ಆರ್ ಕೆ ಎಸ್ ಬದೌರಿಯಾ 
ದೇಶ

ಚೀನಾದೊಂದಿಗೆ ಮುಂದಿನ ಕಮಾಂಡರ್ ಮಟ್ಟದ ಮಾತುಕತೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ: ವಾಯುಪಡೆ ಮುಖ್ಯಸ್ಥ 

ಪೂರ್ವ ಲಡಾಕ್ ನ ಸ್ಥಿತಿಗತಿಗೆ ಸಂಬಂಧಿಸಿದಂತೆ ಚೀನಾ ಜೊತೆ ಮತ್ತೊಂದು ಸುತ್ತಿನ ಮಾತುಕತೆ ಏರ್ಪಡುವ ಸಾಧ್ಯತೆಯಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಮಾರ್ಷಲ್ ಆರ್ ಕೆಎಸ್ ಬದೌರಿಯಾ ಹೇಳಿದ್ದಾರೆ.

ನವದೆಹಲಿ: ಪೂರ್ವ ಲಡಾಕ್ ನ ಸ್ಥಿತಿಗತಿಗೆ ಸಂಬಂಧಿಸಿದಂತೆ ಚೀನಾ ಜೊತೆ ಮತ್ತೊಂದು ಸುತ್ತಿನ ಮಾತುಕತೆ ಏರ್ಪಡುವ ಸಾಧ್ಯತೆಯಿದೆ ಎಂದು ಹೇಳಿರುವ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಮಾರ್ಷಲ್ ಆರ್ ಕೆಎಸ್ ಬದೌರಿಯಾ, ಮುಂದಿನ ಸುತ್ತಿನ ಮಾತುಕತೆ ನಡೆಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಮುಂದಿನ ಕಮಾಂಡರ್ ಸುತ್ತಿನ ಮಾತುಕತೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸೇನೆ ನಿಯೋಜನೆ ಅಥವಾ ಭಾರತ ಮತ್ತು ಚೀನಾ ಕಡೆಯಿಂದ ಯಾವುದೇ ರೀತಿಯ ಬದಲಾವಣೆಗೆ ಸಂಬಂಧಪಟ್ಟಂತೆ ವಾಸ್ತವ ಪರಿಸ್ಥಿತಿಗಳನ್ನು ನಿಗಾವಹಿಸಲು ಭಾರತೀಯ ಪಡೆ ನಿಯಮಿತವಾಗಿ ಪರಿಸ್ಥಿತಿಗಳ ನಿಗಾವಹಿಸುತ್ತಿದೆ ಎಂದು ಕೂಡ ಹೇಳಿದ್ದಾರೆ.

ಪೂರ್ವ ಲಡಾಕ್ ನ ಪರಿಸ್ಥಿತಿ ಬಗ್ಗೆ ಮಾತನಾಡಿದ ಅವರು, ಮುಂದಿನ ಸುತ್ತಿನ ಮಾತುಕತೆಗೆ ಸಿದ್ಧತೆ ನಡೆಯುತ್ತಿದೆ. ಕಮಾಂಡರ್ ಮಟ್ಟದ ಮಾತುಕತೆಗೆ ಪ್ರಸ್ತಾವನೆಯಿದ್ದು ಸದ್ಯದಲ್ಲಿಯೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಮೊದಲ ಪ್ರಯತ್ನವೆಂದರೆ ಮಾತುಕತೆಗಳನ್ನು ಮುಂದುವರಿಸುವುದು ಮತ್ತು ಪೂರ್ವ ಲಡಾಕ್ ನಲ್ಲಿ ಸೇನೆ ಹಿಂಪಡೆಯುವ ಪ್ರಯತ್ನ ಮಾಡಿ ಸಮಸ್ಯೆ ಬಗೆಹರಿಸಲು ನೋಡುವುದು ಭಾರತದ ಉದ್ದೇಶವಾಗಿದೆ. ಅದಕ್ಕೆ ಸಮಾನಾಂತರವಾಗಿ, ಪ್ರಸ್ತುತ ಉಳಿದಿರುವ ಸ್ಥಳಗಳು, ನಿಯೋಜನೆಗಳು ಅಥವಾ ಯಾವುದೇ ಬದಲಾವಣೆಗಳ ವಿಷಯದಲ್ಲಿ ನೆಲದ ವಾಸ್ತವತೆಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ನಮ್ಮ ಭಾಗಗಳಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ನಾವು ತೆಗೆದುಕೊಳ್ಳುತ್ತಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT