ಅಸ್ಸಾಂ ಜನಸಂಖ್ಯಾ ನೀತಿ 
ದೇಶ

'ಸರ್ಕಾರಿ ಯೋಜನೆಗಳ ಲಾಭ ಬೇಕೆ? ಎರಡೇ ಮಕ್ಕಳ ನಿಯಮ ಪಾಲಿಸಿ': ಅಸ್ಸಾಂನಲ್ಲಿ ಶೀಘ್ರ ಜನಸಂಖ್ಯಾ ನೀತಿ ಜಾರಿ!

ಸರ್ಕಾರಿ ಯೋಜನೆಗಳ ಲಾಭ ಪಡೆಯಬೇಕು ಎಂದರೆ ಇನ್ನು ಮುಂದೆ ಸರ್ಕಾರದ ಜನಸಂಖ್ಯಾ ನೀತಿಯನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಗುವಾಹತಿ: ಸರ್ಕಾರಿ ಯೋಜನೆಗಳ ಲಾಭ ಪಡೆಯಬೇಕು ಎಂದರೆ ಇನ್ನು ಮುಂದೆ ಸರ್ಕಾರದ ಜನಸಂಖ್ಯಾ ನೀತಿಯನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಹೌದು.. ದೇಶದಲ್ಲಿ ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಇದೇ ನಿಟ್ಟಿನಲ್ಲಿ ಇದೀಗ ಅಸ್ಸಾಂ ಸರ್ಕಾರ ಕೂಡ ಜನಸಂಖ್ಯಾ ನೀತಿಯನ್ನು ಜಾರಿಗೆ ತರಲು ಮುಂದಾಗಿದ್ದು, ರಾಜ್ಯ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಇನ್ನು ಮುಂದೆ 2 ಮಕ್ಕಳ  ಕಡ್ಡಾಯವಿರುವ ಜನಸಂಖ್ಯಾ ನೀತಿಯನ್ನು ಪಾಲಿಸಬೇಕು ಎಂದು ಹೇಳಿದ್ದಾರೆ.

ಅಸ್ಸಾಂ ಸರ್ಕಾರ ಶೀಘ್ರದಲ್ಲೇ ಜನಸಂಖ್ಯಾ ನೀತಿಯನ್ನು ಜಾರಿಗೆ ತರಲಿದ್ದು, ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವಾಗ ರಾಜ್ಯವು ಜನಸಂಖ್ಯಾ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಇಬ್ಬರು ಮಕ್ಕಳ ನಿಯಮವನ್ನು ಕಡ್ಡಾಯಗೊಳಿಸಲಾಗುವುದು. ಆದರೆ, ಪರಿಶಿಷ್ಟ  ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಚಹಾ ಬುಡಕಟ್ಟು ಜನಾಂಗದವರಿಗೆ ಎರಡು ಮಕ್ಕಳ ಮಾನದಂಡಗಳಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಲಾಭ ಪಡೆಯಲು ವಿನಾಯಿತಿ ನೀಡಲಾಗುತ್ತದೆ ಎಂದು ಹೇಳಿದರು. 

ಸರ್ಕಾರಿ ಉದ್ಯೋಗಗಳಿಗೆ ಅರ್ಹರಲ್ಲ
"ಅಸ್ಸಾಂನ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ" ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳು ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗುವುದಿಲ್ಲ ಮತ್ತು ಅವರು ಪಂಚಾಯತ್ ಮತ್ತು ನಾಗರಿಕ ಸಂಸ್ಥೆಗಳ ಸದಸ್ಯರಾಗಲೂ ಸಾಧ್ಯವಿಲ್ಲ. ಅಂತಹ ಕುಟುಂಬಗಳನ್ನು ಸರ್ಕಾರದ ಯೋಜನೆಗಳ  ಅಡಿಯಲ್ಲಿ ವಿವಿಧ ಪ್ರಯೋಜನಗಳಿಗಾಗಿ ಪರಿಗಣಿಸಲಾಗುವುದಿಲ್ಲ. ಈ ನೀತಿ ಜನವರಿ 1 ರಿಂದ ಜಾರಿಗೆ ಬಂದಿದೆ.

ಕಳೆದ ವಾರ, ಸಣ್ಣ ಕುಟುಂಬಗಳನ್ನು ಹೊಂದುವಂತೆ ಅಸ್ಸಾಂಗೆ ವಲಸೆ ಬಂದ ಮುಸ್ಲಿಮರಿಗೆ ಶರ್ಮಾ ಮನವಿ ಮಾಡಿದ್ದರು. ರಾಜ್ಯದ ಜನಸಂಖ್ಯೆಯು ನಿರಂತರವಾಗಿ ಸ್ಫೋಟಗೊಳ್ಳುತ್ತಿದ್ದರೆ, ವಾಸಿಸಲು ಸ್ಥಳಾವಕಾಶದ ಬಗ್ಗೆ ಘರ್ಷಣೆಗಳು ಉಂಟಾಗುತ್ತವೆ ಮತ್ತು ಕಾಮಾಕ್ಯ ದೇವಸ್ಥಾನ ಜಾಗ ಅತಿಕ್ರಮಣ ಮತ್ತು  ಭೂಮಿ ಒತ್ತುವರಿ ತೆರವು ಮಾಡುವಂತೆ ಎಚ್ಚರಿಸಿದ್ದರು. 

ಟಿಎಫ್‌ಆರ್ ಕುಸಿತ: ಕಾಂಗ್ರೆಸ್ 
ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೈಗೊಂಡ ಮತ್ತು 2020 ರ ಡಿಸೆಂಬರ್‌ನಲ್ಲಿ ಬಿಡುಗಡೆಯಾದ ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಡೇಟಾವನ್ನು ಹಂಚಿಕೊಂಡಿದ್ದ ಕಾಂಗ್ರೆಸ್ ಪಕ್ಷ, ಕಳೆದ ಐದು ವರ್ಷಗಳಲ್ಲಿ ಹೆಚ್ಚಿನ ಭಾರತೀಯ ರಾಜ್ಯಗಳಲ್ಲಿ ಒಟ್ಟು ಫಲವತ್ತತೆ  ಪ್ರಮಾಣ (ಟಿಎಫ್‌ಆರ್) ಕುಸಿದಿದೆ ಎಂದು ಹೇಳಿದೆ. 

ಅದೇ ಸಮೀಕ್ಷೆಯ ಪ್ರಕಾರ, ಅಸ್ಸಾಂನಲ್ಲಿ ಮಹಿಳೆಯರ ಫಲವತ್ತತೆ ಪ್ರಮಾಣವು 2015-16ರಲ್ಲಿ 2.2 ರಿಂದ 2020-21ರಲ್ಲಿ 1.9 ಕ್ಕೆ ಇಳಿದಿದೆ ಮತ್ತು 1.9 2.1 ಕ್ಕಿಂತ ಕಡಿಮೆಯಾಗಿದೆ, ಅಂದರೆ ಅಸ್ಸಾಂನ ಭವಿಷ್ಯದ ಜನಸಂಖ್ಯೆಯು ಪ್ರಸ್ತುತ ಜನಸಂಖ್ಯೆಗಿಂತ ಕಡಿಮೆಯಿರುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಟಿಎಫ್ಆರ್ ಅನ್ನು ಹೆರಿಗೆ ಮಾಡುವುದನ್ನು ಕೊನೆಗೊಳಿಸುವ ಹೊತ್ತಿಗೆ ಮಹಿಳೆಗೆ ಜನಿಸುವ ಸರಾಸರಿ ಮಕ್ಕಳ ಸಂಖ್ಯೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

CM ಕುರ್ಚಿಗಾಗಿ ಬಣ ಬಡಿದಾಟ: ಸಿದ್ದರಾಮಯ್ಯ vs ಡಿಕೆಶಿ 'ಹೈಡ್ರಾಮ' ಈಗ ದೆಹಲಿಗೆ ಶಿಫ್ಟ್; ಎಲ್ಲರ ಚಿತ್ತ ಹೈಕಮಾಂಡ್ ನತ್ತ!

ಅಸ್ಸಾಂ ವಿಧಾನಸಭೆಯಲ್ಲಿ ಬಹುಪತ್ನಿತ್ವ ನಿಷೇಧ ಮಸೂದೆ ಅಂಗೀಕಾರ; ಬುಡಕಟ್ಟು ಜನಾಂಗಕ್ಕೆ ವಿನಾಯಿತಿ

ಹವಾಯಿ ದ್ವೀಪದಲ್ಲಿ ಮತ್ತೆ ಸ್ಫೋಟಿಸಿದ ಜ್ವಾಲಾಮುಖಿ: ಬರೊಬ್ಬರಿ 400 ಅಡಿ ಎತರಕ್ಕೆ ಚಿಮ್ಮಿದ ಲಾವಾರಸ, ರಣರೋಚಕ ವಿಡಿಯೋ

'ಸಿಎಂ ಸ್ಥಾನದಿಂದ ಸಿದ್ದರಾಮಯ್ಯರ ಕೆಳಗಿಳಿಸಿದರೆ ನಿಮಗೇ ಅಪಾಯ': ಕಾಂಗ್ರೆಸ್ ಗೆ ಅಹಿಂದ ಸಮುದಾಯಗಳ ಖಡಕ್ ಎಚ್ಚರಿಕೆ

SCROLL FOR NEXT