ ದಿ. ರೂಪಮ್ ಕುರ್ಮಿಯವರ ಪುತ್ರರಾಗಿದ್ದು, 2006 ರಿಂದ ಮರಿಯಾನಿ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT