ವಂಡಲೂರು ಮೃಗಾಲಯ (ಪಿಟಿಐ ಚಿತ್ರ) 
ದೇಶ

ಕೋವಿಡ್-19: ತಮಿಳುನಾಡು ವಂಡಲೂರು ಮೃಗಾಯಲದ 4 ಸಿಂಹಗಳಿಗೆ ಡೆಲ್ಟಾ ರೂಪಾಂತರಿ ಸೋಂಕು

ತಮಿಳುನಾಡಿನ ಚೆನ್ನೈನಲ್ಲಿರುವ ವಂಡಲೂರಿನಲ್ಲಿರುವ ಮೃಗಾಲಯದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿರುವಂತೆಯೇ ಇದೀಗ ಮೃಗಾಲಯದ ಈ ಪರಿಸ್ಥಿತಿಗೆ ವೈರಸ್ ರೂಪಾಂತರಿ ಡೆಲ್ಟಾ ಕಾರಣ ಎಂದು ತಜ್ಞರು ಹೇಳಿದ್ದಾರೆ.

ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿರುವ ವಂಡಲೂರಿನಲ್ಲಿರುವ ಮೃಗಾಲಯದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿರುವಂತೆಯೇ ಇದೀಗ ಮೃಗಾಲಯದ ಈ ಪರಿಸ್ಥಿತಿಗೆ ವೈರಸ್ ರೂಪಾಂತರಿ ಡೆಲ್ಟಾ ಕಾರಣ ಎಂದು ತಜ್ಞರು ಹೇಳಿದ್ದಾರೆ.

ಹೌದು.. ಪ್ರಸ್ತುತ ಮೃಗಾಲಯದಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿರುವ ನಾಲ್ಕು ಸಿಂಹಗಳಲ್ಲಿ ಈ ಡೆಲ್ಟಾ ರೂಪಾಂತರ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃಗಾಲಯದಲ್ಲಿ ತಜ್ಞರು ಸೋಂಕು ಪೀಡಿತ ಸಿಂಹಗಳ ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಿದ್ದು ಈ ವೇಳೆ ಕೋವಿಡ್-19 ರೂಪಾಂತರ ವೈರಸ್ ಡೆಲ್ಚಾ  (ಬಿ.1.617.2) ಕಂಡುಬಂದಿದೆ. 

ಈ ವರ್ಷ ಮೇ 11 ರಂದು, ವಿಶ್ವ ಆರೋಗ್ಯ ಸಂಸ್ಥೆ ಬಿ .1.617.2 ವಂಶಾವಳಿಯನ್ನು ಕಾಳಜಿಯ ರೂಪಾಂತರಿ ತಳಿ (ವಿಒಸಿ) ಎಂದು ವರ್ಗೀಕರಿಸಿತ್ತು. ಇದು ಹೆಚ್ಚಿನ ಮತ್ತು ವೇಗದ ಪ್ರಸರಣ ಸಾಮರ್ಥ್ಯ ಹೊಂದಿದ್ದು,ಕಡಿಮೆ ತಟಸ್ಥೀಕರಣದ ಪುರಾವೆಗಳನ್ನು ತೋರಿಸಿದೆ ಎಂದು ಮೃಗಾಲಯದ ಉಪ ನಿರ್ದೇಶಕರು  ತಿಳಿಸಿದ್ದಾರೆ.

ಮೃಗಾಲಯದಲ್ಲಿರುವ 11 ಸಿಂಹಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ ನಾಲ್ಕು ಸಿಂಹಗಳ ಮಾದರಿಯನ್ನು ಮೇ 24 ರಂದು ಸಂಗ್ರಹಿಸಿ, ಮೇ 29 ರಂದು ಏಳು ಸಿಂಹಗಳ ಮಾದರಿಯನ್ನು ಭೋಪಾಲ್‌ನ ICAR- ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ ಗೆ  ಕಳುಹಿಸಲಾಗಿತ್ತು. ಈ ವರದಿ ಇದೀಗ ಬಂದಿದ್ದು, ಈ ಪೈಕಿ 4 ಸಿಂಹಗಳಲ್ಲಿ ಡೆಲ್ಟಾ ರೂಪಾಂತರಿ ತಳಿ ಪತ್ತೆಯಾಗಿದೆ.   

ಒಂಬತ್ತು ವರ್ಷದ ಸಿಂಹಿಣಿ ನೀಲಾ ಮತ್ತು 12 ವರ್ಷ ವಯಸ್ಸಿನ ಪಾಥ್ಬನಾಥನ್ ಎಂಬ ಗಂಡು ಸಿಂಹ ಈ ತಿಂಗಳ ಆರಂಭದಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT