ಮೇಕೆದಾಟು, ಎನ್ ಜಿಟಿ 
ದೇಶ

ಮೇಕೆದಾಟು ಯೋಜನೆಯಲ್ಲಿ ಕರ್ನಾಟಕಕ್ಕೆ ಮಹತ್ವದ ಮುನ್ನಡೆ!

ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆಯಾಗಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರೀಯ ಹಸಿರು ಪೀಠ ವಜಾಗೊಳಿಸಿದೆ. 

ಬೆಂಗಳೂರು: ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆಯಾಗಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರೀಯ ಹಸಿರು ಪೀಠ ವಜಾಗೊಳಿಸಿದೆ. 

ರಾಜ್ಯ ಸರ್ಕಾರ ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆಯದೆ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಮುಂದಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದ ರಾಷ್ಟ್ರೀಯ ಹಸಿರು ಪ್ರಾಧಿಕಾರ ಈ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ಇತ್ಯರ್ಥಗೊಳಿಸಿದೆ.

"ಜಲಾಶಯ ನಿರ್ಮಾಣ ವಿವಾದ ಸುಪ್ರೀಂಕೋರ್ಟ್ ಮುಂದೆ ಬಾಕಿ ಇದೆ ಮತ್ತು ಅರಣ್ಯ ಇಲಾಖೆಯ ಅನುಮತಿ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿ ಬಾಕಿ ಇರುವುದರಿಂದ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಳ್ಳುವ ಅಗತ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಈ ಕುರಿತು ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಈ ಯೋಜನೆಗೆ ತಡೆ ಕೋರುವ ಅರ್ಜಿಯ ವಿಚಾರಣೆ ನಡೆಸಿದ ಎನ್.ಜಿ.ಟಿ ಇಂದು ರಾಜ್ಯದ ವಾದವನ್ನು ಮನ್ನಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ. ಆದಷ್ಟು ಶೀಘ್ರದಲ್ಲಿ ಎಲ್ಲ ಅನುಮತಿಗಳನ್ನು ಪಡೆದು ಯೋಜನೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಹಸಿರು ಪೀಠದ ಈ ನಿರ್ಧಾರವನ್ನು ಸ್ವಾಗತಿಸುವುದಾಗಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಈ ಯೋಜನೆಯ ಅನುಷ್ಠಾನದ ಮೂಲಕ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳ ಜನತೆಗೆ ಕುಡಿಯುವ ನೀರು ಪೂರೈಸಲು ನೆರವಾಗಲಿದೆ ಎಂದು ಅವರು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಇತೀಚೆಗೆ, ನ್ಯಾಯಮೂರ್ತಿ ಕೆ ರಾಮಕೃಷ್ಣನ್ ಮತ್ತು ತಜ್ಞ ಸದಸ್ಯ ಕೆ ಸತ್ಯಗೋಪಾಲ್ ಅವರನ್ನೊಳಗೊಂಡ ಎನ್‌ಜಿಟಿ ಸದರ್ನ್ ಬೆಂಚ್, ಅಗತ್ಯ ಅರಣ್ಯ ಅನುಮತಿ ಪಡೆಯದೆ ಕರ್ನಾಟಕವು ಮೆಕೆಡಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ತಯಾರಿ ಆರಂಭಿಸಿದೆ ಎಂಬ ಮಾಧ್ಯಮ ವರದಿಯೊಂದನ್ನು ಆಧರಿಸಿ ಸುಮೋಟೋ ಅರ್ಜಿ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ