ಗುರುಗ್ರಾಮದಲ್ಲಿ ಲಸಿಕೆ ಪಡೆಯುವುದಕ್ಕೆ ಸರತಿ ಸಾಲಿನಲ್ಲಿ ನಿಂತಿರುವ ಜನತೆ 
ದೇಶ

5 ತಿಂಗಳ ಅಭಿಯಾನದಲ್ಲಿ ದೇಶದ ಶೇ.5 ರಷ್ಟು ಮಂದಿಗೆ ಮಾತ್ರ ಪೂರ್ಣಪ್ರಮಾಣದ ಲಸಿಕೆ

ಕೊರೋನಾ ಸೋಂಕು ಎದುರಿಸಲು 5 ತಿಂಗಳಿನಿಂದ ನಡೆಯುತ್ತಿರುವ ಲಸಿಕೆ ಅಭಿಯಾನದಲ್ಲಿ ಭಾರತದ ಒಟ್ಟಾರೆ ವಯಸ್ಕರ ಪೈಕಿ ಶೇ.5 ರಷ್ಟು ವಯಸ್ಕ ಜನಸಂಖ್ಯೆಗೆ ಎರಡೂ ಡೋಸ್ ಗಳ ಲಸಿಕೆ ನೀಡಲಾಗಿದೆ. 

ನವದೆಹಲಿ: ಕೊರೋನಾ ಸೋಂಕು ಎದುರಿಸಲು 5 ತಿಂಗಳಿನಿಂದ ನಡೆಯುತ್ತಿರುವ ಲಸಿಕೆ ಅಭಿಯಾನದಲ್ಲಿ ಭಾರತದ ಒಟ್ಟಾರೆ ವಯಸ್ಕರ ಪೈಕಿ ಶೇ.5 ರಷ್ಟು ವಯಸ್ಕ ಜನಸಂಖ್ಯೆಗೆ ಎರಡೂ ಡೋಸ್ ಗಳ ಲಸಿಕೆ ನೀಡಲಾಗಿದೆ. 

ಕೇಂದ್ರ ಆರೋಗ್ಯ ಸಚಿವಾಲಯ ಜೂ.18 ರಂದು ನೀಡಿರುವ ಮಾಹಿತಿಯ ಪ್ರಕಾರ 94 ಕೋಟಿ ವಯಸ್ಕ ಜನಸಂಖ್ಯೆಯ ಪೈಕಿ 5.03 ಕೋಟಿ ಮಂದಿಗೆ ಎರಡೂ ಡೋಸ್ ಗಳ ಲಸಿಕೆಯನ್ನು ನೀಡಲಾಗಿದೆ. ಕನಿಷ್ಟ 27.07 ಕೋಟಿ ಮಂದಿ ಮೊದಲ ಡೋಸ್ ಲಸಿಕೆಯನ್ನು ಪಡೆದಿದ್ದು ನಾಲ್ಕನೇ ಒಂದರಷ್ಟು ಮಂದಿಗೆ ಮೊದಲ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಪೂರ್ತಿ ಜನಸಂಖ್ಯೆಗೆ ಲಸಿಕೆ ನೀಡಿರುವ ರಾಷ್ಟ್ರಗಳ ಪೈಕಿ ಭಾರತಕ್ಕಿಂತ 80 ರಾಷ್ಟ್ರಗಳು ಮುಂದಿದೆ. ಕಳೆದ ಒಂದು ವಾರದಲ್ಲಿ ದೇಶದಲ್ಲಿ ದಿನವೊಂದಕ್ಕೆ ಸರಾಸರಿ 30.57 ಲಕ್ಷ ಲಸಿಕೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ 40 ಲಕ್ಷದ ಗುರಿಗಿಂತಲೂ ಕಡಿಮೆ ಇದೆ. ಜೂ.14 ರಂದು ಅತಿ ಹೆಚ್ಚು ಅಂದರೆ 38.20 ಲಕ್ಷ ಲಸಿಕೆಗಳನ್ನು ಏಪ್ರಿಲ್ ನ ಮೊದಲ ವಾರದಲ್ಲಿ 40 ಲಕ್ಷ ಲಸಿಕೆಯನ್ನು ನೀಡಿರುವುದು ದಾಖಲೆಯಾಗಿದೆ. ಜೂ.14 ರಿಂದ ಲಸಿಕೆ ನೀಡುವ ಪ್ರಮಾಣ ಇಳಿಕೆಯಾಗಿದ್ದು, ಈ  ಪರಿಸ್ಥಿತಿ ಉತ್ತಮವಾದುದ್ದಲ್ಲ ಎಂದು ತಜ್ಞರು ಎಚ್ಚರಿಸಿದ್ದಾರೆ. 

ವರ್ಷಾಂತ್ಯಕ್ಕೆ ಇಡೀ ಜನಸಂಖ್ಯೆಗೆ ಲಸಿಕೆ ನೀಡುವ ಸರ್ಕಾರದ ಗುರಿ ತಲುಪಬೇಕಾದರೆ ದಿನವೊಂದಕ್ಕೆ 70-75 ಲಕ್ಷ ಮಂದಿಗೆ ಲಸಿಕೆ ನೀಡಬೇಕಾಗುತ್ತದೆ ಎಂದು ಕೋವಿಡ್-19 ಟಾಸ್ಕ್ ಫೋರ್ಸ್ ನ ಸದಸ್ಯರೊಬ್ಬರು ಹೇಳಿದ್ದಾರೆ. ಕಳೆದ ತಿಂಗಳಿಗೆ ಹೋಲಿಕೆ ಮಾಡಿದರೆ ಜೂನ್ ತಿಂಗಳಲ್ಲಿ ಶೇ.50 ರಷ್ಟು ಕೋವಿಡ್-19 ಲಸಿಕೆಗಳು ಲಭ್ಯವಿದೆ. 10 ಕೋಟಿ ಹಾಗೂ 90 ಲಕ್ಷ ಡೋಸ್ ಗಳ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳು ಅನುಕ್ರಮವಾಗಿ ಜೂನ್ ನಲ್ಲಿ ಲಭ್ಯವಿರಲಿದೆ. ಇದರ ಜೊತೆಗೆ 1 ಕೋಟಿ ಸ್ಪುಟ್ನಿಕ್ ಲಸಿಕೆಯೂ ಲಭ್ಯವಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT